



22nd April 2026
ಬಳ್ಳಾರಿ,ಏ.22:ಜಿಲ್ಲೆಯಲ್ಲಿ ದಿನೇ ದಿನೇ ಏರುತ್ತಿರುವ ತಾಪಮಾನ ಮತ್ತು ಪರಿಸರ ಮಾಲಿನ್ಯದ ನಡುವೆಯೂ ಹಸಿರನ್ನು ಉಳಿಸುವ ಉದ್ದೇಶದಿಂದ “ಗಿಡ ಬೆಳೆಸಿ, ಜೀವ ಉಳಿಸಿ” ಎಂಬ ಘೋಷವಾಕ್ಯದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರಂಭಗೊಂಡಿರುವ ಪರಿಸರ ಜಾಗೃತಿ ಅಭಿಯಾನ ಜನರಲ್ಲಿ ಗಮನ ಸೆಳೆಯುತ್ತಿದೆ.
ಪತ್ರಕರ್ತ ಅಸ್ಲಾಂ ಭಾಷ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನವು ಸಾರ್ವಜನಿಕರಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಪ್ರಸ್ತುತ ಬಳ್ಳಾರಿಯಲ್ಲಿ ತಾಪಮಾನ ಹೆಚ್ಚಳದಿಂದ ಉಂಟಾಗುತ್ತಿರುವ ತೀವ್ರ ಬಿಸಿಲಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು,ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಗಿಡಗಳ ಸರಿಯಾದ ಬೆಳವಣಿಗೆಗಾಗಿ ನಿಯಮಿತವಾಗಿ ನೀರುಣಿಸುವುದು ಅಗತ್ಯವಾಗಿದ್ದು, ವಿಶೇಷವಾಗಿ ಬೆಳಿಗ್ಗೆ ಅಥವಾ ಸಂಜೆ ಸಮಯದಲ್ಲಿ ನೀರು ಹಾಕುವುದು ಸೂಕ್ತವೆಂದು ತಿಳಿಸಲಾಗಿದೆ.
ಜೊತೆಗೆ ನೀರನ್ನು ನೇರವಾಗಿ ಗಿಡದ ಬೇರುಗಳಿಗೆ ತಲುಪಿಸುವ ಮೂಲಕ ಉತ್ತಮ ಬೆಳವಣಿಗೆ ಸಾಧಿಸಬಹುದು ಎಂದು ತಿಳಿಸಿದ್ದಾರೆ.ಮಳೆ ನೀರನ್ನು ಸಂಗ್ರಹಿಸಿ ಗಿಡಗಳಿಗೆ ಬಳಸಿಕೊಳ್ಳುವ ಕ್ರಮಕ್ಕೂ ಮಹತ್ವ ನೀಡಲಾಗಿದೆ.
ಇದಲ್ಲದೆ,ಸ್ಥಳೀಯವಾಗಿ ಬೆಳೆಯುವ ಗಿಡಗಳನ್ನು ನೆಡುವುದು ಪರಿಸರಕ್ಕೆ ಹೆಚ್ಚು ಅನುಕೂಲಕರವಾಗಿದ್ದು, ಕಡಿಮೆ ನೀರಿನಲ್ಲಿ ಅವು ಸುಲಭವಾಗಿ ಬೆಳೆಯುತ್ತವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಅಭಿಯಾನವನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಪರಿಸರ ತಜ್ಞರ ಪ್ರಕಾರ, ಒಂದು ಗಿಡವು ವರ್ಷಕ್ಕೆ ಗಮನಾರ್ಹ ಪ್ರಮಾಣದ ಕಾರ್ಬನ್ ಡೈಆಕ್ಸೈಡ್ ಅನ್ನು ಹೀರಿಕೊಳ್ಳುವ ಮೂಲಕ ವಾತಾವರಣವನ್ನು ಶುದ್ಧಗೊಳಿಸುವುದಲ್ಲದೆ, ತಾಪಮಾನ ನಿಯಂತ್ರಣದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿ, ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಿಸುವುದು ಅವಶ್ಯಕವಾಗಿದೆ ಎಂದು ಪತ್ರಕರ್ತ ಅಸ್ಲಾಂ ಭಾಷ ಹೇಳಿದರು.
