

12th October 2025

ಮೂರ್ತಿಗೆ ಅವಮಾನ ಮಾಡಿದವರಿಗೆ ಗಡಿಪಾರು ಮಾಡಿ ಮಲ್ಲು ಪೂಜಾರಿ
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತಗಾ ಗ್ರಾಮದಲ್ಲಿ ಶರಣಸಾಹಿತ್ಯದ ಶ್ರೇಷ್ಠ ಶರಣ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಗೆ ಭಗ್ನ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದ ಯುವ ಘಟಕದ ಜಿಲ್ಲಾಧ್ಯಕ್ಷ ಮಲ್ಲು ಪೂಜಾರಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡುತ್ತಾ – “ಅಂಬಿಗರ ಚೌಡಯ್ಯನವರು ನಮ್ಮ ಸಮಾಜದ ಆದರ್ಶಪುರುಷರು. ಅವರ ಮೂರ್ತಿಯನ್ನು ಹಾಳುಮಾಡಿದ ಕೃತ್ಯವು ಕೇವಲ ಮೂರ್ತಿಗೆ ಮಾತ್ರವಲ್ಲ, ಸಂಪೂರ್ಣ ಸಮಾಜದ ಗೌರವಕ್ಕೆ ಅವಮಾನವಾಗಿದೆ,” ಎಂದು ಹೇಳಿದ್ದಾರೆ

ಬಾಲ್ಯ ವಿವಾಹ ಪ್ರಕರಣ: ಮೂವ್ವರಿಗೆ ಜೈಲು ಶಿಕ್ಷೆ- ಗಂಗಾವತಿ ನ್ಯಾಯಾಲಯದಲ್ಲಿ ತೀರ್ಪು ಪ್ರಕಟ