


18th January 2026
ಬಳ್ಳಾರಿ : ನಗರದ ಹಾವಂಬವಿಯಲ್ಲಿ ಪ್ಯಾಪ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಶ್ರಯದಲ್ಲಿ "ದಿ ಗ್ರೇಟ್ ಸ್ಲೀಪ್ - ಎಸ್ಕೆ ಫರ್ನಿಚರ್ಸ್" ಅಂಗಡಿಯನ್ನು ಶನಿವಾರ ಅದ್ಧೂರಿಯಾಗಿ ಉದ್ಘಾಟಿಸಲಾಯಿತು.
ಪ್ಯಾಪ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಶಂಕರರಾಮನ್ ಮತ್ತು ಜನರಲ್ ಮ್ಯಾನೇಜರ್ ರಾಜೇಶ್ ಕಾರ್ಯಕ್ರಮವನ್ನು ಆಶೀರ್ವದಿಸಿದರು. ಅಂಗಡಿ ಉದ್ಘಾಟನಾ ಸಮಾರಂಭವನ್ನು ಮಾದಕ ನೃತ್ಯದೊಂದಿಗೆ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸೆಕ್ಷವಲಿ ಕೊ ಸಿ ಗೈ ಅವರು, ಪ್ಯಾಪ್ಸ್ ಕಂಪನಿಯು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ ಹಾಸಿಗೆಗಳು ಮತ್ತು ಪೀಠೋಪಕರಣಗಳು ಜನರಿಗೆ ಗುಣಮಟ್ಟದ ನಿದ್ರೆಯನ್ನು ಒದಗಿಸುತ್ತವೆ ಎಂದು ಹೇಳಿದರು. ಗ್ರಾಹಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮ ಉತ್ಪನ್ನಗಳನ್ನು ಲಭ್ಯವಾಗುವಂತೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಪ್ಯಾಪ್ಸ್ ಡ್ರೀಮ್ ಮೇಕರ್ಸ್ ಹಾಸಿಗೆಗಳು ಮತ್ತು ಆಧುನಿಕ ವಿನ್ಯಾಸದ ಪೀಠೋಪಕರಣಗಳು ಈ ಅಂಗಡಿಯಲ್ಲಿ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುತ್ತವೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯಮಿಗಳು, ಸ್ಥಳೀಯ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿ ಮರಿ ಸ್ವಾಮಿ ಓಬಳಾಪುರಂನ ಮಾಜಿ ಸರಪಂಚ್ ವೆಂಕಟೇಸುಲು ನಲ್ಲಬಂ ದಲ ವನ್ನೂರಪ್ಪ ಅವರನ್ನು ಅಭಿನಂದಿಸಿದರು.

14th January 2026
ಬಳ್ಳಾರಿ : ನಗರದ ಬಾಪೂಜಿ ನಗರ ಸರ್ಕಲ್ನಿಂದ ಆಂದ್ರಾಳ್ ಬ್ರಿಡ್ಜ್ ವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಕೆ ಕಳಪೆ ಗುಣಮಟ್ಟದಲ್ಲಿ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ದಿನಾಂಕ 24-02-2022 ರಂದು ಆರಂಭವಾದ ಈ ಕಾಮಗಾರಿಕೆ, ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದ್ದು, ತೆರೆದ ಚರಂಡಿ ಕೆಲಸವೂ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಮಣ್ಣು ಹಾಗೂ ಕಲ್ಲು ಬಿಂಚುಗಳನ್ನು ಹಾಕಿ ಕಾಮಗಾರಿಯನ್ನು ನಿಧಾನಗತಿಯಲ್ಲೇ ನಡೆಸಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ದಿನನಿತ್ಯ ಅಪಾಯವನ್ನು ಎದುರಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಈ ರಸ್ತೆ ಕಾಮಗಾರಿಕೆ ಗುತ್ತಿಗೆದಾರ ಕೆ.