“ಇಂದು ನೆಟ್ಟ ಗಿಡ – ನಾಳೆಯ ಜೀವ ರಕ್ಷಕ” ಎಂಬ ಸಂದೇಶದೊಂದಿಗೆ ಈ ಅಭಿಯಾನವು ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ.

21st April 2026
ಹೊಳಲ್ಕೆರೆ: ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮಹಿಳಾ ನೌಕರರ ದಿನಾಚರಣೆ ಹಾಗೂ ರಾಜ್ಯ ಸಹಕಾರಿ ನೌಕರರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ನೌಕರರ ಪಾತ್ರವು ಸರ್ಕಾರಿ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ನೌಕರರ ಸೇವೆಯು ಪ್ರಮುಖವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಚಂದ್ರಶೇಖರ್, ಶಿವಮೂರ್ತಿ ಹಾಗೂ ಕಾ.ಸ.ಪ್ಪ ಅಧ್ಯಕ್ಷ ಸಿದ್ದರಾಮಪ್ಪ ಎಚ್.ಎನ್ ಅವರು ಉಪಸ್ಥಿತರಿದ್ದರು. ರಾಜ್ಯಸಭಾ ಸದಸ್ಯೆ ಅನುಯ ಅಮ್ಮ, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ನಿಜಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಗಿರೀಶ್, ಖಜಾಂಚಿ ಪ್ರದೀಪ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಕಾದರ್ ಬಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದ ವೇಳೆ ಮಹಿಳಾ ನೌಕರರ ಸಾಧನೆಗಳನ್ನು ಸ್ಮರಿಸಿ, ಅವರ ಸೇವೆಯನ್ನು ಕೊಂಡಾಡಲಾಯಿತು.
ವರದಿ: ನಾಗರಾಜ್ ಕೆ

24th March 2026
ಹೊಳಲ್ಕೆರೆ, ಮಾ.24: ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಶಿವಪ್ರಕಾಶ್ ಅವರು ಇಂದು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಂದಾಯ ವಸೂಲಾತಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತಿರುವ ವಸೂಲಾತಿ ಕಾರ್ಯಗಳ ಕುರಿತು ಮಾಹಿತಿ ಪಡೆದು, ಬಾಕಿ ಇರುವ ಕಂದಾಯವನ್ನು ಶೀಘ್ರ ವಸೂಲಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.
ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಆಕಾಶ್ ಎಸ್ ಅವರ ಆದೇಶದಂತೆ ಮಾರ್ಚ್ 21ರಿಂದ 31ರವರೆಗೆ ಜಿಲ್ಲೆಯಾದ್ಯಂತ ಕಂದಾಯ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

21st March 2026
ಹೊಳಲ್ಕೆರೆ: ತಾಲೂಕು ವ್ಯಾಪ್ತಿಯ ತಾಳ್ಯ ಗ್ರಾಮ ಪಂಚಾಯತಿಯ ಒಳಪಡುವ ಕುಮ್ಮಿನಕಟ್ಟ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬ ವಿಷಯ ಪ್ರಾದೇಶಿಕ ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆ ತಾಲೂಕು ಆಡಳಿತ ತಕ್ಷಣ ಕ್ರಮಕ್ಕೆ ಮುಂದಾಗಿದೆ.
ಈ ಸಂಬಂಧ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಉಪಾಧಿಕಾರಿಗಳಾದ ಶಿವಪ್ರಕಾಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ನೀರಿನ ಲಭ್ಯತೆ, ಪೂರೈಕೆ ವ್ಯವಸ್ಥೆ ಮತ್ತು ಜನರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಮಾಹಿತಿ ಪಡೆದು, ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿಗಳಾದ ಸುರೇಶ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಶುಭ ತಳಕ್ ಹಾಗೂ ಪಂಚಾಯತ್ ಸಿಬ್ಬಂದಿಗಳಾದ ವಿನಯ್ ಕುಮಾರ್, ಕೊಡಿಕರಿಯಪ್ಪ ಸೇರಿದಂತೆ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜೊತೆಗೆ ಗ್ರಾಮಸ್ಥರೂ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ವಿವರಿಸಿದರು.
