
26th April 2025
ಬೀದರ. ಏ. 25 :- 'ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ದೂರು ಬಂದ ಕಡೆಗಳಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚಿಸಿದರು.
ಬೀದರ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಜನ, ಜಾನುವಾರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಯೋಜನೆ ರೂಪಿಸಿ, ಕಾರ್ಯಗತಗೊಳಿಸಬೇಕು. ಗ್ರಾಮಗಳ ಜಲ ಮೂಲಗಳ ಮಾಹಿತಿ ಪಡೆಯಬೇಕು. ಸಣ್ಣ ಪುಟ್ಟ ದುರಸ್ತಿ ಕಾರ್ಯಗಳನ್ನು ವಾರದೊಳಗೆ ಕೈಗೊಳ್ಳಬೇಕು. ಕೊಳವೆಬಾವಿಗಳ ಸಮರ್ಪಕ ಕಾರ್ಯ ನಿರ್ವಹಣೆ ಬಗ್ಗೆ ಗಮನ ಹರಿಸಬೇಕು. ಚೆಕ್ ಡ್ಯಾಂಗಳ ನಿರ್ಮಾಣದ ಮೂಲಕ ಅಂತರ್ಜಲ ಹೆಚ್ಚಿಸಬೇಕು ಎಂದು ಹೇಳಿದರು.
ಸಮಸ್ಯಾತ್ಮಕ ಗ್ರಾಮಗಳು ಹಾಗೂ ವಸತಿ ನಿಲಯಗಳಿಗೆ ಕೂಡಲೇ ನೀರು ಪೂರೈಸಬೇಕು. ಗೋಶಾಲೆಗಳಿಗೆ ಮೇವು ಒದಗಿಸಬೇಕು. ಗ್ರಾಮಗಳಲ್ಲಿ ಜಾನುವಾರುಗಳಿಗೆ ನೀರಿನ ತೊಟ್ಟಿ ನಿರ್ಮಿಸಿ, ನೀರಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ದಿಸೆಯಲ್ಲಿ ವಿಶೇಷ ನಿಗಾ ವಹಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕಿರಣ ಪಾಟೀಲ, ಸಹಾಯಕ ನಿರ್ದೇಶಕರಾದ ಸಂಜುಕುಮಾರ ಕಾಡವಾದ್, ಸುದೇಶ್ ಇದ್ದರು.
ಕನ್ನಡ ಭಾಷಾಭಿಮಾನವನ್ನು ಬೆಳೆಸಿದವರು ಡಾ. ರಾಜ್ಕುಮಾರ್ - ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ
ಕರ್ನಾಟಕ ಜಾನಪದ ಅಕಾಡೆಮಿ ಸ್ಥಾಯಿ ಸಮಿತಿ ಸದಸ್ಯರಾಗಿ ವಿಜಯಕುಮಾರ್ ಸೋನಾರೆ ಆಯ್ಕೆ.