ಎಂ. ಪ್ರವೀಣ್ ಕುಮಾರ್ ಅವರ ಮೂಲಕ, ಪಿಡಬ್ಲ್ಯೂಡಿ ಎಡಬ್ಲ್ಯೂ ಬಸವ ರೆಡ್ಡಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಕಾಮಗಾರಿಕೆಯ ಗುಣಮಟ್ಟ ತೀರಾ ಕಳಪೆಯಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ. ಈ ಕುರಿತು ಸ್ಥಳೀಯರು ಬಾಪೂಜಿ ನಗರ ಏಳನೇ ವಾರ್ಡಿನ ಕಾರ್ಪೊರೇಟರ್ ಉಮಾದೇವಿ ಶಿವರಾಜ್ ಅವರ ಗಮನಕ್ಕೆ ತಂದರೂ, ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗಲಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ಪ್ರದೇಶದ ಮಾಜಿ ಕಾರ್ಪೊರೇಟರ್ ನಾರಾಯಣಮ್ಮನ ಅವರ ಮಗ ಕಾಂಗ್ರೆಸ್ ಮುಖಂಡರಾದ ಬಾಪಜಿ ನಗರ್ ವೆಂಕಟೇಶ್ ಅವರು ಈ ಕುರಿತು ಪಿಡಬ್ಲ್ಯೂಡಿ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ಬೇಸತ್ತಿರುವ ಅವರು, ಸಾರ್ವಜನಿಕರ ಪರವಾಗಿ ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕಳಪೆ ಕಾಮಗಾರಿಯಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

11th January 2026
ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎ ಎಸ್ ವಸಂತ್ ಕುಮಾರ್ ಪಾಲ್ಗೊಳ್ಳಲಾಗಿತ್ತು. ಇದರ ಅಧ್ಯಕ್ಷತೆಯನ್ನು ಮಾಜಿ ಶಾಸಕರು ಹಾಗೂ ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ ಹಾಗೂ ಪರಿಶಿಷ್ಟ ಜಾತಿಯ ರಾಜ್ಯ ಅಧ್ಯಕ್ಷರಾದ ಮಾಜಿ ಶಾಸಕರು ಅನ್ನಧಾನಿ ಹಾಗೂ ರಮೇಶ್ ಗೌಡ ಉಪಸ್ಥಿತರಿದ್ದರು. ಮತ್ತು ಪಕ್ಷದ ಸಂಘಟನೆಯನ್ನು ನಿಮ್ಮ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರ ಸಮ್ಮುಖದಲ್ಲಿ ಪಕ್ಷವನ್ನು ಬಲವಾಗಿ ಕಟ್ಟಿ ಎಂದು ಸೂಚನೆ ನೀಡಲಾಯಿತು.

11th January 2026
ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಗರುಡ ನ್ಯೂಸ್ ವತಿಯಿಂದ 2026ನೇ ಸಾಲಿನ ರಾಜ್ಯಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಯನ್ನು ಶ್ರೀನಿವಾಸ ಭಂಡಾರಿ ರವರಿಗೆ ನೀಡಿ ಗೌರವಿಸಿ ಸನ್ಮಾಸಿ ಪ್ರಧಾನ ಮಾಡಲಾಯಿತು.
