Skip to main content
ಕಲಬುರಗಿ ವೇಗವಾಹಿನಿ
News

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು

14th April 2025

ಕಲಬುರಗಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಿಜಯಕುಮಾರ ಲೆಂಗಟಿ , ರಾಜು ವಾಡೇಕರ , ನೀಲಕಂಠ ಬಬಲಾದ , ಗೀತಾ ವಾಡೇಕರ ಇತರರು ಇದ್ದರು

News

30 ಲಕ್ಷದ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

8th April 2025

ಕಲಬುರಗಿ :-  ನಗರದ ಬಿಎಸ್ಏನ್ಎಲ್ ಬಡಾವಣೆ ಕೊಟ್ನೂರ್ (ಡಿ )ಯಲ್ಲಿ ದಿನಾಂಕ 6.4.2025 ರಂದು 30 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ ಸನ್ಮಾನ್ಯ ಶ್ರೀ ಅಲ್ಲಮಪ್ರಭು ಪಾಟೀಲ್ ಶಾಸಕರು ದಕ್ಷಿಣ ಮತಕ್ಷೇತ್ರ ಗುದ್ದಲಿ ಪೂಜೆ ನೆರವೇರಿಸುವುದರ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬುದ್ಧ ಬಸವ ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜ್ಯ ಮಹಾಪೌರರಾದ ಶ್ರೀ ಎಲ್ಲಪ್ಪ ನಾಯ್ಕೋಡಿ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಕಿಶೋರ್ ಗಾಯಕ್ವಾಡ್ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರು, ಬಿಎಸ್ಎನ್ಎಲ್ ಬಡಾವಣೆಯ ಗೌರವ ಅಧ್ಯಕ್ಷರಾದ ಡಾ ಪಂಡಿತ್ ಕಾಂಬ್ಳೆ, ಮುಖಂಡರಾದ ಶ್ರೀ ಟಿ ವೈ ಎಲ್ಲಪ್ಪ, ಶ್ರೀ ಬಸಲಿಂಗಪ್ಪ ಎಸ್ ಬಿರಾದರ್, ಟಿ ರಾಘವೇಂದ್ರ, ದಿನೇಶ್ ದೊಡ್ಡಮನಿ, ವಿಜಯಕುಮಾರ್ ಕೋಬಾಳ್, ರೋಹಿದಾಸ್ ಶೀಲ ಮೂರ್ತಿ, ಶ್ರೀ ಕಮಲಾಕರ್ ದನ್ನಿ,ಮರಿಯಪ್ಪ ಹಾವೇರಿ,ಶ್ರೀ ಗೋಪಾಲ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು . ಧನ್ಯವಾದಗಳು .    ಶ್ರೀ ಕಿಶೋರ್ ಆರ್ ಗಾಯಕವಾಡ ಕಾಂಗ್ರೆಸ್ ಮುಖಂಡರು ಕಲ್ಬುರ್ಗಿ.

News

*ಡೀಸೆಲ್ ದರ ಏರಿಕೆಗೆ ಬಾಲರಾಜ್ ಗುತ್ತೇದಾರ ಖಂಡನೆ*

1st April 2025


ವೇಗ ವಾಹಿನಿ


 ಕಲಬುರಗಿ: ಡೀಸೆಲ್ ದರ ಲೀಟರಿಗೆ ₹2 ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಅವರು ಕಟುವಾಗಿ ಟೀಕಿಸಿದ್ದಾರೆ.



ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯದ ಜನತೆಗೆ ಇನ್ನೊಂದು ಶಾಕ್ ನೀಡಿದೆ ಎಂದಿದ್ದಾರೆ.


ಕಳೆದ ಹತ್ತು ತಿಂಗಳಲ್ಲಿ ಡಿಸೇಲ್ ಪ್ರತಿ ಲೀಟರಿಗೆ ₹5 ಏರಿಕೆ ಭಾಗ್ಯ ಕೊಟ್ಟಿರುವ ರಾಜ್ಯ ಕಾಂಗ್ರೆಸ್ ಸರಕಾರ, ಯುಗಾದಿ ಹೊಸ ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರಕಾರ ವಿಜೃಂಭಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಬೆಳಗ್ಗೆ ನಿದ್ರೆಯಿಂದ ಜನರೆದ್ದರೆ ಸುಲಿಗೆ ಬರೆ ಹಾಕುತ್ತಿದೆ ಎಂದರು.

