26th June 2025

ಕೋಲಾರ:- ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾಣಿಸಿಕೊಂಡ ಬೆಂಕಿಯಿ0ದಾಗಿ ಸೋಫಾ-ಕುಶನ್ ಗೋದಾಮುಗಳು ಹಾಗೂ ಪ್ಲಾಸ್ಟಿಕ್ ಕಾರ್ಖಾನೆ ಸಂಪೂರ್ಣ ಭಸ್ಮವಾಗಿರುವ ಘಟನೆ ನಗರದ ಅರಹಳ್ಳಿ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಪ್ರಮಾಣ ತೀವ್ರವಾಗಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿ, 2 ವಾಹನಗಳಲ್ಲಿ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು.
ಆ ವೇಳೆಗಾಗಲೇ ಬೆಂಕಿಯ ಕೆನ್ನಾಲಿಗೆ ಎಲ್ಲವನ್ನೂ ಆಹುತಿ ಪಡೆದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು.
ಇಡೀ ನಗರಕ್ಕೆ ಕಾಣಿಸುವಂತೆ ದಟ್ಟ ಹೊಗೆಯು ಕಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸತತ 5-6 ಗಂಟೆಗಳಿಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಲಾಯಿತು.
ಅರಹಳ್ಳಿ ಮುಖ್ಯ ರಸ್ತೆ ಪಕ್ಕದಲ್ಲೇ ಘಟನೆ ನಡೆದಿದ್ದರಿಂದಾಗಿ ನೋಡುವುದಕ್ಕಾಗಿ ನೂರಾರು ಮಂದಿ ಜಮಾಯಿಸಿದ್ದರು. ಗಲ್ಪೇಟೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
undefined

ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026. ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಭೀಮಣ್ಣ ಖಂಡ್ರೆಗೆ ಮೋಹನ ಪಾಟೀಲರಿಂದ ಗೌರವ

ಮರಡಿನಾಗಲಾಪೂರ ಪ್ರಾಥಮಿಕ ಶಾಲೆಯಲ್ಲಿ* *ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