ಇವರು ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಕೌಲ್ ಬಜಾರ್ ವಟ್ಟಪ್ಪ ಕೇರಿ,ನಿವಾಸಿಯಾಗಿದ್ದಾರೆ.ಸಾಮಾಜಿಕ ಹೋರಾಟಗಾರರು,ಹಲವು ಸುಮಾರು ವರ್ಷಗಳಿಂದ ಸಮಾಜ ಮುಖಿ ಕೆಲಸ ಕಾರ್ಯಕ್ರಮಗಳನ್ನು ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ.ಬಡ ಜನರ ಧ್ವನಿ ಯಾಗಿದ್ದಾರೆ ಇಂತ ಹಲವು ಸೇವೆ ಸಾಧನೆ ಮಾಡಿದ್ದಾರೆ ಎಂದು ಗುರುತಿಸಿಕೊಂಡಿದ್ದಾರೆ. ಹಾಗೆ ಬಡವರ ಬಂಧು ಕೊಡುಗೈ ಎಂದು ಕರೆಯುತ್ತಾರೆ. ಇಂತ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ಹಾಗಾಗಿ ಇಂತ ಸೇವಾ ರತ್ನಗಳು ಎಲೆ ಮರಿ ಕಾಯಿ ಆಗಿ ಉಳಿಬಾರದು ಎಂದು ಅವರ ಸೇವೆ ಯನ್ನು ಗುರುತಿಸಿ.ಗರುಡ ನ್ಯೂಸ್ ರಾಜ್ಯ ಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ , ಹಾಗೆ ಆಯ್ಕೆಮಾಡಿ ರಾಜ್ಯ ಪ್ರಶಸ್ತಿಯನ್ನು ಶ್ರೀನಿವಾಸ್ ಭಂಡಾರಿಗೆ ನೀಡಿದ್ದಾರೆ.ಇನ್ನು ಹೆಚ್ಚು ಹೆಚ್ಚು ಇಂತ ಸಮಾಜ ಸೇವೆ ಕೆಲಸಗಳನ್ನು ಮಾಡಬೇಕು ಎಂದು ಗರುಡ ನ್ಯೂಸ್ ತಂಡದವರು ಹಾರೈಸಿದರು.

11th January 2026
ಬಳ್ಳಾರಿ : ಬೃಂದಾ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಬೃಂದಾ ನ್ಯಾಷನಲ್ ಕಾಲೇಜ್ ವತಿಯಿಂದ ‘ಟ್ಯಾಲೆಂಟ್ ಹಂಟ್–2026’ ಪ್ರತಿಭಾ ಶೋಧನಾ ಪರೀಕ್ಷೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಈ ಪರೀಕ್ಷೆಯ ಮುಖ್ಯ ಉದ್ದೇಶ ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸುವುದು ಆಗಿದೆ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಐದು ಟಾಪ್ ರ್ಯಾಂಕ್ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಬೃಂದಾ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಫೌಂಡರ್ ಹಾಗೂ ಸಿಇಒ ಡಾ. ಭವ್ಯಶೇಖರ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೃಂದಾ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್ ಶಿಕ್ಷಣ ಕ್ಷೇತ್ರದಲ್ಲಿ ಮಾದರಿಯಾಗುವಂತೆ ಕಾರ್ಯನಿರ್ವಹಿಸುತ್ತಿದ್ದು, ಸಮಾಜದ ಕೊನೆಯ ಸಾಲಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಧ್ಯೇಯದೊಂದಿಗೆ ನಿರಂತರ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ ಎಂದು ಹೇಳಿದರು. ಅತ್ಯಾಧುನಿಕ ಸೌಲಭ್ಯಗಳು, ಶಿಸ್ತುಬದ್ಧ ಶೈಕ್ಷಣಿಕ ವಾತಾವರಣ, ಅನುಭವೀ ಹಾಗೂ ಆಲ್ ಇಂಡಿಯಾ ಮಟ್ಟದ ಉಪನ್ಯಾಸಕರ ಮಾರ್ಗದರ್ಶನದೊಂದಿಗೆ TET, NEET, JEE, CA ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ಹಾಗೂ ಪರಿಣಾಮಕಾರಿ ತರಬೇತಿ ನೀಡುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಬದ್ಧತೆಯನ್ನು ಸ್ಪಷ್ಟಪಡಿಸುತ್ತದೆ ಎಂದರು. ಕಡಿಮೆ ಶುಲ್ಕದಲ್ಲಿ ಉನ್ನತ ಮಟ್ಟದ ಶಿಕ್ಷಣ ಒದಗಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಕನಸುಗಳನ್ನು ಸಾಕಾರಗೊಳಿಸುತ್ತಿರುವ ಬೃಂದಾ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿದೆ ಎಂಬುದು ಎಲ್ಲ ವಲಯಗಳಿಂದಲೂ ಪ್ರಶಂಸೆಗೆ ಪಾತ್ರವಾಗಿದೆ.