ಕೂಡಲೆ ಹಾಲಿನ ಹಾಗೂ ಡಿಸೆಲ್ ದರ್ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

News

ಕಲಬುರಗಿ:- ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿ ಕರ್ನಾಟಕ ರಾಜ್ಯ ರೈತ‌ ಸಂಘ ಹಾಗೂ ರೈತ ಸೇನೆ ವತಿಯಿಂದ ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ ಪಂಚಾಯತ ಅಭಿವದ್ಧಿ ಅಧಿಕಾರಿಯನ್ನು ಕೂಡಲೆ ಕೆಲಸದಿಂದ ವಜಾಗೊಳಿಸವ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಅಣವಿರಪ್ಪ ಎಸ್. ಹೆಬ್ಬಾಳ ಅವರ ಸಮುಖದಲ್ಲಿ ಮನವಿ‌ ಪತ್ರ ಸಲ್ಲಿಸಿದ್ದರು .

25th March 2025

ಕಲಬುರಗಿ:- ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿ ಕರ್ನಾಟಕ ರಾಜ್ಯ ರೈತ‌ ಸಂಘ ಹಾಗೂ ರೈತ ಸೇನೆ ವತಿಯಿಂದ

 ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ ಪಂಚಾಯತ ಅಭಿವದ್ಧಿ ಅಧಿಕಾರಿಯನ್ನು ಕೂಡಲೆ ಕೆಲಸದಿಂದ ವಜಾಗೊಳಿಸವ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಅಣವಿರಪ್ಪ ಎಸ್. ಹೆಬ್ಬಾಳ ಅವರ ಸಮುಖದಲ್ಲಿ 

ಮನವಿ‌ ಪತ್ರ ಸಲ್ಲಿಸಿದ್ದರು .


ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ. ಪಂಚಾಯತಿಯ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿರುವ ಜನರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆ, ರೈತಪರ ಹೋರಾಟ ಸಂಘಕ್ಕೆ ಸಲ್ಲಿಸಿರುವ ದೂರಿನನ್ವಯ ಈ ಕೆಳಕಂಡ ಶ್ರೀ ಸೂರ್ಯಾಕಾಂತ ಬೆಳಗುಂಪಿ ಗ್ರಾಂ ಪಂಅಭಿವದ್ಧಿ ಅಧಿಕಾರಿಯು ಸರಕಾರ ನೀಡಿರುವ ಜವಬ್ದಾರಿಯುತ ಹುದ್ದೆಯನ್ನು ಸರಿಯಾಗಿ ನಿರ್ವಹಿಸದೆ ಪಂಚಾಯಿತಿ ಕಾರ್ಯಲಯಕ್ಕೆ ದಿನಾಲು ಹಾಜರಾಗದೆ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅನಾವಶ್ಯಕವಾಗಿ ತೊಂದರೆ ಯಾಗುತ್ತಿದ್ದು, ಪಂಚಾಯತ ಕಾರ್ಯಲಯದ ಅಧ್ಯಕ್ಷರು ಮತ್ತು ಸದಸ್ಯರು ಹಲವಾರು ಬಾರಿ ಸರಕಾರ ನೀಡಿರುವ ಹುದ್ದೆಯನ್ನು ದಿನಾಲು ಕಾರ್ಯಲಯಕ್ಕೆ ಹಾಜರಗಿ ಸಾರ್ವಜನಿಕರ ಕೆಲಸಗಳನ್ನು ಸರಿಯಾದ ನಿಟ್ಟಿನ್ನಲ್ಲಿ ನಿರ್ವಹಿಸಬೆಕೆಂದು ಹಲವಾರು ಬಾರಿ ಗ್ರಾಮ ಪಂಚಾಯತ ಸಭೆಯಲ್ಲಿ ಮನವಿ ಮಾಡಿಕೊಂಡರು ನಿರ್ಲಕ್ಷಿಸುತ್ತಿದ್ದು ಕೂಡಲೆ ಇಂತಹ ಅಧಿಕಾರಯ ವಿರುದ್ಧ ಸೂಕ್ತ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಿ ಇವರಮೇಲೆ ಕಾನೂನ ರೀತಿಯ ಕ್ರಮ ಜರುಗಿಸಿ ಕೂಡಲೆ ಅಧಿಕಾರದಿಂದ ವಜಾಗೊಳಿಸಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಕೆಳಕಂಡ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರ ವಿನಂತಿಯ ಮೇರೆಗೆ ನಮ್ಮ ಸಂಘದ ವತಿಯಿಂದ ಮತ್ತೊಮ್ಮೆ ಕಳಕಳಿಯಿಂದ ಮನವಿ ವಿನಂತಿಸಿಕೊಂಡರು

