

12th October 2025

ಮೂರ್ತಿಗೆ ಅವಮಾನ ಮಾಡಿದವರಿಗೆ ಗಡಿಪಾರು ಮಾಡಿ ಮಲ್ಲು ಪೂಜಾರಿ
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತಗಾ ಗ್ರಾಮದಲ್ಲಿ ಶರಣಸಾಹಿತ್ಯದ ಶ್ರೇಷ್ಠ ಶರಣ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಗೆ ಭಗ್ನ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದ ಯುವ ಘಟಕದ ಜಿಲ್ಲಾಧ್ಯಕ್ಷ ಮಲ್ಲು ಪೂಜಾರಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡುತ್ತಾ – “ಅಂಬಿಗರ ಚೌಡಯ್ಯನವರು ನಮ್ಮ ಸಮಾಜದ ಆದರ್ಶಪುರುಷರು. ಅವರ ಮೂರ್ತಿಯನ್ನು ಹಾಳುಮಾಡಿದ ಕೃತ್ಯವು ಕೇವಲ ಮೂರ್ತಿಗೆ ಮಾತ್ರವಲ್ಲ, ಸಂಪೂರ್ಣ ಸಮಾಜದ ಗೌರವಕ್ಕೆ ಅವಮಾನವಾಗಿದೆ,” ಎಂದು ಹೇಳಿದ್ದಾರೆ

ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ರಾಷ್ಟ್ರಕವಿ ನಿವಾಸ "ಗಿಳಿವಿಂಡು "ಸಮಗ್ರ ಅಭಿವೃದ್ದಿಗಾಗಿ ಕೇರಳ - ಕರ್ನಾಟಕ ಮುಖ್ಯ ಮಂತ್ರಿಯವರಲ್ಲಿಗೆ ನಿಯೋಗ ಬೇಟಿಗೆ ನಿರ್ಧಾರ.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