

13th May 2026

ಬಳ್ಳಾರಿ: ನಗರದ ಮೆಕ್ಕಾ ಮಸೀದಿಗೆ ಬುಧವಾರ ಭೇಟಿ ನೀಡಿದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಸೀದಿಯ ಅಭಿವೃದ್ಧಿ ಕಾಮಗಾರಿಗಳಿಗೆ ತಮ್ಮ ವೈಯಕ್ತಿಕ ನಿಧಿಯಿಂದ ₹2.50 ಲಕ್ಷ ದೇಣಿಗೆ ನೀಡಿದರು.
ಈ ವೇಳೆ ಮಸೀದಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಮಾತನಾಡಿದ ಶಾಸಕ ಭರತ್ ರೆಡ್ಡಿ, ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಮಸೀದಿಯ ಅಭಿವೃದ್ಧಿ ಕಾರ್ಯಗಳು ಶೀಘ್ರ ಪೂರ್ಣಗೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಪಾಲಿಕೆಯ ಸದಸ್ಯ ಕುಬೇರ, ವಾರ್ಡಿನ ಮುಖಂಡರಾದ ಪರಶುರಾಮುಡು, ದೇವಿನಗರ ಹೊನ್ನೂರಪ್ಪ, ಹೊನ್ನಪ್ಪ, ಅರ್ಷದ್, ಸಾದಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೊಪ್ಪಳದಲ್ಲಿ ಹತ್ತು ದಿನಗಳ ಮಾವು ಮೇಳೆಕ್ಕೆ ಚಾಲನೆ: 200 ತಳಿಯ ಮಾವಿನ ಹಣ್ಣುಗಳ ಪ್ರದರ್ಶನ- 1 ಕೆಜಿಗೆ ರೂ.2.5ಲಕ್ಷ ಬೆಲೆಯ 'ಮೀಯಾ ಜಾಕಿ' ಮಾವು