News

*ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ವಜಾ ಮಾಡಲು ಆಗ್ರಹಿಸಿ ಬಹುಜನ ಸಮಾಜ ಪಕ್ಷ ವತಿಯಿಂದ ಪ್ರತಿಭಟನೆ*

24th December 2024


ವಿಷಯ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ವಜಾ ಮಾಡಲು ಆಗ್ರಹಿಸಿ


ಸಂಸತ್ ಅಧಿವೇಶನದಲ್ಲಿ ಭಾರತ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರನ್ನು ಪದೇ ಪದೇ ಉಚ್ಛರಿಸುವ ಬದಲು ದೇವರನ್ನು ಸ್ಮರಿಸಿದ್ದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತು ಎಂದು ಮಾತನಾಡಿದ್ದಾರೆ. ಇದು ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನದ ಮೇಲಿರುವ ಅಸಹನೆಯ ಪ್ರತೀಕವಾಗಿದೆ.

ಸಾವಿರಾರು ವರ್ಷಗಳಿಂದ ಜಾತಿ ಆಧಾರದ ಮೇಲೆ ಈ ದೇಶದ ಬಹು ಸಂಖ್ಯಾತರಾದ ಎಸ್ಸಿ,ಎಸ್ಟಿ, ಒಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿದ್ಯೆ, ಅಸ್ತಿ, ಅಧಿಕಾರಗಳನ್ನು ನಿರಾಕರಿಸಿಕೊಂಡು ಬಂದ ಮನುವಾದಿ ಮೇಲ್ದಾತಿಗೆ ಸೇರಿದ ಅಮಿತ್ ಷಾ ಮತ್ತು ಅವರ ಬಿಜೆಪಿ ಹಾಗೂ ಆರ್ ಎಸ್ ಎಸ್ ನವರಿಗೆ ಸ್ವಾತಂತ್ರ್ಯ ಸಮಾನತೆಯ ಆಶಯಗಳನ್ನು ಎಂದೂ ಕೂಡ ಒಪ್ಪಿಕೊಳ್ಳಲು ಹಾಗೂ ಸಹಿಸಿಕೊಳ್ಳಲು ಆಗುವುದಿಲ್ಲ.


ಆ ಕಾರಣಕ್ಕಾಗಿ ಅವಕಾಶ ಸಿಕ್ಕಿದಾಗಲೆಲ್ಲ ಬಾಬಾ ಸಾಹೇಬ್ ಅಂಬೇಡ್ಕರ್, ಸಂವಿಧಾನ, ಮೀಸಲಾತಿಯನ್ನೂ ಕುರಿತು ಕೇವಲವಾಗಿ, ಅವಹೇಳನಕಾರಿಯಾಗಿ ಮಾತನಾಡುವುದು ರೂಢಿಗತವಾಗಿ ಬಂದಿದೆ.

ಇಂಥ ಮನುವಾದಿ ಮತ್ತು ಜಾತಿವಾದಿ ವ್ಯಕ್ತಿಗಳು ಸಂವಿಧಾನದ ಆಧಾರದ ಮೇಲೆ ರಚನೆಯಾಗಿರುವ ಸರ್ಕಾರದಲ್ಲಿ ಮಂತ್ರಿಯಾಗಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಆದ್ದರಿಂದ ಬಾಬಾ ಸಾಹೇಬ್‌ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿ ಇರುವ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ತಕ್ಷಣ ವಜಾ ಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸುತ್ತದೆ. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಆನಂದ್ ಮಸ್ಕಿ ಹಾಗೂ ಎಲ್ ಆರ್ ಭೋಸ್ಲೆ , ಹುಚ್ಚಪ್ಪ ವ‌‌ಠಾರ , ಮೈಲಾರಿ ಶೆಳ್ಳಗಿ , ಅನಿಲ್ ಟೇಂಗಳಿ , ಗೌತಮ ಬೋಮ್ನಳ್ಳಿ ,ಜೈ ಭೀಮ್ ಶಿಂದೆ , ಇತರರು ಇದ್ದರು