


29th October 2025
ಬಳ್ಳಾರಿ : ಜಿಲ್ಲೆಯಲ್ಲಿ ಪರವಾನಿಗೆ ಪಡೆಯದೇ ಅನಧಿಕೃತವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಬುಧವಾರ, ನಗರದ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ಅಧೀನದ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ವಾಣಿಜ್ಯ ಮಳಿಗೆಗಳಲ್ಲಿ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಸರ್ಕಾರದ ಮಾನದಂಡಗಳಡಿ ಪರವಾನಿಗೆ ನೀಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ಘೋಷಿಸಿ ತ್ವರಿತವಾಗಿ ಟಿಒಎಫ್ಇಐ ಆಪ್ ನಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಶಾಲಾ-ಕಾಲೇಜು ಮಕ್ಕಳು ಒಂದು ಬಾರಿ ತಂಬಾಕು ಉತ್ಪನ್ನಗಳಿಗೆ ದಾಸರಾದರೆ, ಅದರಿಂದ ಹೊರಬರುವುದು ಕಷ್ಟಕರ. ಹಾಗಾಗಿ ಅಧಿಕಾರಿಗಳು ಹೆಚ್ಚಾಗಿ ಶಾಲಾ-ಕಾಲೇಜುಗಳಲ್ಲಿ, ಗ್ರಾಮೀಣ ಕ್ಷೇತ್ರಗಳಲ್ಲಿ ಮತ್ತು ಸಮುದಾಯಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಕಡ್ಡಾಯವಾಗಿ ಧೂಮಪಾನ ವಲಯ ಸ್ಥಾಪಿಸಿ, ಅವುಗಳ ಉಪಯೋಗ, ಕ್ರಮಬದ್ಧತೆ ಕುರಿತು ಅಬಕಾರಿ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿರಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆ ಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಕ್ರಮವಹಿಸಬೇಕು. ನಿಲ್ದಾಣ ಅಂದಗೆಡಿಸುವ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವಿಸಿ, ಎಲ್ಲೆಂದರಲ್ಲಿ ಉಗುಳುವವರ ಮೇಲೆ ದಂಡ ವಿಧಿಸಬೇಕು ಎಂದು ಕಕರಾರಸಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ 2025ರ ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಒಟ್ಟು 617 ಕ್ಷಯರೋಗಿಗಳಲ್ಲಿ 86 ತಂಬಾಕು ವ್ಯಸನಿಗಳಾಗಿದ್ದು, ಎಲ್ಲರನ್ನು ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ತಂಬಾಕು ವ್ಯಸನದಿಂದ ಮುಕ್ತರಾಗಿ ಬರುವ ವ್ಯಕ್ತಿಗಳಿಂದ ಅದರಿಂದಾಗುವ ಪರಿಣಾಮ ಕುರಿತು ಸಾರ್ವಜನಿಕರಿಗೆ ತಿಳಿಯಪಡಿಸಲು ಮತ್ತು ಅದರ ಜೊತೆಗೆ ಅಧಿಕಾರಿಗಳ ನಿರ್ದೇಶನ ಒಳಗೊಂಡ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಅಧಿಕಾರಿಗಳು ಹೆಚ್ಚಾಗಿ ಕ್ಷೇತ್ರ ಮಟ್ಟದಲ್ಲಿ ಸಂಚರಿಸಿದಾಗ ಮಾತ್ರ ತಂಬಾಕು ಬಳಕೆ ಮೇಲೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳಿಗೆ ಹೇಳಿದರು.
ಇದೇ ವೇಳೆ ಜಿಲ್ಲೆಯಲ್ಲಿ ಡಿ.06 ರ ವರೆಗೆ ನಡೆಯುವ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಗೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
-----------------

27th October 2025
ಬಳ್ಳಾರಿ : ತಾಲೂಕಿನ ಕಕ್ಕ ಬೇವಿನಹಳ್ಳಿ ಗ್ರಾಮದಲ್ಲಿ ವಾಸಿಸುವ ಮುತ್ತುರಾಜ್ ಗೆಳೆಯರ ಬಳಗದ ತಿಪ್ಪೇಶ್ ಎಂಬ ಯುವಕ ಡಾ.ಪುನೀತ್ ರಾಜಕುಮಾರ್ ಅವರನ್ನು ಕೇವಲ ಚಲನಚಿತ್ರ ನಟರಷ್ಟೇ ಅಲ್ಲ,ಆರಾಧ್ಯ ದೈವವೆಂದೇ ಭಾವಿಸಿ ದಿನನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ.
