

5th July 2026

ಬಳ್ಳಾರಿ,ಜು.೦೫: ನಗರದ ಗುಗ್ಗರಹಟ್ಟಿ ವ್ಯಾಪ್ತಿಯ ಸಾಯಿಕಾಲೋನಿಯಿಂದ ಕೃಷ್ಣಕಾಲೋನಿಯವರೆಗೆ ಕಳೆದ ಹಲವು ವರ್ಷಗಳಿಂದ ವಿದ್ಯುತ್ ವೋಲ್ಟೇಜ್ ಸಮಸ್ಯೆ ಉಲ್ಬಣಿಸಿದ್ದು, ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಕುರಿತು ಜೆಸ್ಕಾಂ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ಜೂನ್ ೨೮ ರಂದು ಜೆಸ್ಕಾಂನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಬಾಬು ಮತ್ತು ಕಿರಿಯ ಇಂಜಿನಿಯರ್ ಚಿಟ್ಟಿ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ವೋಲ್ಟೇಜ್ ಸಮಸ್ಯೆಯಿಂದಾಗಿ ವಿದ್ಯುತ್ ಉಪಕರಣಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಮತ್ತು ದೈನಂದಿನ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದ್ದರು.
ಮನವಿಗೆ ಸ್ಪಂದಿಸಿದ ಕಿರಿಯ ಇಂಜಿನಿಯರ್ ಚಿಟ್ಟಿ ಚಂದ್ರಶೇಖರ್ ಅವರು ಶುಕ್ರವಾರದಂದು ಸ್ಥಳಕ್ಕೆ ಭೇಟಿನೀಡಿ, ಪರಿಶೀಲನೆ ನಡೆಸಿದರು. ಸ್ಥಳೀಯರ ಸಮಸ್ಯೆ ಆಲಿಸಿದ ಅವರು, ವಿದ್ಯುತ್ ವೋಲ್ಟೇಜ್ ಸಮಸ್ಯೆಯನ್ನು ಬಗೆಹರಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಿವಾಸಿಗಳಾದ ನೂರ್, ಶರ್ಮಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಾಲಬಾಧೆ ತಾಳಲಾರದೆ ಪತಿ, ಪತ್ನಿ, ಮಗ ನೇಣಿಗೆ ಶರಣು- ಸ್ಥಳಕ್ಕೆ-ಎಸ್.ಪಿ ರಾಮ್ ಅರಸಿದ್ದಿ ಭೇಟಿ

ಮುಂಗಾರು ಕ್ಷೀಣ-ಭದ್ರಾ ಜಲಾಶಯದಲ್ಲಿ ನೀರು ಖಾಲಿ- ಮುಂಗಾರು ಬೆಳೆಗೆ ನೀರು ಇಲ್ಲ: ರೈತರಿಗೆ ಆತಂಕ