

26th December 2025

ಜಮಖಂಡಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ, ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದ ತಾಲೂಕಾ ಆಡಳಿತ ಸೌಧ ದ್ವಾರದ ಬಳಿ ಬಿಜೆಪಿ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಅನೀಲ ಬಡಿಗೇರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಾಸಕ ನಾಡೋಜ ಜಗದೀಶ ಗುಡಗುಂಟಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಕಾನೂನು ಜಾರಿಗೆ ತರುವ ಹುನ್ನಾರ ನಡೆಸಿದೆ. 1975ರ ತುರ್ತು ಪರಿಸ್ಥಿತಿಯನ್ನು ಜನವಿರೋಧಿ ಕಾನೂನಿನ ಅಡಿಯಲ್ಲಿ ಜಾರಿಗೊಳಿಸಿ ಸಾರ್ವಜನಿಕರು, ವಿಪಕ್ಷಗಳು, ಮಾಧ್ಯಮಗಳ ಅಭಿವ್ಯಕ್ತಿ ಸ್ವತಂತ್ಯ್ರವನ್ನು ಹತ್ತಿಕ್ಕುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ನ್ನು ತರಾತುರಿಯಲ್ಲಿ ಜಾರಿಗೆ ತಂದು ಒಂದು ಕೋಮಿನವರನ್ನು ಎತ್ತಿಕಟ್ಟುವ ಹುನ್ನಾರ ನಡೆಸಿದೆ.
ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರು ನೀಡದಿರುವ ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ಯ್ರದ ಉಲ್ಲಂಘನೆ ಆಗಿದೆ. ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳಲು ಹೊರಟಿದೆ ಸರ್ಕಾರದ ಈ ಜನವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಹಾಗೂ ಕಾನೂನು ಜಾರಿಗೆ ತರದಂತೆ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇವೆ ಎಂದು ಹೇಳಿದರು.
ಮಾಜಿ ಶಾಶಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾರೂ ಮಾತನಾಡದಂತೆ ತಡೆಯುವ, ಜನವಿರೋಧಿ ಕಾನೂನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.
ಮುಖಂಡರಾದ ಸಿ.ಟಿ.ಉಪಾಧ್ಯಾಯ ಮಾತನಾಡಿ ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ, ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ನಡೆದಿದೆ. ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಅವಶ್ಯವಿಲ್ಲ ಎಂದು ತಿಳಿಸಿದರು.
ಯೋಗಪ್ಪ ಸವದಿ, ಅಜಯ ಕಡಪಟ್ಟಿ, ಮಲ್ಲು ದಾನಗೌಡ, ಗಣೇಶ ಶಿರಗಣ್ಣವರ, ಡಾ.ವಿಜಯಲಕ್ಷ್ಮೀ ತುಂಗಳ, ಗೀತಾ ಸೂರ್ಯವಂಶಿ, ಯಮನೂರ ಮೂಲಂಗಿ, ಸಂಗಮೇಶ ದಳವಾಯಿ, ಈಶ್ವರ ಆದೆಪ್ಪನವರ, ಕುಶಾಲ ವಾಘಮೊರೆ, ಶ್ರೀಧರ ಕಂಬಿ, ಶಂಕರ ಕಾಳೆ, ರಾಜಾಸಾಬ ಕಡಕೊಳ, ಸುರೇಶಗೌಡ ಪಾಟೀಲ, ರಾಜುಗೌಡ ಪಾಟೀಲ ಬಸವರಾಜ ಬಿರಾದಾರ, ಕೃಷ್ಣಾ ತಳವಾರ, ರಮೇಶ ಆಳಬಾಳ, ರವಿ ತೊದಲಬಾಗಿ, ವೃಷಭನಾಥ ಆಲಗೂರ ಇತರರು ಇದ್ದರು.

ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ- ಕಾಂಗ್ರೆಸ್ಸಿಗೆ ಸೋಲು: ಚಂದ್ರಶೇಖರ ನಾಲತ್ವಾಡ ವಿಷಾದ- ಸುಲಭ ಗೆಲುವ ಮರೆತ ನಾಯಕರು: ಕಾಂಗ್ರೆಸ್ಸಿಗೆ ಹಿನ್ನಡೆ

ಸ್ಥಳೀಯ ಸಂಸ್ಥೆಗಳ ಯೋಜನಾ ಸಮಿತಿ ಸದಸ್ಯರ ಚುನಾವಣೆ- ೬ ಸ್ಥಾನಕ್ಕೆ ೪ ಬಿಜೆಪಿ ೨ ಕಾಂಗ್ರೆಸ್ ಸದಸ್ಯರು ಆಯ್ಕೆ- ಬಿಜೆಪಿ ಮುಖಂಡರಿಗೆ ಹರ್ಷ: ಕಾಂಗ್ರೆಸ್ಸಿಗರಿಗೆ ಸೋಲಿನ ಮುಜುಗರ

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