

29th October 2025

ಬಳ್ಳಾರಿ : ಜಿಲ್ಲೆಯಲ್ಲಿ ಪರವಾನಿಗೆ ಪಡೆಯದೇ ಅನಧಿಕೃತವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಬುಧವಾರ, ನಗರದ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ಅಧೀನದ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ವಾಣಿಜ್ಯ ಮಳಿಗೆಗಳಲ್ಲಿ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಸರ್ಕಾರದ ಮಾನದಂಡಗಳಡಿ ಪರವಾನಿಗೆ ನೀಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ಘೋಷಿಸಿ ತ್ವರಿತವಾಗಿ ಟಿಒಎಫ್ಇಐ ಆಪ್ ನಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಶಾಲಾ-ಕಾಲೇಜು ಮಕ್ಕಳು ಒಂದು ಬಾರಿ ತಂಬಾಕು ಉತ್ಪನ್ನಗಳಿಗೆ ದಾಸರಾದರೆ, ಅದರಿಂದ ಹೊರಬರುವುದು ಕಷ್ಟಕರ. ಹಾಗಾಗಿ ಅಧಿಕಾರಿಗಳು ಹೆಚ್ಚಾಗಿ ಶಾಲಾ-ಕಾಲೇಜುಗಳಲ್ಲಿ, ಗ್ರಾಮೀಣ ಕ್ಷೇತ್ರಗಳಲ್ಲಿ ಮತ್ತು ಸಮುದಾಯಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಕಡ್ಡಾಯವಾಗಿ ಧೂಮಪಾನ ವಲಯ ಸ್ಥಾಪಿಸಿ, ಅವುಗಳ ಉಪಯೋಗ, ಕ್ರಮಬದ್ಧತೆ ಕುರಿತು ಅಬಕಾರಿ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿರಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆ ಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಕ್ರಮವಹಿಸಬೇಕು. ನಿಲ್ದಾಣ ಅಂದಗೆಡಿಸುವ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವಿಸಿ, ಎಲ್ಲೆಂದರಲ್ಲಿ ಉಗುಳುವವರ ಮೇಲೆ ದಂಡ ವಿಧಿಸಬೇಕು ಎಂದು ಕಕರಾರಸಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ 2025ರ ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಒಟ್ಟು 617 ಕ್ಷಯರೋಗಿಗಳಲ್ಲಿ 86 ತಂಬಾಕು ವ್ಯಸನಿಗಳಾಗಿದ್ದು, ಎಲ್ಲರನ್ನು ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ತಂಬಾಕು ವ್ಯಸನದಿಂದ ಮುಕ್ತರಾಗಿ ಬರುವ ವ್ಯಕ್ತಿಗಳಿಂದ ಅದರಿಂದಾಗುವ ಪರಿಣಾಮ ಕುರಿತು ಸಾರ್ವಜನಿಕರಿಗೆ ತಿಳಿಯಪಡಿಸಲು ಮತ್ತು ಅದರ ಜೊತೆಗೆ ಅಧಿಕಾರಿಗಳ ನಿರ್ದೇಶನ ಒಳಗೊಂಡ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಅಧಿಕಾರಿಗಳು ಹೆಚ್ಚಾಗಿ ಕ್ಷೇತ್ರ ಮಟ್ಟದಲ್ಲಿ ಸಂಚರಿಸಿದಾಗ ಮಾತ್ರ ತಂಬಾಕು ಬಳಕೆ ಮೇಲೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳಿಗೆ ಹೇಳಿದರು.
ಇದೇ ವೇಳೆ ಜಿಲ್ಲೆಯಲ್ಲಿ ಡಿ.06 ರ ವರೆಗೆ ನಡೆಯುವ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಗೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
-----------------

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ - ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ-- -ಎಸಿಪಿ ನಾರಾಯಣ ಬರಮನಿ ಅಭಿಮತ

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲರಿಂದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹೆಚ್ಚುವರಿ ಹೊಸ ಕೊಠಡಿಗಳ ಕಾಮಗಾರಿಗೆ ಭೂಮಿ ಪೂಜೆ

ಪರಿಮಳ ಪ್ರಕಾಶನ ಮತ್ತು ಪರಿಮಳ ಸಾಂಸ್ಕೃತಿಕ ವಾಹಿನಿ ಸಹಯೋಗದಲ್ಲಿ ಬೆಳಗಾವಿ ಸಾಹಿತ್ಯೋತ್ಸವ -2025