ಈ ಪ್ರತಿಭಾ ಶೋಧನಾ ಪರೀಕ್ಷೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದು ಸಂಸ್ಥೆಗೆ ಸಂತಸದ ವಿಷಯವಾಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳ ಪೋಷಕರು ಹಾಗೂ ವಿವಿಧ ಶಾಲೆಗಳ ಪ್ರಾಂಶುಪಾಲರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಡೈರೆಕ್ಟರ್ ಭುವನ್ ಎಂ.ಎಸ್., ಪಿಯು ಕಾಲೇಜ್ ಪ್ರಿನ್ಸಿಪಾಲ್ ಜಯವರ್ಧನ್ ಎಂ.ಎಲ್., ನರ್ಸಿಂಗ್ ಕಾಲೇಜ್ ಪ್ರಿನ್ಸಿಪಾಲ್ ಅಮರೇಶ್ ಎಚ್., ಹಾಗೂ ರಾಜಶೇಖರ್ ತಲಕಲ್ ಅವರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸಿದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಫೌಂಡರ್ ಹಾಗೂ ಸಿಇಒ ಡಾ. ಭವ್ಯಶೇಖರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

11th January 2026
ಬಳ್ಳಾರಿ : ಸಾವಿತ್ರಿಬಾಯಿ ಫುಲೆ ಜಯಂತಿಯ ಅಂಗವಾಗಿ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆ, ದುರ್ಗಮ್ಮ ಗುಡಿ ಹಿಂಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ. ಉಷಾರಾಣಿ ಅವರಿಗೆ ಅತ್ಯುತ್ತಮ ಶಿಕ್ಷಕಿ (ಶಿಕ್ಷಣ ವಿದ್ಯಾರತ್ನ) ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಇತ್ತೀಚೆಗೆ ವಿಜಯವಾಡದಲ್ಲಿ ಗುರು ಚೈತನ್ಯ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಹಿಳಾ ಶಿಕ್ಷಣದ ಪಿತಾಮಹಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಗೌರವಾರ್ಥವಾಗಿ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಈ ಗೌರವ ನೀಡಲಾಯಿತು. ಈ ವೇಳೆ ಮಾತನಾಡಿದ ಬಿ.ಸಿ. ವೆಲ್ಫೇರ್ ಪಾರ್ಟಿಯ ನಾಯಕ ರಾಮಚಂದ್ರ ಯಾದವ್, ವಿದ್ಯಾರ್ಥಿಗಳಲ್ಲಿ ಮೌಲ್ಯ, ನೈತಿಕತೆ ಮತ್ತು ಸಮಾನತೆಯ ಭಾವನೆ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದೆಯೆಂದು ಹೇಳಿದರು. ಮಹಿಳಾ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಫುಲೆ ಅವರು ಮಾಡಿದ ಸೇವೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದರು.
ಕೋವಿಡ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ತಟ್ಟೆಗಳು, ಕ್ರೀಡಾ ಕಿಟ್ಗಳು ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ ಎಂದು ಶಿಕ್ಷಕಿ ಉಷಾರಾಣಿ ತಿಳಿಸಿದರು. ಈ ಗೌರವವು ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಗುರು ಚೈತನ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಮಾಂಜನೇಯುಲು ಯಾದವ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ರಾಮ, ಕಾರ್ಯದರ್ಶಿ ಡಾ. ಶೈಲಜಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

7th January 2026
ಬಳ್ಳಾರಿ, ಜ.07: ನಮ್ಮ ಕುಟುಂಬದಲ್ಲಿ ಅವಿವಾಹಿತರು ಮೃತರಾದರೆ ಮೃತದೇಹ ಸುಡುತ್ತಾರೆ, ವಿವಾಹಿತರು ಮೃತರಾದರೆ ಹೂಳುತ್ತಾರೆ, ನಮ್ಮ ಪದ್ಧತಿ ಪ್ರಕಾರ ನಮ್ಮ ಸೋದರನ ಅಂತ್ಯ ಸಂಸ್ಕಾರ ಮಾಡಿದ್ದೇವೆ ಎಂದು ಜ.01ರ ರಾತ್ರಿ ಶೂಟೌಟಿನಲ್ಲಿ ಮೃತನಾದ ರಾಜಶೇಖರ್ ಸೋದರಿ ಉಮಾ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಆರೋಪವನ್ನು ತಳ್ಳಿ ಹಾಕಿದರು.
