ಬಳ್ಳಾರಿ ಜೂನ್ 20: ಬಳ್ಳಾರಿ ಜಿಲ್ಲಾ ಹಾಗೂ ಬಳ್ಳಾರಿ ತಾಲ್ಲೂಕಿನ ಪ್ರಮುಖ ಬೆಳೆಯು ಜೋಳವಾಗಿದ್ದು, ಸದರಿ ಜೋಳವು ಡಿಸೆಂಬರ್ ಅಥವಾ ಜನವರಿಯಲ್ಲಿ ಕಟಾವುಗೊಂಡು ರೈತರು ತಾವುಗಳು ಬೆಳದಿರುವ ಬೆಳೆಗಳನ್ನು ಮನೆಯ ಮುಂದುಗಡೆ ಹಾಕಿಕೊಂಡಿರುತ್ತಾರೆ. ಅದು ಅಲ್ಲದೇ, ಹಿಂಗಾರು ಬೆಳೆ ಪ್ರಾರಂಭಗೊಂಡಲ್ಲಿ ರೈತರು ಬೆಳೆದಿರುವ ಬೆಳೆಯು ಸಂಪೂರ್ಣ ನಷ್ಟ ಉಂಟಾಗುತ್ತದೆ. ಹಾಗೂ ಸದರಿ ಒಂದೇ ಬೆಳೆಯನ್ನು ಬೆಳೆದು ಸಾಕಷ್ಟು ಹಣವನ್ನು ವ್ಯಯ ಮಾಡಿ, ರೈತರು ಸಂಕಷ್ಟದಲ್ಲಿರುತ್ತಾರೆ. ಇಂತಹ ಸ್ಥಿತಿಯಲ್ಲಿ ಇನ್ನೂ ಖರೀದಿ ಕೇಂದ್ರದಲ್ಲಿ ಜೋಳ ಚಿಂತಲ್ ಮಾಡಿ ಮಾಡಿ, ಜೋಳವನ್ನು ಗೋದಾಮಿಗೆ ಸಾಗಿಸಬೇಕೆಂದು ಕನ್ನಡ ನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮೆಣಸಿನ ಈಶ್ವರಪ್ಪ ಬತ್ತಾಯಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ,
ಇದೇ ತಿಂಗಳ 30ರಂದು ಜೋಳವನ್ನು ತೆಗೆದುಕೊಳ್ಳುವುದನ್ನು ತಡೆಹಿಡಿಯುವುದಾಗಿ ಹೇಳಿರುತ್ತಾರೆ. ಆದುದರಿಂದ ಈ ಆದೇಶವನ್ನು ರದ್ದು ಮಾಡಬೇಕೆಂದು ಮತ್ತು ಅದನ್ನು ಇನ್ನೂ ಒಂದು ತಿಂಗಳ ಕಾಲ ವಿಸ್ತರಿಸಬೇಕೆಂದರು.