ತಮ್ಮ ಮನೆಯ ದೇವರ ಕೋಣೆಯಲ್ಲೇ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಗೌರವದಿಂದ ಪ್ರತಿಷ್ಠಾಪಿಸಿಕೊಂಡಿರುವ ಅವರು ಪ್ರತಿದಿನ ಬೆಳಿಗ್ಗೆ ಧೂಪ,ಹೂವು,ನೈವೇದ್ಯದೊಂದಿಗೆ ಪೂಜೆ ಸಲ್ಲಿಸುತ್ತಾರೆ.ವಿಶೇಷ ಹಬ್ಬಗಳು,ಪುನೀತ್ ರಾಜಕುಮಾರ ಅವರ ಹುಟ್ಟುಹಬ್ಬ ಅಥವಾ ಅವರ ಸ್ಮರಣಾರ್ಥ ದಿನಗಳಲ್ಲಿ ತಿಪ್ಪೇಶ್ ಅವರು ತಮ್ಮ ಕುಟುಂಬದವರೊಂದಿಗೆ ವಿಶೇಷ ಆರತಿಯನ್ನು ನಡೆಸುತ್ತಾರೆ.
“ಪುನೀತ್ ಸರ್ ದೇವರಂತ ಒಳ್ಳೆಯವರು. ಅವರು ಹೇಳಿದ ದಾರಿಯಲ್ಲಿ ನಡೆದರೆ ಎಲ್ಲರ ಜೀವನವೂ ಸರಿಯಾದ ದಿಕ್ಕಿನಲ್ಲಿ ಸಾಗುತ್ತದೆ.ಅವರ ಮಾತುಗಳು, ನಡೆ-ನುಡಿಗಳು,ಮಾನವೀಯತೆ ನನಗೆ ನಿತ್ಯ ಪ್ರೇರಣೆ,” ಎಂದು ತಿಪ್ಪೇಶ್ ಭಾವೋದ್ರಿಕ್ತವಾಗಿ ಹೇಳಿದ್ದಾರೆ.
ತಿಪ್ಪೇಶ್ ಅವರ ಪ್ರಕಾರ,ಪುನೀತ್ ಸರ್ ಜನಸೇವೆ, ಬಡವರಿಗಿದ್ದ ಕಾಳಜಿ ಹಾಗೂ ಸರಳ ಜೀವನ ಶೈಲಿ ಎಲ್ಲರಿಗೂ ಮಾದರಿ.
ಅವರು ತಮ್ಮ ಜೀವನದಲ್ಲಿ ಯಾವುದೇ ಕಷ್ಟ ಬಂದರೂ “ಅಪ್ಪು ಸರ್ ಮುಖ ನೆನಪಾದರೆ ಧೈರ್ಯ ಬರುತ್ತದೆ” ಎಂದು ಹೇಳುತ್ತಾರೆ.
ಗ್ರಾಮದವರು ಕೂಡ ತಿಪ್ಪೇಶ್ ಅವರ ಈ ನಿಸ್ವಾರ್ಥ ಅಭಿಮಾನವನ್ನು ಗೌರವದಿಂದ ನೋಡುತ್ತಾರೆ. ಕೆಲವರು ಹೇಳುವಂತೆ, “ಅವರ ಭಕ್ತಿ ನಿಜವಾದ ನಂಬಿಕೆ. ಪುನೀತ್ ಸರ್ಗಳಂತಹ ಒಳ್ಳೆಯ ವ್ಯಕ್ತಿಯನ್ನ ದೈವವಾಗಿ ಕಾಣುವುದು ಅಚ್ಚರಿಯಲ್ಲ” ಎಂದು ಗ್ರಾಮಸ್ಥರು ಹೇಳಿದ್ದಾರೆ.
ತಿಪ್ಪೇಶ್ ಅವರ ಈ ವಿಶಿಷ್ಟ ಭಕ್ತಿ ಗೆ ಹಲವಾರು ಅಭಿಮಾನಿಗಳು ಮತ್ತು ನೆಟ್ಟಿಗರು ಅವರ ನಿಷ್ಠೆಗೆ ಅಭಿನಂದನೆ ಸಲ್ಲಿಸಿದ್ದಾರೆ.

27th October 2025
ಬಳ್ಳಾರಿ, : ಇಲ್ಲಿಗೆ ಸಮೀಪದ ಇಬ್ರಾಹಿಂಪುರ ಗ್ರಾಮ ನಿವಾಸಿ ಎಚ್. ಅಂಜಿನಪ್ಪ (83) ಅವರು ತೀವ್ರ ಅನಾರೋಗ್ಯದ ಕಾರಣ ಸೋಮವಾರ ಸಂಜೆ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧುವರ್ಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಇಬ್ರಾಹಿಂಪುರ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ.
ವಿವರಗಳಿಗಾಗಿ ಎಚ್. ಹುಲುಗಣ್ಣ, ಪತ್ರಕರ್ತರು, ಮೊಬೈಲ್ ಸಂಖ್ಯೆ : 97428 15868 ಗೆ ಕರೆ ಮಾಡಿರಿ.

19th October 2025
ಬಳ್ಳಾರಿ : ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲುವುದರಿಂದ ಡೆಂಗ್ಯು ಹರಡುವ ಈಡಿಸ್ ಇಜಿಪ್ಟೆöÊ ಸೊಳ್ಳೆಯ ಸಂತತಿ ಹೆಚ್ಚಾಗುವ ಸಾಧ್ಯತೆ ಇದ್ದು, ಡೆಂಗ್ಯು ಪ್ರಕರಣಗಳು ಹೆಚ್ಚು ಕಂಡು ಬರುವುದರಿಂದ ನೀರು ನಿಲ್ಲದಂತೆ ನೋಡಿಕೊಂಡು ಡೆಂಗ್ಯೂ ಜ್ವರದÀ ಬಗ್ಗೆ ಜಾಗೃತಿವಹಿಸಿವಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಹೇಳಿದರು.
ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬ್ರೂಸ್ಪೇಟೆ ವ್ಯಾಪ್ತಿಯಲ್ಲಿ ಬರುವ ಕೋಟೆ ಪ್ರದೇಶದ 39ನೇ ವಾರ್ಡಿನಲ್ಲಿ ಡೆಂಗ್ಯೂ ಜ್ವರÀದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುತ್ತಾ ಮಾತನಾಡಿದರು.
ನೀರು ತುಂಬುವ ಪರಿಕರಣಗಳನ್ಮು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಮತ್ತು ಯಾರಿಗಾದರೂ ಒಂದೇ ದಿನಕ್ಕಿಂತ ಹೆಚ್ಚು ಬಾರಿ ಜ್ವರ ಕಂಡು ಬಂದರೆ ವೈದ್ಯರ ಬಳಿ ಪರೀಕ್ಷಿಸಿ ಅಗತ್ಯ ಚಿಕಿತ್ಸೆ ಪಡೆಯಬೇಕು. ಅದರಲ್ಲೂ ಚಿಕ್ಕ ಮಕ್ಕಳು, ಗರ್ಭಿಣಿಯರು, ವಯೋವೃದ್ದರ ಕಾಳಜಿ ತೆಗೆದುಕೊಂಡು ನಿರ್ಲಕ್ಷ ವಹಿಸಬೇಡಿ, ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.
ನಿಂತ ನೀರಿನಿಂದ ಸೊಳ್ಳೆ ಉತ್ಪತ್ತಿಯಾಗುವ ಜೊತೆಗೆ ಡೆಂಗ್ಯೂ ಸೇರಿದಂತೆ ಸೊಳ್ಳೆಯ ಕಚ್ಚುವಿಕೆಯಿಂದ ಹರಡುವ ಚಿಕುನ್ಗುನ್ಯಾ, ಮಲೇರಿಯಾ, ಆನೇಕಾಲು ರೋಗ, ಮೆದುಳು ಜ್ವರ ಮುಂತಾದವುಗಳು ಕಂಡುಬರುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ಜ್ವರವನ್ನು ನಾವು ನಿರ್ಲಕ್ಷಿಸುತ್ತೆವೆ, ಇಂತಹ ಸಂದರ್ಭಗಳಲ್ಲಿ ಡೆಂಗ್ಯು ಸಂಬAಧಿತ ಜ್ವರವಾಗಿದ್ದರೆ ರೋಗಿಯು ಪ್ಲೇಟ್ಲೆಟ್ಸ್ಗಳ ಶೀಘ್ರ ಕುಸಿಯುವಿಕೆಯಿಂದ ಆರೋಗ್ಯ ಸಮಸ್ಯೆ ಎದುರಾಗಿ ರಕ್ತಸ್ರಾವದಂತಹ ಗಂಭಿರ ಸಮಸ್ಯೆ ಉಂಟಾಗಬಹುದು. ಯಾರಿಗಾದರೂ 3 ದಿನಗಳ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖAಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸಿದೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ಲಕ್ಷಣಗಳ ಆಧಾರದ ಮೇರೆಗೆ ಚಿಕಿತ್ಸೆ ಪಡೆಯಲು ತಿಳಿಸಿದರು.
ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡಲ ಮುಂತಾದ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ಹಾಗೂ ಮುಚ್ಚಳ ಮುಚ್ಚಿ ಬಟ್ಟೆ ಕಟ್ಟಲು, ಬಳಕೆ ಮಾಡದ ನೀರು ಸಂಗ್ರಹಕಗಳಿಗೆ ಕೊಬ್ಬರಿ ಎಣ್ಣೆಯನ್ನು ಹಾಕುವ ಮೂಲಕ ಸೊಳ್ಳೆ ಉತ್ಪತ್ತಿ ತಡೆಯಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ 39 ನೇ ವಾರ್ಡಿನ ಕಾರ್ಪೋರೇಟರ್ ಶಶಿಕಲಾ ಜಗನ್ನಾಥ, ಆಡಳಿತ ವೈದ್ಯಾಧಿಕಾರಿ ಡಾ. ಸುರೇಖ, ಎನ್.ವಿ.ಬಿ.ಡಿ.ಸಿಪಿ ಸಲಹೆಗಾರ ಪ್ರತಾಪ್, ಜಿಲ್ಲಾ ನೋಡಲ್ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ನಂದಿನಿ, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ನಾಗೇಂದ್ರಪ್ಪ, ಆರೋಗ್ಯ ನೀರಿಕ್ಷಣಾಧಿಕಾರಿಗಳಾದ ಮರಿ ಬಸವನಗೌಡ, ರವೀಂದ್ರ ಜಿನಗ, ನಾಗರಾಜ ಸೇರಿದಂತೆ ಬ್ರೂಸ್ಪೇಟೆ ಆಸ್ಪತ್ರೆಯ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
------------

19th October 2025
ಬಳ್ಳಾರಿ : ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪಿ.ಎಂ.ಸ್ವಾನಿಧಿ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ಬಂದಿರುವ ಬಡ ರಸ್ತೆಬದಿಯ ವ್ಯಾಪಾರಿಗಳಿಗೆ ತಾಂತ್ರಿಕ ಅಡೆತಡೆಗಳಿಂದ ತೀವ್ರ ತೊಂದರೆ ಉಂಟಾಗಿದೆ. ಆನ್ಲೈನ್ ಪೋರ್ಟಲ್ನಲ್ಲಿ ಲಾಗಿನ್ ಆಗುತ್ತಿಲ್ಲವೆಂಬ ಕಾರಣ ನೀಡಿ ಹಲವಾರು ದಿನಗಳಿಂದ ಅರ್ಜಿದಾರರನ್ನು ವಾಪಸ್ ಕಳುಹಿಸುತ್ತಿರುವ ಕುರಿತು ಕಾರ್ಮಿಕ ಶಕ್ತಿ ಸಂಘಟನೆಯು ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಎಸ್. ದೇವಾನಂದ ಅವರ ನೇತೃತ್ವದಲ್ಲಿ ಸಂಘಟನೆಯ ಪ್ರತಿನಿಧಿಗಳು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.