ಅಂತ್ಯಕ್ರಿಯೆ ಬಗ್ಗೆ ಅನುಮಾನಗಳಿವೆ ಎಂದು ಕೇಳಿದ ಮಾಧ್ಯಮದವರಿಗೆ ಉತ್ತರಿಸಿದ ಅವರು, ನಮ್ಮ ಕುಟುಂಬದ ಹಿರಿಯರು ಹೇಳಿದ ಪ್ರಕಾರ ಅಂತ್ಯಕ್ರಿಯೆ ನಡೆಸಿದ್ದೇವೆ, ನಮ್ಮ ಸೋದರನೇ ಹೊರಟು ಹೋಗಿದ್ದಾನೆ, ಅಂತ್ಯಕ್ರಿಯೆ ಬಗ್ಗೆ ಏನು ಮಾತನಾಡುವುದು ಎಂದು ಬೇಸರದಿಂದ ಉತ್ತರಿಸಿದ್ದಾರೆ.
ಹೂಳುವ ಉದ್ಧೇಶದಿಂದ ಕುಣಿ ತೆಗೆಸಿದ್ದು ನಿಜ, ಆದರೆ ಹಿರಿಯರು ಹೇಳಿದಂತೆ ನಮ್ಮ ಸೋದರನ ಮೃತದೇಹ ಸುಟ್ಟಿದ್ದೇವೆ ಎಂದು ಉಮಾ ಹೇಳಿದ್ದಾರೆ.
ನಮ್ಮ ಸೋದರ ರಾಜಶೇಖರ ಸತ್ತು ಹೋಗಿದ್ದಾನೆ, ರಾಜಕೀಯಕ್ಕೆ ಬಲಿಯಾಗಿದ್ದಾನೆ, ನಮ್ಮ ನೋವಿನಲ್ಲಿ ನಾವಿರುತ್ತೇವೆ, ಇಂತಹ ಸಂದರ್ಭದಲ್ಲಿ ಶವದ ಮೇಲೆ ರಾಜಕೀಯ ಮಾಡಬಾರದೆಂದು ಮಾಜಿ ಸಚಿವ ಶ್ರೀರಾಮುಲು ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ದಿನ ನಿತ್ಯ ಮಾಧ್ಯಮಗಳಲ್ಲಿ ನಮ್ಮ ಸೋದರನ ಸಾವಿನ ಬಗ್ಗೆ ಸುದ್ದಿ ನೋಡಿ ನಾವು ನೊಂದುಕೊಳ್ಳಬೇಕೆ? ಸುದ್ದಿ ನೋಡಿದಾಗ ನಮಗೆ ಕಿರಿಕೌರಯಾಗುತ್ತದೆ, ಇದನ್ನು ಇಲ್ಲಿಗೇ ನಿಲ್ಲಿಸಿ, ದೇವರೆಂಬುವವನು ಇದ್ದರೆ ನಮಗೆ ನ್ಯಾಯ ಕೊಡುತ್ತಾನೆ ಎಂದು ಹೇಳಿದ್ದಾರೆ.

