

30th August 2024

ಜಮಖಂಡಿ: ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಅವಹೇಳನಾಕಾರ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿವಿಧ ಮುಸ್ಲಿಂಪರ ಸಂಘಟನೆಗಳಿಂದ ಶುಕ್ರವಾರ ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಗ್ರೇಡ್2 ತಹಶೀಲ್ದಾರ ಕೆ.ವಾಯ್.ಬಿದರಿ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮೌಲಾನಾ ಅಲ್ತಾಫಖಾನ ಮದನಿ ಮಾತನಾಡಿ, ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರ ಅವರ ಕುರಿತು ಮಹಾಂತ ರಾಮಗಿರಿ ಮಹಾರಾಜರು ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವರ ಕುರಿತಾಗಿ ರಾಮಗಿರಿ ಮಹಾರಾಜ ಅವಹೇಳನಕಾರಿ ಭಾಷಣ ಮಾಡಿದ್ದು, ಈ ಸ್ವಾಮೀಜಿ ಮೇಲೆ ಕಾನೂನು ರೀತಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಭಾರತದ ಸಂವಿಧಾನವು ಎಲ್ಲ ಧರ್ಮದ ಸಮಾಜ ಬಂಧುಗಳಿಗೆ ಸಮಾನ ರೀತಿಯಲ್ಲಿ ಜೀವನ ನಡೆಸಲು ಅನುವು ಮಾಡಿಕೊಟ್ಟಿದ್ದರೂ ಮಹಾಂತ ರಾಮಗಿರಿ ಮಹಾರಾಜ ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದು ಇಸ್ಲಾಂ ಸಮಾಜದ ಬಾಂಧವರಿಗೆ ತೀವ್ರ ನೋವನ್ನುಂಟಾಗುವದಲ್ಲದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಇಂತಹ ಸ್ವಾಮೀಜಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮೌಲಾನಾ ಇಸಾ ಇನಾಮದಾರ, ಮೌಲಾನಾ ಅನೀಸ್ ಡಾಂಗೆ, ಮೌಲಾನಾ ಮುಫ್ತಿ ಹಾರೂನ, ಮೌಲಾನಾ ಫಾರೂಕ್, ಮೌಲಾನಾ ಮುಜಮ್ಮೀಲ ಶೆಖ, ಮೌಲಾನಾ ಅಲ್ತಾಫಖಾನ ಮದನಿ, ಮೌಲಾನಾ ಸರ್ಫರಾಜ, ರಾಜೆಸಾಬ ತಾಳಿಕೋಟಿ, ಖೀಜರ ಪೆಂಡಾರಿ, ಖಾಜಾಆಮೀನ ಕಂಕಣಪೀರ, ರಫೀಕ ಕಲಾದಗಿ, ಝಾಕೀರಹುಸೇನ್ ನಧಾಪ, ಅಬ್ದುಲ ಜಮಾದಾರ, ಸಮೀರ ಕಂಗನೋಳ್ಳಿ, ಅನ್ವರ ಮೋಮಿನ, ಮುಬಾರಕ ಅಪರಾದ, ನಸರೋದ್ದಿನ ಜಮಾದಾರ, ಉಸ್ಮಾನಸಾಬ ದಿಲಾವರ, ಮಕ್ಬೂಲ್ ಅಥಣಿಕರ, ಗುಡುಸಾಬ ಹೊನವಾಡ, ರಾಜು ಮಸಳಿ, ಮುಸ್ತಾಕ ಝೆಂಡೆ, ಅಯ್ಯುಬ ಗದಗ, ಅಸ್ಗರಅಲಿ ಝೆಂಡೆ ಇತರರು ಇದ್ದರು.

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿವಶರಣಪ್ಪಗೌಡ್ರ ಪಾಟೀಲ್ ನಿಧನ.