

26th December 2025

ಜಮಖಂಡಿ: ನಗರ ಮಾದರಿ ನಗರವನ್ನಾಗಿ ರೂಪಿಸಲು ಯೋಜನೆ ಹಾಕಿಕೊಂಡಿದ್ದೆವೆ ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.
ನಗರದ ಬಸವೇಶ್ವರ ಸರ್ಕಲ್ನಿಂದ ವಿಜಯಪೂರ ರಸ್ತೆಯ ಸ್ವಾಗತ ಕಮಾನ ವರೆಗೆ, ಕುಂಬಾರಹಳ್ಳ ಪ್ಲಾಟ್ನಿಂದ ಆಲಗೂರ ಮರುಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಮಖಂಡಿ ಜಿಲ್ಲೆ ಆಗಲು ಮಾನದಂಡಗಳನ್ನು ಕ್ರೂಡಿಕರಣ ಮಾಡಲಾಗುತ್ತಿದೆ, ಅದಕ್ಕೆ ವಕೀಲರನ್ನು ನೇಮಿಸಲಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ನಮ್ಮ ಕ್ಷೇತ್ರದ ಅಭಿವೃದ್ದಿ ಯೋಜನೆಗಳಿಗೆ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಆದರೂ ನಾವು ತಂದು ಕಾರ್ಯ ಮಾಡುತಿದ್ದೆವೆ ಎಂದರು.
ಗ್ರಾಮೀಣ ಭಾಗದಲ್ಲಿ ರಸ್ತೆಗಳ ರಿಪೇರಿ ಕಾರ್ಯ ಮಾಡುತ್ತಿದ್ದೆವೆ ಎಂದರು.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ನಮ್ಮ ಭಾಗದ ಬಗ್ಗೆ ಚರ್ಚಿಸಲು ಸಮಯವನ್ನೆ ನೀಡಲಿಲ್ಲ, ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಉಂಟಾಗುತ್ತಿದೆ ಎಂದರು.
ಕಾಂಗ್ರೆಸ್ ಶಾಸಕರೆ ಕಾಂಗ್ರೆಸ್ ಸರ್ಕಾರದ ವಿರುದ್ದ ತಮ್ಮ ಅಸಮಾಧಾನ ತೊಡಿಕೊಳ್ಳುತಿದ್ದಾರೆ, ಯುಕೆಪಿಯ ೭೦ ಸಾವಿರ ರೈತರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ರೈತರು ಮನಸ್ಸು ಮಾಡಬೇಕು ಎಂದರು.
ನಗರದಲ್ಲಿ ೨೫ ಕೋಟಿ ರೂ ವೆಚ್ಚದಲ್ಲಿ ಕಾರ್ಯಗಳು ನಡೆಯುತ್ತಿವೆ ಎಂದರು.
ನೂತನ ಜಮಖಂಡಿ ನಗರ ಬಹಳ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ೨ ಸಾವಿರ ಎಕರೆ ಭೂಮಿ ಅವಶ್ಯಕತೆ ಬಹಳ ಇದೆ ಅದರ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೆರಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಡಾ.ವಿಜಯಲಕ್ಷ್ಮೀ ತುಂಗಳ, ಅಜಯ ಕಡಪಟ್ಟಿ, ಸಿ.ಟಿ.ಉಪಾದ್ಯ, ಶ್ರೀಧರ ಕಂಬಿ, ರಾಜು ಕಡಕೊಳ ಇತರರು ಇದ್ದರು.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