

11th September 2025

ಬಳ್ಳಾರಿ : ಬಳ್ಳಾರಿಯ ಇನ್'ಫ್ಯಾಂಟ್ರಿ ರಸ್ತೆಯ ದಯಾ ಕೇಂದ್ರದ ಬಳಿಯಿರುವ ಶ್ರೀ ಕರಿಮಾರೆಮ್ಮ ದೇವಸ್ಥಾನಕ್ಕೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು 60 ಸಾವಿರ ರೂ.ಗಳನ್ನು ವೈಯಕ್ತಿಕವಾಗಿ ದೇಣಿಗೆ ನೀಡಿದ್ದಾರೆ.
ಸದರಿ ಮೊತ್ತವನ್ನು ಮಂಗಳವಾರ ಮಧ್ಯಾಹ್ನ ದೇವಸ್ಥಾನದ ಅರ್ಚಕರಿಗೆ ನೀಡಲಾಯಿತು. ಶಾಸಕ ನಾರಾ ಭರತ್ ರೆಡ್ಡಿಯವರ ಆಪ್ತರು, ಕಾಂಗ್ರೆಸ್ ಮುಖಂಡರು ಈ ಮೊತ್ತವನ್ನು ಶಾಸಕರ ಪರವಾಗಿ ಹಸ್ತಾಂತರಿಸಿದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ನಾಗಲಕೆರೆ ಗೋವಿಂದ, ಬೆಣಕಲ್ ರಘು, ಪಿ.ರವಿ ಸೇರಿದಂತೆ ಹಲವರು ಹಾಜರಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