

21st August 2024

ದಾವಣಗೆರೆ ತಾಲೂಕಿನ ಕೋಡಿಹಳ್ಳಿ ಕ್ಯಾಂಪ್'ನಲ್ಲಿ ಮಳೆಗೆ ಮನೆ ಬಿದ್ದು ಮೂವರು ಆಸ್ಪತ್ರೆಗೆ: ಆರೋಗ್ಯ ವಿಚಾರಿಸಿದ ಶಾಸಕ ಕೆ.ಎಸ್. ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿನ ಕೋಡಿಹಳ್ಳಿ ಕ್ಯಾಂಪ್ ನಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ಮನೆ ಬಿದ್ದು ಮೂವರು ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶದ ಮೂಲದ ಸುಕುಮಾರ್, ಕೃಷ್ಣ, ಮಂಜಿತ್ ಗಾಯಗೊಂಡವರು. ಇವರು ಕೂಲಿ ಕಾರ್ಮಿಕರಾಗಿದ್ದು, ಭತ್ತದ ನಾಟಿ ಮಾಡಲು ಬಂದು ಕೋಡಿಹಳ್ಳಿ ಕ್ಯಾಂಪ್ ನಲ್ಲಿ ಮನೆ ಬಾಡಿಗೆ ಪಡೆದು ವಾಸವಾಗಿದ್ದರು. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆ ಬಿದ್ದು ಈ ಘಟನೆ ನಡೆದಿದೆ.
ಈ ಸುದ್ದಿ ತಿಳಿದ ತಕ್ಷಣವೇ ಮಂಗಳವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಕುರುಬ ಸಮುದಾಯದ ವಿರುದ್ದ ಹೇಳಿಕೆ ಖಂಡನೀಯ ಸಿ.ಸಿ.ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ರುದ್ರಣ್ಣ ಗುಳಗುಳಿ

ಕಾಂಗ್ರೆಸ್ ಮಹಿಳೆಯರನ್ನು ಗ್ಯಾರಂಟಿಗೆ ಸಿಮೀತಗೊಳಿಸಿದೆ- ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಆರೋಪ

ಮಹಿಳಾ ಮೀಸಲಾತಿಗೆ ವಿರೋಧ: ಹೇಮಲತಾ ನಾಯಕ ಆಕ್ರೋಶ- ಸಾಮಾನ್ಯ ಮಹಿಳೆಯರಿಗೆ ಅಧಿಕಾರ:ಕಾಂಗ್ರೆಸ್ ಅಡ್ಡಿಪಡಿಸಿದೆ

2030ಕ್ಕೆ ಗದಗ ನಗರದಲ್ಲಿ ಸುಸಜ್ಜಿತವಾದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಎಚ್.ಕೆ. ಪಾಟೀಲ