ಮನವಿಯಲ್ಲಿ ಅವರು, “ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪಿ.ಎಂ.ಸ್ವಾನಿಧಿ ಯೋಜನೆ ಯಶಸ್ವಿಯಾಗಿ ಜಾರಿಯಾಗುತ್ತಿದ್ದರೂ, ಬಳ್ಳಾರಿಯಲ್ಲಿ ಮಾತ್ರ ಕಳೆದ ಕೆಲವು ತಿಂಗಳುಗಳಿಂದ ಯೋಜನೆ ಅಸಮರ್ಪಕವಾಗಿ ನಡೆಯುತ್ತಿದೆ. ಇದರಿಂದ ಬಡ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ,” ಎಂದು ತಿಳಿಸಿದ್ದಾರೆ.
ಯೋಜನೆಯ ಉದ್ದೇಶ ಬಡ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ಒದಗಿಸುವುದಾದರೆ, ತಾಂತ್ರಿಕ ಕಾರಣಗಳಿಂದ ಅರ್ಜಿಗಳನ್ನು ಸ್ವೀಕರಿಸದಿರುವುದು ಯೋಜನೆಯ ಉದ್ದೇಶವನ್ನೇ ಹಾಳುಮಾಡುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಎಸ್. ದೇವಾನಂದ ತಿಳಿಸಿದರು.
ಈ ಸಂದರ್ಭದಲ್ಲಿ ವಿಶ್ವನಾಥ,ಹುಸೇನಪ್ಪ,ಹೊನ್ನಪ್ಪ,ಬಸಪ್ಪ, ವಿನಯ್,ರಾಜೇಶ್, ಸೇರಿದಂತೆ ಇನ್ನಿತರರಿದ್ದರು.

10th October 2025
ಬಳ್ಳಾರಿ : ಮಾನಸಿಕ ಆರೋಗ್ಯ ಕಾಪಾಡಲು ಪ್ರತಿನಿತ್ಯ ನಮ್ಮ ಕಹಿಗಳನ್ನು ನಮ್ಮ ಮೆದುಳು ಮರೆಸುತ್ತದೆ. ಮಾನಸಿಕ ಒತ್ತಡ ನಿವಾರಿಸಿಕೊಳ್ಳಲು ಸಾಮಾಜಿಕ ಸಂವಹನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಸಹಭಾಗಿತ್ವದಲ್ಲಿ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಧಿಕ ಕೆಲಸದೊತ್ತಡದಿಂದ ಮಾನಸಿಕ ಒತ್ತಡ ಹೆಚ್ಚುತ್ತಿದೆ. ಬಿಡುವಿನ ವೇಳೆಯಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಯೋಗ, ಧ್ಯಾನ, ಪ್ರಾಣಾಯಾಮದಂತಹ ಮುಂತಾದ ಚಟುವಟಿಕೆ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾನಸಿಕ ಒತ್ತಡ ಎಂಬುವುದು ದೌರ್ಬಲ್ಯ ಅಲ್ಲ. ಊಹೆ, ಅಲೋಚನೆ ಮಾಡುವುದನ್ನು ಬಿಡಬೇಕು. ಇತರರೊಂದಿಗೆ ಮಾತುಕತೆ, ಸಂವಹನದ ವಿಚಾರಗಳ ಮೂಲಕ ಮಾನಸಿಕ ಒತ್ತಡಗಳನ್ನು ತಡೆಗಟ್ಟಬಹುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಪ್ರತಿನಿತ್ಯ ಸಮಸ್ಯೆಗಳನ್ನು ಸ್ನೇಹಿತರು, ಕುಟುಂಬ ಸದಸ್ಯರೊಂದಿಗೆ ಮುಕ್ತವಾಗಿ ಚರ್ಚಿಸುವ ಮೂಲಕ ಒತ್ತಡಗಳಿಂದ ಹೊರ ಬರಬಹುದು ಎಂದು ಹೇಳಿದರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್ ಬಸರೆಡ್ಡಿ ಮಾತನಾಡಿ, ಮಾನಸಿಕವಾಗಿ ಒತ್ತಡಕ್ಕೆ ಒಳಗಾದವರು ದೈಹಿಕ, ಮಾನಸಿಕ, ಆರ್ಥಿಕ, ಸಾಮಾಜಿಕ, ಆತ್ಮಹತ್ಯೆ ಆಲೋಚನೆಗಳಿಂದ ಮನಸ್ಸನ್ನು ನಿಯಂತ್ರಣದಲ್ಲಿ ಇಡಬೇಕು. ಮಾನಸಿಕ ಆರೋಗ್ಯವು ಕುಟುಂಬದ ಅನುವಂಶಿಕತೆಯಿAದ ಸಹ ಬರುತ್ತದೆ. ಮಾನಸಿಕ ಆರೋಗ್ಯವನ್ನು ಜವಾಬ್ದಾರಿಯಿಂದ ಚಿಕಿತ್ಸೆ ನೀಡಿದರೆ ಅವರು ಗುಣಮುಖರಾಗುತ್ತಾರೆ ಎಂದು ತಿಳಿಸಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಜಿಲ್ಲಾ ಮಾನಸಿಕ ಮನೋರೋಗ ತಜ್ಞ ಡಾ.ನಂದ ಕಿಶೋರ್ ಅವರು ಮಾತನಾಡಿ, ಮಾನವನು ದೈಹಿಕ ಆರೋಗ್ಯಕ್ಕೆ ನೀಡಿದಷ್ಟು ಪ್ರಾತಿನಿಧ್ಯತೆ ಮಾನಸಿಕ ಆರೋಗ್ಯಕ್ಕೆ ನೀಡಬೇಕು. ಪಂಚೇAದ್ರಿಯಗಳಿAದ ಮೆದುಳು ಮತ್ತು ಮನಸ್ಸುನ್ನು ನಿಯಂತ್ರಣದಲ್ಲಿ ಇರಿಸಬೇಕು ಎಂದು ತಿಳಿಸಿದರು.
ಉದ್ವೇಗ, ಆಲೋಚನೆ ಮಾನಸಿಕ ಸ್ವಸ್ತತೆಗೆ ಕಾರಣವಾಗುತ್ತವೆ. ವ್ಯಕ್ತಿತ್ವ ಬದಲಾವಣೆ ಮತ್ತು ಬೆಳವಣಿಗೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಕೆಲಸದ ಸ್ಥಳ ಮತ್ತು ಕೌಟುಂಬಿಕ ಒಡನಾಟದಲ್ಲಿ ಸ್ಮಾಟ್ಫೋðನ್ಗಳು ಸದ್ದಿಲ್ಲದೆ ಮನುಷ್ಯರ ಮೇಲೆ ಒತ್ತಡ ಹೆಚ್ಚಿಸುತ್ತಿವೆ. ವಾರಕ್ಕೊಂದು ದಿನ ಮೊಬೈಲ್ ಬಳಕೆ ನಿಲ್ಲಿಸಿದಲ್ಲಿ ಮಾನಸಿಕ ಆರೋಗ್ಯ ಸುಧಾರಣೆಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ವೀರೇಂದ್ರ ಕುಮಾರ್ ಮಾತನಾಡಿ, 25-30 ಪ್ರತಿಶತ ಜನ ದೇಶದಲ್ಲಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದಾರೆ. 15-25 ವಯೋಮಾನದವರಲ್ಲೇ ಈ ವ್ಯಾದಿ ಹೆಚ್ಚು. ಇದರಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಗಟ್ಟಲು ಟೆಲಿ ಸಹಾಯವಾಣಿ 14416 ಪ್ರಾರಂಭಿಸಿದೆ. ಸಹಾಯವಾಣಿಯು 24 ಗಂಟೆ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.
ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ದೂಪಂ ಸತೀಶ್ ಮಾತನಾಡಿ ಮಾನಸಿಕ ಆರೋಗ್ಯ ಹಿಡಿತದಿಂದ ಒತ್ತಡಗಳನ್ನು ನಿವಾರಣೆ ಮಾಡಬೇಕು. ಮಕ್ಕಳಿಗೆ ಮಾನಸಿಕ ಆರೋಗ್ಯದ ಮತ್ತು ಅವುಗಳ ಕುರಿತ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡುವ ಉದ್ದೇಶವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿದ್ಯಾಲಯದ ಸಂಯೋಜಕ ಡಾ.ಸೈಯದಾ.ಕೆ.ತನ್ವೇರ್ ಫಾತಿಮ ಸೇರಿದಂತೆ ವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

6th October 2025
ಬಳ್ಳಾರಿ : ಎರಡು ವರ್ಷದೊಳಗಿನ ಮಕ್ಕಳಿಗೆ ಯಾವುದೇ ಕೆಮ್ಮಿನ ಸೀರಪ್ ನೀಡಬಾರದು ಹಾಗೂ 2 ರಿಂದ 5 ವರ್ಷದೊಳಗಿನ ಮಕ್ಕಳಿಗೆ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಕೆಮ್ಮಿನ ಔಷಧಿಗಳನ್ನು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ನಿವಾರಣೆಗಾಗಿ ನೀಡಿದ ಕೋಲ್ಡಿçÃಫ್ ಸೀರಫ್ ಸೇವನೆಯಿಂದ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಮಕ್ಕಳು ಮೃತಪಟ್ಟ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಬಳ್ಳಾರಿ ಜಿಲ್ಲೆಯಲ್ಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಈ ಔಷಧಿ ಕುರಿತು ನಿಗಾವಹಿಸುವಂತೆ ಮತ್ತು ಔಷಧಿ ಅಂಗಡಿಗಳ ಮಾರಾಟಗಾರರು ತಮ್ಮ ಬಳಿ ಇದ್ದಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸಬೇಕು ಎಂದು ಔಷಧ ಆಡಳಿತ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಪಂ ಸಿಇಒ ಅವರು ಸೂಚಿಸಿದ್ದಾರೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಈ ದಿಶೆಯಲ್ಲಿ ತೀವ್ರ ನಿಗಾವಹಿಸಲು ನೀಡಿರುವ ನಿರ್ದೇಶನ ಮತ್ತು ಸರ್ಕಾರದ ಆದೇಶದಂತೆ ಸೆಕ್ಷನ್ 26(ಎ) ನ ಡ್ರಗ್ ಮತ್ತು ಕಾಸ್ಮೇಟಿಕ್ಸ್ ಆಕ್ಟ್ 1940 ( 23 ಆಪ್ 1940 ) ರ ಅನ್ವಯ 04 ವರ್ಷದೊಳಗಿನ ಮಕ್ಕಳಿಗೆ ಕ್ಲೋರೊಫೆನಿರಮೈನ್ ಮಲೇಟ್ ಹಾಗೂ ಫಿನೈಲ್ಫ್ರೀನೆ ಹೈಡ್ರೋಕ್ಲೋರೈಡ್ ಸಂಯೊಜಿತ ಸೀರಫ್ನ್ನು ನೀಡದಂತೆ ಹಾಗೂ ವಿತರಿಸದಂತೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಹಾಗಾಗಿ ಸಾರ್ವಜನಿಕರು ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಕೆಮ್ಮಿನ ಔಷಧಿಗಳನ್ನು ಬಳಸಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕೋಲ್ಡಿçÃಫ್ ಸೀರಫ್ ಔಷಧಿ ಸರಬರಾಜು ಆಗಿರುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಕೆಮ್ಮಿನ ಸೀರಫ್ ಕುರಿತು ಇಲಾಖೆಯ ಸಿಬ್ಬಂದಿಯವರಿAದ ಸಾರ್ವಜನಿಕರಿಗೆ ಜಿಲ್ಲೆಯಾದ್ಯಂತ ಜಾಗೃತಿ ನೀಡಲಾಗುತ್ತಿದ್ದು, ಆಸ್ಪತ್ರೆಗೆ ಬರುವ ಸಾರ್ವಜನಿಕರು ವೈದ್ಯರು ತಿಳಿಸುವ ಸಲಹೆಗಳಂತೆ ಔಷಧಿಗಳನ್ನು ಬಳಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು ವಿನಂತಿಸಿದ್ದಾರೆ.
-------------

28th September 2025
ಬಳ್ಳಾರಿ : ನಗರದ ಕಾಳಮ್ಮ ಬೀದಿಯಲ್ಲಿರುವ ಶ್ರೀ ಕಾಳಿಕಾಕಮಠೇಶ್ವರ ದೇವಾಲಯದ ಭವನದಲ್ಲಿ ವಿಶ್ವಕರ್ಮ ಮಹಾ ಒಕ್ಕೂಟ (ರಿ) ಬೆಂಗಳೂರು ಆಶ್ರಯದಲ್ಲಿ ಬಳ್ಳಾರಿ ಘಟಕದ ಮಹತ್ವದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ಮಹಿಳಾ ವಿಭಾಗದ ನೂತನ ಜಿಲ್ಲಾಧ್ಯಕ್ಷರಾಗಿ ತ್ರಿವೇಣಿ ಪತ್ತರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ವಿಜಯಕುಮಾರ್ ಪತ್ತಾರ್ ಅವರು ನೂತನ ಜಿಲ್ಲಾಧ್ಯಕ್ಷೆಗೆ ಆದೇಶ ಪತ್ರ ಹಸ್ತಾಂತರಿಸಿ ಸನ್ಮಾನಿಸಿದರು, ಹಾಗೂ ಭವಿಷ್ಯದಲ್ಲಿ ಸಂಘಟನೆಯ ಮಹಿಳಾ ಚಟುವಟಿಕೆಗಳನ್ನು ಹೆಚ್ಚು ಪ್ರಬಲವಾಗಿ ನಡೆಸುವ ಜವಾಬ್ದಾರಿಯನ್ನು ಅವರಿಗೆ ನೀಡಿದರು.