ತಾಲೂಕು ಆಡಳಿತದ ಈ ತ್ವರಿತ ಕ್ರಮದಿಂದ ಗ್ರಾಮಸ್ಥರಲ್ಲಿ ಸ್ವಲ್ಪ ನೆಮ್ಮದಿ ಮೂಡಿದ್ದು, ಶೀಘ್ರದಲ್ಲೇ ನೀರಿನ ಸಮಸ್ಯೆ ನಿವಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

22nd January 2026
ಬಳ್ಳಾರಿ, : ಸ್ಪರ್ಧೆಗಳಲ್ಲಿ ಸೋಲು–ಗೆಲುವು ಸಹಜ. ಆದರೆ ಭಾಗವಹಿಸುವ ಮನೋಭಾವವೇ ಮುಖ್ಯ. ಸ್ಪರ್ಧಾಳುಗಳು ಗೆಲುವು–ಸೋಲನ್ನು ಸಮಾನ ಮನಸ್ಥಿತಿಯಲ್ಲಿ ಸ್ವೀಕರಿಸಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಕೆ ಫೌಂಡೇಶನ್ ಹಾಗೂ ಬಳ್ಳಾರಿ ಫಿಟ್ನೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಕ.ಕ.ವಿಭಾಗ ಮಟ್ಟದ ಪುರುಷರು ಹಾಗೂ ಮಹಿಳೆಯರ ದೇಹದಾಡ್ಯ ಮತ್ತು ಪವರ್ ಲಿಫ್ಟಿಂಗ್ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರಿಕೆಟ್, ಫುಟ್ಬಾಲ್, ಟೆನ್ನಿಸ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸುವುದು ಸಾಮಾನ್ಯವಾದರೂ, ಜಿಕೆ ಫೌಂಡೇಶನ್ ಅಧ್ಯಕ್ಷ ಜಿ.ಕೆ.ಸ್ವಾಮಿ (ವಿಜಯ್) ಅವರು ಯುವಕರ ದೈಹಿಕ ಸಾಮರ್ಥ್ಯ ಬೆಳೆಸುವ ಉದ್ದೇಶದಿಂದ ಕ.ಕ.ವಿಭಾಗ ಮಟ್ಟದ ದೇಹದಾಡ್ಯ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಸಂತಸ ತಂದಿದೆ ಎಂದರು.
ಸಿಂಗಪುರದಲ್ಲಿ ಉದ್ಯೋಗದಲ್ಲಿದ್ದರೂ ಹುಟ್ಟಿದ ನಾಡಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಜಿ.ಕೆ.ಸ್ವಾಮಿ ಅವರು ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಡವರು, ಮಹಿಳೆಯರು ಹಾಗೂ ವೃದ್ಧರ ಸೇವೆಯ ಜೊತೆಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಜಿಕೆ ಫೌಂಡೇಶನ್ ನೀಡುತ್ತಿರುವ ಸೇವೆಗಳು ಮಾದರಿಯಾಗಿವೆ. ಇಂತಹ ಕಾರ್ಯಗಳಿಗೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲ ಸದಾ ಇರುತ್ತದೆ ಎಂದು ಶಾಸಕ ಭರತ್ ರೆಡ್ಡಿ ಭರವಸೆ ನೀಡಿದರು.
ಜಿಕೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಜಿ.ಕೆ.ಸ್ವಾಮಿ ಮಾತನಾಡಿ, ಯುವಕರಿಗೆ ಪ್ರೋತ್ಸಾಹ ನೀಡುವ ವೇದಿಕೆ ಕಲ್ಪಿಸುವುದೇ ನನ್ನ ಉದ್ದೇಶ. ನಮ್ಮ ಫೌಂಡೇಶನ್ ಈಗಾಗಲೇ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಕಷ್ಟು ಸೇವೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ದೇಹದಾಡ್ಯ ಸ್ಪರ್ಧೆಗಳನ್ನು ಆಯೋಜಿಸುವ ಕನಸು ಇದೆ. ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಇದಕ್ಕೂ ಮುನ್ನ ಕೊಪ್ಪಳ, ವಿಜಯನಗರ, ಕಲಬುರ್ಗಿ, ರಾಯಚೂರು, ಬೀದರ್ ಹಾಗೂ ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸ್ಪರ್ಧಾಳುಗಳು ತೂಕ ಹಾಗೂ ಎತ್ತರ ಪರಿಶೀಲನೆ ಮಾಡಿಕೊಂಡು ಹೆಸರು ನೋಂದಾಯಿಸಿಕೊಂಡರು. ಈ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳ ನೂರಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಮೇಯರ್ ರಾಜೇಶ್ವರಿ ಸುಬ್ಬರಾಯಡು, ಮುಖಂಡರಾದ ಲೋಕೇಶ್, ಕರಾಟೆ ಕಟ್ಟೆಸ್ವಾಮಿ, ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ತೀರ್ಪುಗಾರರಾಗಿ ಮಿಸ್ಟರ್ ಏಶಿಯಾ ಚಿನ್ನದ ಪದಕ ವಿಜೇತ ಬಿ. ಮಾರುತೇಶ, ಅನಿಲ್ ಬೆಳವಣಿಕೆ (ಗದಗ), ಸೂರಜ್ ಹಾಗೂ ಶಶಿಕುಮಾರ್ ಆಗಮಿಸಿದ್ದರು.
ವಿಜೇತರು:
ಮೊದಲ ಸುತ್ತು – ದೇಹದಾಡ್ಯ ಸ್ಪರ್ಧೆ:
ಶರಣಪ್ಪ – ಕೊಪ್ಪಳ
ಮಾಲತೇಶ್ – ಕೊಪ್ಪಳ
ಅಬ್ದುಲ್ ರೆಹಮಾನ್ – ಬಳ್ಳಾರಿ
ಎರಡನೇ ಸುತ್ತು – ದೇಹದಾಡ್ಯ ಸ್ಪರ್ಧೆ:
ಚಂದ್ ಭಾಷಾ – ಬಳ್ಳಾರಿ
ಮೋಹನ್ – ರಾಯಚೂರು
ಅರುಣ್ – ಹೊಸಪೇಟೆ

21st January 2026
ಬಳ್ಳಾರಿ. ಜ. 21: ಉತ್ತಮ ಗುಣಮಟ್ಟದ ಗುಣಮಟ್ಟದ ಆಹಾರ ಪದ್ಧತಿಗೆ ಹೆಸರುವಾಸಿಯಾದ 'ಪಿಸ್ತಾ' ಹೌಸ್ ಬಳ್ಳಾರಿಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ನಗರದ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ಸ್ಥಾಪಿಸಲಾದ ಈ ಹೋಟೆಲ್ನ ಉದ್ಘಾಟನಾ ಸಮಾರಂಭವು ಸಡಗರದಿಂದ ನಡೆಯಿತು.
ನಗರ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪಿಸ್ತ ಹೌಸ್ ಎಂಡಿ, ಹಾಗೂ ಹೋಟೆಲ್ ಪ್ರಿಪರೇಟರ್ ಸಾಯಿ ಸಂದೀಪ್ ರೆಡ್ಡಿ ಜಂಟಿಯಾಗಿ ಇಂದು ಪಿಸ್ತಾ ಹೌಸ್ ರೆಸ್ಟೋರೆಂಟ್ ಅನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಉದ್ಯಮಿಗಳು ಮತ್ತು ಹೋಟೆಲ್ ಉದ್ಯಮದ ವ್ಯಕ್ತಿಗಳು ಭಾಗವಹಿಸಿ ಹೋಟೆಲ್ ಆಡಳಿತ ಮಂಡಳಿಗೆ ಶುಭ ಹಾರೈಸಿದರು. ಸಾಂಪ್ರದಾಯಿಕ ಪೂಜೆಗಳ ನಂತರ, ಅತಿಥಿಗಳು ರಿಬ್ಬನ್ ಕತ್ತರಿಸಿ ಪಿಸ್ತಾ ಹೌಸ್ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು.
