

28th September 2025

ಬಳ್ಳಾರಿ : ಬಳ್ಳಾರಿ ಜಿಲ್ಲಾ ಜೆ ಡಿ ಎಸ್ ಪಕ್ಷದಲ್ಲಿ ಭರ್ಜರಿ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನಹಳ್ಳಿ ತಾಯಣ್ಣ ಅವರ ನೇತೃತ್ವದಲ್ಲಿ ಎ.ಎಸ್. ವಸಂತ್ ಕುಮಾರ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಪಕ್ಷದ ಪರಿಷಿಷ್ಟ ಜಾತಿ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಎ.ಎಸ್. ವಸಂತ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು.
ವಸಂತ್ ಕುಮಾರ್ ಅವರ ನೇತೃತ್ವದಲ್ಲಿ ಹಲವು ಮಂದಿ ಹೊಸದಾಗಿ ಜೆಡಿಎಸ್ ಪಕ್ಷಕ್ಕೆ ಸೇರಿದರು. ಬಳ್ಳಾರಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನೂರಾರು ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಜೆಡಿಎಸ್ಗೆ ಬಲ ತುಂಬಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ
ಮೀನಹಳ್ಳಿ ತಾಯಣ್ಣ ಮಾತನಾಡಿ “ಪಕ್ಷವನ್ನು ಬಲಪಡಿಸಲು ವಸಂತ್ ಕುಮಾರ್ ಅವರ ನೇತೃತ್ವ ಬಹಳ ಮುಖ್ಯ. ಪರಿಶಿಷ್ಟ ಜಾತಿ ಸಮುದಾಯದಲ್ಲಿ ಪಕ್ಷದ ಬಲವನ್ನು ಹೆಚ್ಚಿಸಲು ಅವರು ಶ್ರಮಿಸಲಿ” ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸ್ವಾಗತ ಕೋರಿದರು. ಈ ವೇಳೆ ಪಕ್ಷದ ನಗರ ಅಧ್ಯಕ್ಷ ಹೊನ್ನೂರ ಸ್ವಾಮಿ ಎಸ್ ಟಿ ಘಟಕದ ಅಧ್ಯಕ್ಷ ಹದ್ದಿಗೇರಿ ರಾಮಣ್ಣ, ಮೈನಾರಿಟಿ ಅಧ್ಯಕ್ಷ ಜಾವಿದ್,
ಮಹಿಳಾ ಘಟಕದ ಅಧ್ಯಕ್ಷ, ಪುಷ್ಪ, ಶಬನಾ, ಉಮ್ಮಿ ಸೌದ,ಜಮೀಲಾ, ಮುತ್ತು, ಹೊನ್ನೂರ್ ವಲಿ, ರಾಮು, ಹೊನ್ನಳ್ಳಿ ರಾಜ,ಸೇರಿದಂತೆ ಅನೇಕ
ಜನ ಉಪಸ್ಥಿತರಿದ್ದರು.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..