ತ್ರಿವೇಣಿ ಪತ್ತರ್ ಅವರು ತಮ್ಮ ಸ್ವಾಗತ ಭಾಷಣದಲ್ಲಿ, “ಮಹಿಳಾ ಭಾಗವಹಿಸುವಿಕೆ ಮತ್ತು ಸಶಕ್ತೀಕರಣವು ಸಂಘಟನೆಯ ಪ್ರಮುಖ ಉದ್ದೇಶ. ಬಳ್ಳಾರಿ ಜಿಲ್ಲೆಯಲ್ಲಿ ಮಹಿಳಾ ಕಾರ್ಯಕರ್ತರ ಜಾಗೃತಿ ಮತ್ತು ಸಂಘಟನೆಯ ಬೆಳವಣಿಗೆಗೆ ನನ್ನ ಸಂಪೂರ್ಣ ಪ್ರಯತ್ನ ಇರಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು ಹಾಗೂ ಗಣ್ಯರು ಭಾಗವಹಿಸಿ ನೂತನ ಅಧ್ಯಕ್ಷೆಯನ್ನು ಅಭಿನಂದಿಸಿದರು. ಸಂಘಟನೆಯ ಮಹಿಳಾ ವಿಭಾಗ ವಿಶೇಷವಾಗಿ ಮಹಿಳಾ ಸಬಲೀಕರಣ, ಶೈಕ್ಷಣಿಕ ಸಹಾಯ, ಹಾಗೂ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಯೋಜನೆ ರೂಪಿಸುತ್ತಿದ್ದು, ತ್ರಿವೇಣಿ ಪತ್ತರ್ ಅವರ ನೇತೃತ್ವದಲ್ಲಿ ಈ ಕಾರ್ಯಗಳು ಜಾಗೃತಿಯಿಂದ ಮುಂದುವರಿಯಲಿದೆ.
ವಿಶ್ವಕರ್ಮ ಮಹಾ ಒಕ್ಕೂಟವು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಮೂಲಕ ಸಾಮಾಜಿಕ ಶ್ರೇಷ್ಟತೆಯನ್ನು ಸಾಧಿಸುವ ಉದ್ದೇಶವನ್ನು ಹೊಂದಿದೆ. ಬಳ್ಳಾರಿ ಘಟಕದ ಈ ನೂತನ ನೇಮಕಾತಿ, ಸ್ಥಳೀಯ ಮಹಿಳಾ ಶಕ್ತಿ ಮತ್ತು ಸಂಘಟನೆಯ ವಿಸ್ತಾರವನ್ನು ಹೊಸ ಮಟ್ಟಕ್ಕೆ ಎತ್ತಲಿದೆ ಎಂಬ ನಿರೀಕ್ಷೆಯನ್ನು ಹೊಂದಲಾಗಿದೆ ಎಂದರು.

28th September 2025
ಬಳ್ಳಾರಿ :ನಗರ ಕಾಳಮ್ಮ ಬೀದಿಯ ಶ್ರೀ ಕಾಳಿಕಾಕಮಠೇಶ್ವರ ದೇವಸ್ಥಾನದ ಭವನದಲ್ಲಿ ವಿಶ್ವಕರ್ಮ ಮಹಾ ಒಕ್ಕೂಟ (ರಿ) ಬೆಂಗಳೂರು ಆಶ್ರಯದಲ್ಲಿ ವಿಶೇಷ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪ್ರಕಾಶ್ ಪತ್ತರ್ ಅವರನ್ನು ಸಂಘಟನೆಯ ಕಾನೂನು ಸಲಹೆಗಾರರಾಗಿ ಆಯ್ಕೆಮಾಡಿ ಗೌರವಿಸಲಾಯಿತು. ರಾಜ್ಯಾಧ್ಯಕ್ಷ ವಿಜಯಕುಮಾರ್ ಪತ್ತಾರ್ ಅವರಿಗೆ ಆದೇಶ ಪತ್ರ ವಿತರಿಸಿ ಸನ್ಮಾನಿಸಿದರು.
ಪ್ರಕಾಶ್ ಪತ್ತರ್ ತಮ್ಮ ಭಾಷಣದಲ್ಲಿ, “ನನ್ನ ಕಾನೂನು ಜ್ಞಾನ ಮತ್ತು ವೃತ್ತಿಪರ ಅನುಭವವನ್ನು ಸಂಘಟನೆಯ ಅಭಿವೃದ್ಧಿ, ಸದಸ್ಯರ ಹಿತಚಿಂತನ ಮತ್ತು ಸಂಘಟನೆಯ ಉದ್ದೇಶಗಳ ನೆರವಿಗೆ ಸಮರ್ಪಿಸುತ್ತೇನೆ” ಎಂದು ಹೇಳಿದರು. ಅವರು ಕಾನೂನು ಸಲಹೆಗಾರರಾಗಿ ಸಂಘಟನೆಯ ಎಲ್ಲಾ ಹಿತಾಸಕ್ತಿಗಳ ಮೇಲ್ವಿಚಾರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಭರವಸೆ ನೀಡಿದ್ದಾರೆ.
