ರಾಜ್ಯ ಕಾರ್ಯಾಲಯದಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಅಭಿನಂದನೆ.
ಯಾದಗಿರಿ:ಯಾದಗಿರಿ ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಅವರಿಗೆ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು
ನೇಮಕಾತಿ ಆದೇಶಪತ್ರವನ್ನು ನೀಡಿ, ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು ಹಾಗೂ ಪಕ್ಷದ ಸಂಘಟನೆಗಾಗಿ ಮತ್ತು ಬಲವರ್ಧನೆಗೆ ನಿರಂತರವಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯ ಸ್ವಾಮಿ
ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಪಕ್ಷದ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.







