19th December 2024

ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಾಲ್ಯ ವಿವಾಹ ಪ್ರಕರಣ: ಮೂವ್ವರಿಗೆ ಜೈಲು ಶಿಕ್ಷೆ- ಗಂಗಾವತಿ ನ್ಯಾಯಾಲಯದಲ್ಲಿ ತೀರ್ಪು ಪ್ರಕಟ