28th December 2025
ಬಳ್ಳಾರಿ : ಮುಂಬರುವ ಫೆಬ್ರವರಿ 13, 14 ಮತ್ತು 15 ರಂದು ಗಣಿನಾಡು ಬಳ್ಳಾರಿಯಲ್ಲಿ ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ನ ರಾಷ್ಟ್ರೀಯ ಮಂಡಳಿ ಸಭೆ ನಡೆಯಲಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಛೇರಿ ಅವರಣದಲ್ಲಿರುವ ಪತ್ರಿಕಾ ಭವನದಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಳ್ಳಾರಿಯ ಇತಿಹಾಸದಲ್ಲೆ ಇದು ಐತಿಹಾಸಿಕ ಕಾರ್ಯಕ್ರಮ ಆಗಿದ್ದು, ಬಳ್ಳಾರಿಯ ಇತಿಹಾಸದಲ್ಲೇ ಹಿಂದೆಂದೂ ನಡೆಯದೆ ಪತ್ರಕರ್ತರ ರಾಷ್ಟ್ರ ಮಟ್ಟದ ಕಾರ್ಯಕ್ರಮ ಬಳ್ಳಾರಿ ನಗರದಲ್ಲಿ ನಡೆಯುತ್ತಿರುವುದು ನಮ್ಮೇಲ್ಲರ ಸೌಭಾಗ್ಯ, ನಮ್ಮೇಲ್ಲರ ಹೆಮ್ಮೆಯು ಹೌದು, ಎಂದ ಅವರು, ಮುಂಬರುವ ಫೆಬ್ರವರಿ 13, 14 ಮತ್ತು 15 ಮೂರು ದಿನಗಳ ಕಾಲ ಬಳ್ಳಾರಿ ನಗರದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸಭೆ ಹಾಗೂ ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ನ ರಾಷ್ಟ್ರೀಯ ಮಂಡಳಿ ಸಭೆ ಬಳ್ಳಾರಿಯಲ್ಲಿ ಆಯೋಜನೆ ಮಾಡಲಾಗಿದ್ದು, ದೇಶದ 15 ರಾಜ್ಯಗಳಿಂದ ಸುಮಾರು 500 ಜನ ಪತ್ರಕರ್ತರು ಅಂದು ಬಳ್ಳಾರಿಯಲ್ಲಿ ನಡೆಯುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಅದಲ್ಲದೇ, ಫೆಬ್ರವರಿ 13 ರಂದು ನಡೆಯುವ ರಾಜ್ಯ ಸಮಿತಿ ಸಭೆಗೆ ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಎಲ್ಲಾ ಜಿಲ್ಲಾಧ್ಯಕ್ಷರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಫೆಬ್ರವರಿ 13 ಮಧ್ಯಾಹ್ನ 2 ಗಂಟೆಯೊಳಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಅಂದು ಬಳ್ಳಾರಿಗೆ ಸೇರಿಕೊಳ್ಳಲಿದ್ದಾರೆ. ಅಂದು ಮದ್ಯಾಹ್ನ 3:00 ಗಂಟೆಯಿಂದ ರಾಜ್ಯ ಸಮಿತಿ ಸಭೆ ಆರಂಭವಾಗಲಿದ್ದು, ರಾತ್ರಿ 8:00 ಗಂಟೆಯ ವರೆಗೂ ನಡೆಯಲಿದೆ.
ಇನ್ನು ಫೆಬ್ರವರಿ 14 ಬೆಳಿಗ್ಗೆ 10:30 ಕ್ಕೆ ರಾಷ್ಟ್ರೀಯ ಮಂಡಳಿ ಸಭೆ ಆರಂಭವಾಗಲಿದ್ದು, ಅಂದು ಇಡೀ ದಿನ ರಾಷ್ಟ್ರೀಯ ಮಂಡಳಿ ಸಭೆ ನಡೆಯಲಿದೆ. ಬಳಿಕ ಫೆಬ್ರವರಿ 15 ರಂದು ದೇಶದ ನಾನಾ ರಾಜ್ಯಗಳಿಂದ ಬಂದಂತ ಪತ್ರಕರ್ತ ಪ್ರತಿನಿಧಿಗಳನ್ನು ಹಂಪಿ ಪ್ರವಾಸ ಕೈಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ರಾಜ್ಯದ ಹಲವಾರು ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಪತ್ರಕರ್ತರು ಕೈಜೋಡಿಸಲು ಸಂಘದ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರುಗಳಾದ ಕೆ.