ಎಡಿಸಿಗೆ ಜಿಲ್ಲಾ ಕಸಾಪದಿಂದ ಸ್ವಾಗತ
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ನೂತನ ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿರುವ ಬಿ.ಸಿ.ಶಿವಾನಂದ ಮೂರ್ತಿಯವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಹಾಗೂ ಸಮ್ಮೇಳನದ ಸಂಚಾಲಕಿ ಮೀರಾ ಶಿವಲಿಂಗಯ್ಯ, ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ವಿ ಪಣ್ಣೆದೊಡ್ಡಿ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ತಾಲೂಕು ಅಧ್ಯಕ್ಷ ಚಂದ್ರಲಿAಗು, ಸಂಘ ಸಂಸ್ಥೆ ಪ್ರತಿನಿಧಿ ಹೊಳಲು ಶ್ರೀಧರ್,ಸಹಕಾರ್ಯದರ್ಶಿಗಳಾದ ಬಸವೇಗೌಡ ಖರಡ್ಯ, ರಂಗಸ್ವಾಮಿ ಮುಂತಾದವರು ಹಾಜರಿದ್ದರು.