ವೆಜೆಂಟ್ ನಾನ್ ವೆಜ್ ಎರಡು
ವಿಭಾಗಗಳಲ್ಲಿ ವ್ಯಾಪಕವಾದ ಮೆನು ಲಭ್ಯವಿದ್ದರೂ, ಬಿರಿಯಾನಿಗಳು, ವಿಶೇಷ ಕಬಾಬ್ಗಳು, ಕರಿಗಳು, ಚೈನೀಸ್ ವಸ್ತುಗಳು ಮತ್ತು ಸಿಹಿತಿಂಡಿಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಕುಟುಂಬ ಸಮೇತರಾಗಿ ಆಗಮಿಸಿ ಊಟ ಮಾಡಲು ವಿಶೇಷವಾಗಿ ಹೋಟೆಲ್ ಅನ್ನು ವಿನ್ಯಾಸಗೊಳಿಸಲಾಗಿದೆ ಹೋಟೆಲ್ ವ್ಯವಸ್ಥಾಪಕ ಮಲ್ಲಿಕಾರ್ಜುನ ರೆಡ್ಡಿ ತಿಳಿಸಿದರು.
ಬಳ್ಳಾರಿಯ ನಗರದ ಜನತೆಗೆ ಗುಣಮಟ್ಟದ ಮತ್ತು ರುಚಿಕರವಾದ ಆಹಾರವನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಸ್ವಚ್ಛ ವಾತಾವರಣದಲ್ಲಿ ಕೈಗೆಟುಕುವ ಬೆಲೆಯಲ್ಲಿ ಅತ್ಯುತ್ತಮ ಸೇವೆಗಳನ್ನು ನಾವು ಒದಗಿಸುತ್ತೇವೆ ಎಂದರು. ಉದ್ಘಾಟನೆಯ ಮೊದಲ ದಿನವೇ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಯಿತು. ಗ್ರಾಹಕರು ಸಿಕ್ಕಿರುವುದು ಸೇರಿ ಬೇಕರಿ ಮತ್ತು ಆಹಾರ ಉತ್ಪನ್ನಗಳನ್ನು ಖರೀದಿಸಿದರು.
ಭವಿಷ್ಯದಲ್ಲಿ ಹೋಮ್ ಡೆಲಿವರಿ ಮತ್ತು ಆನ್ಲೈನ್ ಆರ್ಡರ್ ಸೌಲಭ್ಯಗಳು ಸಹ ಲಭ್ಯವಾಗಲಿವೆ ಎಂದು ಆಡಳಿತ ಮಂಡಳಿ ತಿಳಿಸಿತು.
ಒಟ್ಟಾರೆಯಾಗಿ, ಬಳ್ಳಾರಿ ನಗರದಲ್ಲಿ ಪಿಸ್ತಾ ಹೋಟೆಲ್ ಉದ್ಘಾಟನೆಯು ಸ್ಥಳೀಯ ಆಹಾರ ಕ್ಷೇತ್ರಕ್ಕೆ ಹೊಸ ಉತ್ತೇಜನ ನೀಡಿದೆ ಎಂದು ಬಳ್ಳಾರಿಯ ಜನತೆ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಚರಣ್ ರೆಡ್ಡಿ, ಚಾನಳ್ ಶೇಖರ್, ರಾಮ್ ಪ್ರಸಾದ್ ಕಿರಣ್ ಕುಮಾರ್ ರೆಡ್ಡಿ ಸೇರಿದಂತೆ ಇತರರಿದ್ದರು.

18th January 2026
ಬಳ್ಳಾರಿ : ನಗರದ ಹಾವಂಬವಿಯಲ್ಲಿ ಪ್ಯಾಪ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಶ್ರಯದಲ್ಲಿ "ದಿ ಗ್ರೇಟ್ ಸ್ಲೀಪ್ - ಎಸ್ಕೆ ಫರ್ನಿಚರ್ಸ್" ಅಂಗಡಿಯನ್ನು ಶನಿವಾರ ಅದ್ಧೂರಿಯಾಗಿ ಉದ್ಘಾಟಿಸಲಾಯಿತು.
