
26th September 2024
ಮಲ್ಲಮ್ಮ ನುಡಿ ವಾರ್ತೆ
ಬೆಂಗಳೂರು, ಸೆಪ್ಟೆಂಬರ್ ೨೪-ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಸರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮತ್ತು ಆ ಮೂಲಕ ಸರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.
ಆಗಸ್ಟ್-೨೦೨೪ರ ಮಾಹೆಯಲ್ಲಿ ವಿವಿಧ ಆಹಾರ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪನ್ನೀರ್ನ ೨೨೧ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಅವುಗಳಲ್ಲಿ ೨೨೦ ಮಾದರಿಗಳು ಸುರಕ್ಷಿತವಾಗಿದ್ದು, ೦೧ ಮಾದರಿಯು Subsಣಚಿಟಿಜಚಿಡಿಜ ಎಂದು ವರದಿಯಾಗಿರುತ್ತದೆ.
ಕೇಕ್ ನ ೨೩೫ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು ಅವುಗಳಲ್ಲಿ ೨೨೩ ಮಾದರಿಗಳು ಸುರಕ್ಷಿತವಾಗಿದ್ದು, ೧೨ ಮಾದರಿಗಳು ಂಟಟuಡಿಚಿ ಖeಜ, Suಟಿseಣ ಙeಟಟoತಿ-ಈಅಈ, Poಟಿಛಿeಚಿu ೪ಖ, ಖಿಚಿಡಿಣಡಿಚಿziಟಿe ಕೃತಕ ಬಣ್ಣಗಳನ್ನು ನಿಗದಿತ ಮಾನದಂಡಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಳಸಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ.
ಕೋವಾದ ೬೫ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಅವುಗಳಲ್ಲಿ ೬೪ ಮಾದರಿಗಳು ಸುರಕ್ಷಿತವಾಗಿದ್ದು, ೦೧ ಮಾದರಿಯು Subsಣಚಿಟಿಜಚಿಡಿಜ ಎಂದು ವರದಿಯಾಗಿರುತ್ತದೆ.
ಸೆಪ್ಟೆಂಬರ್-೨೦೨೪ರ ಮಾಹೆಯಲ್ಲಿ 'ರಾಜ್ಯಾದ್ಯಂತ ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ೨೦೦೬ರ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಖಚಿತಪಡಿಸಿಕೊಳ್ಳಲು ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ೧೪೨ ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದೆ.
ರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸ್ಥಾಪಿಸಿರುವ ೩೫ ಹೋಟೆಲ್ ಘಟಕಗಳಲ್ಲಿ ಗ್ರಾಹಕರುಗಳಿಗೆ ಸರಬರಾಜು ಮಾಡಲಾಗುವ ಆಹಾರ ಪದರ್ಥಗಳ ಗುಣಮಟ್ಟವನ್ನು ಪರಿಶೀಲಿಸಲು ಸೆಪ್ಟೆಂಬರ್ ೪ ಮತ್ತು ೫ ರಂದು ೩೫ ತಪಾಸಣೆ ಮಾಡಲಾಗಿದೆ.
ಸರ್ವಜನಿಕರಿಗೆ ಮತ್ತು ಆಹಾರ ಉದ್ದಿಮೆದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಜರುಗಿಸಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆರನ್ನು ನಾಯಿಗೆ ಹೋಲಿಕೆ ಮಾಡಿ ನಿಂದನೆ- ಕಾನೂನು ಕ್ರಮಕ್ಕೆ ಅಲ್ಲಂ ಪ್ರಶಾಂತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಜಿಲ್ಲಾ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಾದೇಶಿಕ ಸಾರಿಗೆ ಕಚೇರಿಗೆ ಬೇಟಿ ಸ್ಪಿಡ್ ಗವರ್ನರ್ ಕಡ್ಡಾಯವಾಗಿ ಆಳವಡೆಕೆ ಮಾಡಬೇಕು ಎಂದು ಸೂಚನೆ