ಬಜಾರಪ್ಪ, ಡಾ.ಗಿರೀಶ್ ಕುಮಾರ್ ಗೌಡ, ಕುರುಗೋಡು ವೀರಭದ್ರಗೌಡ, ಪ್ರಧಾನ ಕಾರ್ಯದರ್ಶಿ ದುರುಗೇಶ್ ಯಾದವ್, ಕಾರ್ಯದರ್ಶಿ ಮೊಹ್ಮದ್ ಲುಕ್ಮನ್, ಖಜಾಂಚಿ ಪಂಪನಗೌಡ, ಸಿರುಗುಪ್ಪ ತಾಲೂಕು ಪ್ರಧಾನ ಕಾರ್ಯದರ್ಶಿ ಷಣ್ಮುಖ, ಸಿರುಗುಪ್ಪ ತಾಲೂಕು ಅಧ್ಯಕ್ಷ ಮಹೆಬೂಬ್, ಕುರುಗೋಡು ತಾಲೂಕು ಅಧ್ಯಕ್ಷ ಅಣ್ಣಯ್ಯಸ್ವಾಮಿ, ಕಂಪ್ಲಿ ತಾಲೂಕು ರಘುವೀರ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಕೇಶ್, ಬಾಬು, ಲಕ್ಷ್ಮಣ.ಎಸ್ ಭಂಡಾರಿ, ಮಹೇಶ್, ಮರಿಸ್ವಾಮಿ, ಹೇಮಂತ್, ಸುನೀಲ್, ಗಣೇಶ್ ಇನಾಂದಾರ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

14th December 2025
ಬಳ್ಳಾರಿ : ಬಳ್ಳಾರಿ ನಗರದ ಮಾರ್ಕೆಟ್ ಪ್ರದೇಶದ ತೇರು ಬೀದಿ (ಬ್ರಾಹ್ಮಣ ಸ್ಟ್ರೀಟ್)ಯಲ್ಲಿ ತಡರಾತ್ರಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಹೆಸರಾಂತ ರಾಮರಾಜ ಕಾಟನ್ ಅಂಗಡಿ, ಮುಕುಂದ ಕಾಟನ್, ಮೈಸೂರ್ ಸ್ಟುಡಿಯೋ, ಓಂ ಗಾಯತ್ರಿ ಸೇರಿದಂತೆ ಹಲವು ಬಟ್ಟೆ ಅಂಗಡಿಗಳನ್ನು ಗುರಿಯಾಗಿಸಿಕೊಂಡ ಕಳ್ಳರು, ಮಹಡಿಯ ಮೇಲ್ಭಾಗದಿಂದ ಕೆಳಗೆ ಇಳಿದು ಕೃತ್ಯ ಎಸಗಿದ್ದಾರೆ.
ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾಗಳ ಡಿವಿಆರ್ ಯಂತ್ರ ಹಾಗೂ ನಗದು ಹಣವನ್ನು ಕಳವು ಮಾಡಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸಿಸಿ ಟಿವಿ ಡಿವಿಆರ್ನ್ನೇ ಕಳವು ಮಾಡಿರುವುದರಿಂದ ಆರೋಪಿಗಳ ಪತ್ತೆಗೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಅಂಗಡಿಗಳ ಸಿಸಿ ಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.
ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿದಿದೆ. ನಗರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಂದ ವ್ಯಾಪಾರಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ರಾತ್ರಿ ಸಮಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
-

12th December 2025
ಸಿರಿಗೇರಿ : ಇತ್ತೀಚಿನ ಕಲಾವಿದರು ಸಿನಿಮಾಗಳಿಗೆ ಸೀಮಿತ ವಾಗಿದ್ದರೆ ಎನ್ನುವ ಸಂಧರ್ಭದಲ್ಲಿ ಸಾಮಾಜಿಕ ನಾಟಕಗಳು ಅದು ಗ್ರಾಮೀಣಮಟ್ಟದಲ್ಲಿ ಉತ್ತಮ ಪ್ರದರ್ಶನಗೊಳ್ಳುತ್ತೇವೆಂದರೆ ಅದಕ್ಕೆ ಕಾರಣ ಧಾತ್ರಿ ರಂಗ ಸಂಸ್ಥೆ ಮತ್ತು ನೀನಾಸಂ ಸಂಸ್ಥೆಯು ಚಟುವಟಿಕೆಗಳೇ ಮುಖ್ಯ ಕಾರಣಗಳಾಗುತ್ತವೆ. ಎಂದು ಉಪನ್ಯಾಸಕ ಸಿ.ಎಂ ಚನ್ನಬಸಯ್ಯಸ್ವಾಮಿ ತಿಳಿಸಿದರು.