ಪ್ಯಾಪ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಶಂಕರರಾಮನ್ ಮತ್ತು ಜನರಲ್ ಮ್ಯಾನೇಜರ್ ರಾಜೇಶ್ ಕಾರ್ಯಕ್ರಮವನ್ನು ಆಶೀರ್ವದಿಸಿದರು. ಅಂಗಡಿ ಉದ್ಘಾಟನಾ ಸಮಾರಂಭವನ್ನು ಮಾದಕ ನೃತ್ಯದೊಂದಿಗೆ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸೆಕ್ಷವಲಿ ಕೊ ಸಿ ಗೈ ಅವರು, ಪ್ಯಾಪ್ಸ್ ಕಂಪನಿಯು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ ಹಾಸಿಗೆಗಳು ಮತ್ತು ಪೀಠೋಪಕರಣಗಳು ಜನರಿಗೆ ಗುಣಮಟ್ಟದ ನಿದ್ರೆಯನ್ನು ಒದಗಿಸುತ್ತವೆ ಎಂದು ಹೇಳಿದರು. ಗ್ರಾಹಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮ ಉತ್ಪನ್ನಗಳನ್ನು ಲಭ್ಯವಾಗುವಂತೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಪ್ಯಾಪ್ಸ್ ಡ್ರೀಮ್ ಮೇಕರ್ಸ್ ಹಾಸಿಗೆಗಳು ಮತ್ತು ಆಧುನಿಕ ವಿನ್ಯಾಸದ ಪೀಠೋಪಕರಣಗಳು ಈ ಅಂಗಡಿಯಲ್ಲಿ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುತ್ತವೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯಮಿಗಳು, ಸ್ಥಳೀಯ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿ ಮರಿ ಸ್ವಾಮಿ ಓಬಳಾಪುರಂನ ಮಾಜಿ ಸರಪಂಚ್ ವೆಂಕಟೇಸುಲು ನಲ್ಲಬಂ ದಲ ವನ್ನೂರಪ್ಪ ಅವರನ್ನು ಅಭಿನಂದಿಸಿದರು.

14th January 2026
ಬಳ್ಳಾರಿ : ನಗರದ ಬಾಪೂಜಿ ನಗರ ಸರ್ಕಲ್ನಿಂದ ಆಂದ್ರಾಳ್ ಬ್ರಿಡ್ಜ್ ವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಕೆ ಕಳಪೆ ಗುಣಮಟ್ಟದಲ್ಲಿ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ದಿನಾಂಕ 24-02-2022 ರಂದು ಆರಂಭವಾದ ಈ ಕಾಮಗಾರಿಕೆ, ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದ್ದು, ತೆರೆದ ಚರಂಡಿ ಕೆಲಸವೂ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಮಣ್ಣು ಹಾಗೂ ಕಲ್ಲು ಬಿಂಚುಗಳನ್ನು ಹಾಕಿ ಕಾಮಗಾರಿಯನ್ನು ನಿಧಾನಗತಿಯಲ್ಲೇ ನಡೆಸಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ದಿನನಿತ್ಯ ಅಪಾಯವನ್ನು ಎದುರಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಈ ರಸ್ತೆ ಕಾಮಗಾರಿಕೆ ಗುತ್ತಿಗೆದಾರ ಕೆ.ಎಂ. ಪ್ರವೀಣ್ ಕುಮಾರ್ ಅವರ ಮೂಲಕ, ಪಿಡಬ್ಲ್ಯೂಡಿ ಎಡಬ್ಲ್ಯೂ ಬಸವ ರೆಡ್ಡಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಕಾಮಗಾರಿಕೆಯ ಗುಣಮಟ್ಟ ತೀರಾ ಕಳಪೆಯಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ. ಈ ಕುರಿತು ಸ್ಥಳೀಯರು ಬಾಪೂಜಿ ನಗರ ಏಳನೇ ವಾರ್ಡಿನ ಕಾರ್ಪೊರೇಟರ್ ಉಮಾದೇವಿ ಶಿವರಾಜ್ ಅವರ ಗಮನಕ್ಕೆ ತಂದರೂ, ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗಲಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ಪ್ರದೇಶದ ಮಾಜಿ ಕಾರ್ಪೊರೇಟರ್ ನಾರಾಯಣಮ್ಮನ ಅವರ ಮಗ ಕಾಂಗ್ರೆಸ್ ಮುಖಂಡರಾದ ಬಾಪಜಿ ನಗರ್ ವೆಂಕಟೇಶ್ ಅವರು ಈ ಕುರಿತು ಪಿಡಬ್ಲ್ಯೂಡಿ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ಬೇಸತ್ತಿರುವ ಅವರು, ಸಾರ್ವಜನಿಕರ ಪರವಾಗಿ ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕಳಪೆ ಕಾಮಗಾರಿಯಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

11th January 2026
ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎ ಎಸ್ ವಸಂತ್ ಕುಮಾರ್ ಪಾಲ್ಗೊಳ್ಳಲಾಗಿತ್ತು. ಇದರ ಅಧ್ಯಕ್ಷತೆಯನ್ನು ಮಾಜಿ ಶಾಸಕರು ಹಾಗೂ ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ ಹಾಗೂ ಪರಿಶಿಷ್ಟ ಜಾತಿಯ ರಾಜ್ಯ ಅಧ್ಯಕ್ಷರಾದ ಮಾಜಿ ಶಾಸಕರು ಅನ್ನಧಾನಿ ಹಾಗೂ ರಮೇಶ್ ಗೌಡ ಉಪಸ್ಥಿತರಿದ್ದರು. ಮತ್ತು ಪಕ್ಷದ ಸಂಘಟನೆಯನ್ನು ನಿಮ್ಮ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರ ಸಮ್ಮುಖದಲ್ಲಿ ಪಕ್ಷವನ್ನು ಬಲವಾಗಿ ಕಟ್ಟಿ ಎಂದು ಸೂಚನೆ ನೀಡಲಾಯಿತು.

11th January 2026
ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಗರುಡ ನ್ಯೂಸ್ ವತಿಯಿಂದ 2026ನೇ ಸಾಲಿನ ರಾಜ್ಯಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಯನ್ನು ಶ್ರೀನಿವಾಸ ಭಂಡಾರಿ ರವರಿಗೆ ನೀಡಿ ಗೌರವಿಸಿ ಸನ್ಮಾಸಿ ಪ್ರಧಾನ ಮಾಡಲಾಯಿತು.
ಇವರು ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಕೌಲ್ ಬಜಾರ್ ವಟ್ಟಪ್ಪ ಕೇರಿ,ನಿವಾಸಿಯಾಗಿದ್ದಾರೆ.ಸಾಮಾಜಿಕ ಹೋರಾಟಗಾರರು,ಹಲವು ಸುಮಾರು ವರ್ಷಗಳಿಂದ ಸಮಾಜ ಮುಖಿ ಕೆಲಸ ಕಾರ್ಯಕ್ರಮಗಳನ್ನು ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ.ಬಡ ಜನರ ಧ್ವನಿ ಯಾಗಿದ್ದಾರೆ ಇಂತ ಹಲವು ಸೇವೆ ಸಾಧನೆ ಮಾಡಿದ್ದಾರೆ ಎಂದು ಗುರುತಿಸಿಕೊಂಡಿದ್ದಾರೆ. ಹಾಗೆ ಬಡವರ ಬಂಧು ಕೊಡುಗೈ ಎಂದು ಕರೆಯುತ್ತಾರೆ. ಇಂತ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ಹಾಗಾಗಿ ಇಂತ ಸೇವಾ ರತ್ನಗಳು ಎಲೆ ಮರಿ ಕಾಯಿ ಆಗಿ ಉಳಿಬಾರದು ಎಂದು ಅವರ ಸೇವೆ ಯನ್ನು ಗುರುತಿಸಿ.ಗರುಡ ನ್ಯೂಸ್ ರಾಜ್ಯ ಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ , ಹಾಗೆ ಆಯ್ಕೆಮಾಡಿ ರಾಜ್ಯ ಪ್ರಶಸ್ತಿಯನ್ನು ಶ್ರೀನಿವಾಸ್ ಭಂಡಾರಿಗೆ ನೀಡಿದ್ದಾರೆ.ಇನ್ನು ಹೆಚ್ಚು ಹೆಚ್ಚು ಇಂತ ಸಮಾಜ ಸೇವೆ ಕೆಲಸಗಳನ್ನು ಮಾಡಬೇಕು ಎಂದು ಗರುಡ ನ್ಯೂಸ್ ತಂಡದವರು ಹಾರೈಸಿದರು.