

1st June 2026

ಹೊಳಲ್ಕೆರೆ, ಜೂ.1: ಪಟ್ಟಣದ ಪತ್ರಕರ್ತರ ಭವನದಲ್ಲಿ ಪತ್ರಕರ್ತರಾದ ಸುರೇಶ್ ಹಾಗೂ ನಾಗರಾಜ್ ಅವರ ಜನ್ಮದಿನವನ್ನು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಪತ್ರಕರ್ತರು ಭಾಗವಹಿಸಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದರು. ಇದೇ ವೇಳೆ ಸುರೇಶ್ ಮತ್ತು ನಾಗರಾಜ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಅವರ ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಹಾಗೂ ಸಮಾಜಮುಖಿ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎಸ್. ವೇದಮೂರ್ತಿ, ದುಮ್ಮಿ ಚಿತ್ತಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಶುಭಾಶಯ ಕೋರಿದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಮಾಜಸೇವಕರು ಹಾಗೂ ಸ್ನೇಹಿತರು ಭಾಗವಹಿಸಿ ಜನ್ಮದಿನದ ಸಂಭ್ರಮಕ್ಕೆ ಮೆರುಗು ನೀಡಿದರು.
ಈ ವೇಳೆ ಜನ್ಮದಿನ ಆಚರಣೆಯು ಆತ್ಮೀಯ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.

ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಕಲ್ಪಿಸಲು ಒತ್ತಾಯ ಆಂಧ್ರ ದೇಶ ಕನ್ನಡ ಶಿಕ್ಷಕರ ಸಂಘದಿಂದ ಸರ್ಕಾರಕ್ಕೆ ಮನವಿ

ಕಾಂಗ್ರೆಸ್ನಲ್ಲಿ ಮಾದಿಗರಿಗೆ ಡಿಸಿಎಂ ಸ್ಥಾನ ಬೇಡಿಕೆ ಜೋರು ಹೈಕಮಾಂಡ್ ಮಟ್ಟದಲ್ಲಿ ಸಾಮಾಜಿಕ ಸಮತೋಲನ ಚರ್ಚೆ