ಸ್ಥಳೀಯ ಮತ್ತು ಜಿಲ್ಲಾ ಶಾಖಾ ಸದಸ್ಯರು ಈ ಆಯ್ಕೆಯನ್ನು ಸಂತೋಷದಿಂದ ಸ್ವಾಗತಿಸಿದರು. “ಪ್ರಕಾಶ್ ಪತ್ತರ್ ಅವರ ಪ್ರಾಮಾಣಿಕತೆ, ಕಾನೂನು ಅರಿವು ಮತ್ತು ನಿರ್ವಹಣಾ ನಿಪುಣತೆ ಸಂಘಟನೆಯ ಕಾನೂನು ಕಾರ್ಯಗಳನ್ನು ಬಲಪಡಿಸುತ್ತದೆ. ಅವರ ಮಾರ್ಗದರ್ಶನದಿಂದ ಸಂಘಟನೆಯ ಎಲ್ಲಾ ಸದಸ್ಯರು ತಮ್ಮ ಹಿತಾಸಕ್ತಿಗಳಿಗೆ ಕಾನೂನು ದೃಷ್ಟಿಕೋನವನ್ನು ಪಡೆಯಲಿದ್ದಾರೆ” ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶ್ವಕರ್ಮ ಮಹಾ ಒಕ್ಕೂಟವು ಉದ್ಯೋಗ, ಕಲಾ, ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಕ್ಷೇತ್ರಗಳಲ್ಲಿ ಶ್ರೇಷ್ಠ ಸೇವೆ ಸಲ್ಲಿಸುತ್ತಿರುವ ಸಂಘಟನೆ. ಈ ಸಂಸ್ಥೆಯಲ್ಲಿ ಕಾನೂನು ಸಲಹೆಗಾರರ ನೇಮಕವು ಸಂಘಟನೆಯ ಎಲ್ಲಾ ಹಿತಾಸಕ್ತಿಗಳ ಮೇಲ್ವಿಚಾರಣೆ, ನಿರ್ವಹಣೆ ಮತ್ತು ಸಂಘಟನೆಯ ನಾನಾ ಕಾನೂನು ಸಂಬಂಧಿತ ಕಾರ್ಯಗಳಲ್ಲಿ ಸೌಲಭ್ಯ ನೀಡಲಿದೆ.
ಸಮಾರಂಭದಲ್ಲಿ ಸ್ಥಳೀಯ ಮುಖಂಡರು, ಶಾಖಾ ಪ್ರತಿನಿಧಿಗಳು, ಮತ್ತು ವಿವಿಧ ವಿಭಾಗದ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮವು ಶಾಂತ, ಸಕ್ರೀಯ ವಾತಾವರಣದಲ್ಲಿ ಯಶಸ್ವಿಯಾಗಿ ಸನ್ಮಾನ ಗೊಂಡಿದ್ದು, ಸಂಘಟನೆಯ ಬಲವನ್ನು ಮತ್ತು ವೃತ್ತಿಪರ ನಿರ್ವಹಣೆಯ ಮಹತ್ವವನ್ನು ಪ್ರತಿಬಿಂಬಿಸಿದೆ.

28th September 2025
ಹೊಳಲ್ಕೆರೆ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೊಳಲ್ಕೆರೆ ತಾಲೂಕು ಸಮೀಕ್ಷೆ ಕಾರ್ಯ ಪ್ರಪ್ರಥಮವಾಗಿ ಮುಗಿಸಿದ. ಮಾದಲ ಸಮೀಕ್ಷದಾರರದ ತಿರುಮಲಾಪುರದ ಸ.ಕಿ.ಪ್ರಾ ಶಾಲೆಯ ಸಹ ಶಿಕ್ಷಕರದ ಬಸವಕುಮಾರ N C ತಾಲ್ಲೂಕು ಆಡಳಿತದಿಂದ ಅಭಿನಂದಿಸಲಾಯಿತು ಈ ಸಂದರ್ಭದಲ್ಲಿ ವಿಜಯ್ ಕುಮಾರ್ ತಹಶೀಲ್ದಾರ್ ಪ್ರದೀಪ್ ಕುಮಾರ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ BRC ಸುರೇಂದ್ರನಾಥ್ ತಾಲ್ಲೂಕು ಪಂಚಾಯಿತಿ ಮಾಜೀ ಸದಸ್ಯರಾದ ದೇವರಾಜ ಪದವೀದರ ಶಿಕ್ಷಕರ ಸ೦ಘದ ಜಿಲ್ಲಾಧ್ಯಕ್ಷರಾದ ಎ ಜಯಪ್ಪ ಸಮೀಕ್ಷಾ ಮೇಲ್ವಿಚಾರಕರಾದ CRP ರೂಪ ಮತ್ತು ಪುನಿತ್ ಕುಮಾರ್ ಹಾಗೂ ರಾಜಪ್ಪ ಹಾಜರಿದ್ದರು.