ಅವರು ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಆವರಣ ರಂಗಮAದಿರದಲ್ಲಿ ಬುಧವಾರ ಮತ್ತು ಗುರುವಾರ ನೀನಾಸಂ ನಾಟಕೋತ್ಸವದ ಅವತಾರಣಂ ಬ್ರಾತ್ರಾಲಯಂ ಮತ್ತು ಹೃದಯದ ತೀರ್ಪು ಎಂಬ ನಾಟಕವನ್ನು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಬಜಾರ್ ನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಬಿ ಆರ್ ಶಿವಕುಮಾರ್ ಮಾತನಾಡಿ ಸಾಮಾಜಿಕ ನಾಟಕಗಳನ್ನು ನೋಡಿ ಪ್ರೋತ್ಸಾಹಿಸದಲ್ಲದೇ ಅವರುಗಳಿಗೆ ತನು ಮನ ಧನದಿಂದ ನೋಡಿಕೊಳ್ಳಬೇಕಾದ ಕರ್ತವ್ಯ ನಮ್ಮೆಲ್ಲರದ್ದು ಎಂದು ತಿಳಿಸಿದರು.
ನಾಟಕದ ಕಲಾವಿದರಾದ ಮಣಿಕಂಠ ಸಿರಿಗೇರಿ,ಯಶವಂತ್ ಹೊಸದುರ್ಗ,ಯೋಗೀಶ್ ಸಿದ್ದಾಪುರ,ನಿಖಿಲ್ ಪಾಟಿಲ್ ಧಾರವಾಡ,ಮಹಾಂತೇಶ್ ವಿಜಯನಗರ ಜಿಲ್ಲೆ,ಸುಶ್ಮಿತಾ ಕಾಸರಗೋಡು,ತ್ರಿಶಾ ಮಂಗಳೂರು,ರAಜನಿ ಚೆನ್ನರಾಯಪಟ್ಟಣ,ರಾಜೇಂದ್ರ ಮಂಡ್ಯ,ಚೇತನ್ ಬೆಳಗಾವಿ,ಅಶೋಕ್ ಮೈಸೂರ್,ಕೃಷ್ಣ ಬಡಿಗೇರ್ (ಸಂಗೀತ),ಫಾಜಿಲ್ ಹೆಗ್ಗೋಡು (ಬಸ್ ಸಂಚಾಲಕರು),ಗಣೇಶ್ ಭೀಮನಕೋಣೆ (ತಿರುಗಾಟದ ಸಂಚಾಲಕರು) ಅಭಿನಯಿಸಿದರು.
ಈ ಸಂದರ್ಭದಲ್ಲಿ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷರಾದ ಜೀನ್ಸ್ ಕೆ ಬಸವರಾಜ್, ವಿಶ್ವಗುರು ಬಯಲಾಟ ಟ್ರಸ್ಟಿನ ಅಧ್ಯಕ್ಷರಾದ ವೈ ಮಲ್ಲಿಕಾರ್ಜುನ, ಸುಗ್ನಳ್ಳಿ ಮಂಜುನಾಥ, ನಿನಗಾಗಿ ನಾವು ಸಂಸ್ಥೆಯ ಉಪಾಧ್ಯಕ್ಷರಾದ ಹಳ್ಳಿ ಮರದ ನಾಗರಾಜ್, ಆಲಂ ಬಾಷ, ಗಣೇಶ್ ಭೀಮನಕೋಣ, ಪುನೀತ್ ಕುಮಾರ್ ಬಿ, ವಿಜಯ ಕುಮಾರ್ ಇದ್ದರು.