

26th June 2026

ಸಂಡೂರು, ಜೂ. 26: ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳ ಸಂಸದ ಈ. ತುಕರಾಮ್ ಅವರ ಜನ್ಮದಿನದ ಅಂಗವಾಗಿ ಸಂಡೂರಿನಲ್ಲಿ ಶುಭಾಶಯ ಕಾರ್ಯಕ್ರಮ ನಡೆಯಿತು.
ಕೆಪಿಸಿಸಿ ರಾಜ್ಯ ಸಂಯೋಜಕರು (ಪ್ರಚಾರ ಸಮಿತಿ) ಹಾಗೂ ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರ ವೆಂಕಟೇಶ್ ಹೆಗಡೆ ಅವರು ಸಂಸದ ಈ. ತುಕರಾಮ್ ಅವರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಭಗವಂತನು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಶಾಂತಿ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಮತ್ತು ಯಶಸ್ಸನ್ನು ಕರುಣಿಸಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರನ್ನು ವೆಂಕಟೇಶ್ ಹೆಗಡೆ ಅವರು ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ, ಸಂಸದ ಈ. ತುಕರಾಮ್ ಅವರ ಸಾರ್ವಜನಿಕ ಸೇವೆಯನ್ನು ಶ್ಲಾಘಿಸಿ ಶುಭಾಶಯಗಳನ್ನು ತಿಳಿಸಿದರು. ಜನ್ಮದಿನದ ಅಂಗವಾಗಿ ಸಂಸದರ ಮುಂದಿನ ಜನಪರ ಕಾರ್ಯಗಳಿಗೆ ಯಶಸ್ಸು ಸಿಗಲೆಂದು ಹಾರೈಸಲಾಯಿತು.

ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ರಾಷ್ಟ್ರಕವಿ ನಿವಾಸ "ಗಿಳಿವಿಂಡು "ಸಮಗ್ರ ಅಭಿವೃದ್ದಿಗಾಗಿ ಕೇರಳ - ಕರ್ನಾಟಕ ಮುಖ್ಯ ಮಂತ್ರಿಯವರಲ್ಲಿಗೆ ನಿಯೋಗ ಬೇಟಿಗೆ ನಿರ್ಧಾರ.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