

4th August 2026

ದಾವಣಗೆರೆ*: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಗಸ್ಟ್ 8 ಮತ್ತು 9ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕುವೆಂಪು ಕನ್ನಡ ಭವನದಲ್ಲಿ ಶಿವಾಯ ನಡೆದ ಸರಳ ಸಮಾರಂಭದಲ್ಲಿ ಶ್ರೀಕ್ಷೇತ್ರ ಜಗದ್ಗುರು ಪೀಠದ ಶ್ರೀ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಜಗದ್ಗುರುಗಳು, ಮಹಿಳೆಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಬೌದ್ಧಿಕ ಕೊಡುಗೆಯನ್ನು ಸಮಾಜ ಗುರುತಿಸುವಲ್ಲಿ ಇಂತಹ ಸಾಹಿತ್ಯ ಸಮ್ಮೇಳನಗಳ ಮಹತ್ವದ ಪಾತ್ರ ಇರುವುದೇ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳೆವಣಿಗೆಗೆ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯ ಎಂದು ತಿಳಿಸಿದರು.
*ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಜಗದ್ಗುರುಗಳು*
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಸುದೇವಪ್ಪ ತೊಗಲೇರಿ ವಹಿಸಿ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದೆ, ಜಿಲ್ಲೆಯ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಭಾಗವಹಿಸಿದ್ದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯಕ್, ತಾಲೂಕು ಕಸಾಪ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ಸಮ್ಮೇಳನದ ಪ್ರಧಾನ ಸಂಚಾಲಕರಾದ ಶ್ರೀಮತಿ ವಿಜಯಾ ಕೃಷ್ಣಮೂರ್ತಿ, ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾದ ಹೇಮಾ ಗಣೇಶ್ ಶೆಟ್ಟಿ, ಕಡವೆ ವೀರಯ್ಯ ಅಭ್ಯುದಯದ ನಿರ್ಮಲಾ ಶಿವಕುಮಾರ್, ಜಯಮ್ಮ ನೀಲಗುಂದ, ಯಶಾ ದಿನೇಶ್, ಸಂಧ್ಯಾ, ಸುರೇಶ್, ಓಂಕಾರಪ್ಪ, ರುದ್ರಮುನಿಸ್ವಾಮಿ, ಟಿ.ಎಸ್. ಶೈಲಜಾ, ಬಿ.ಎಸ್. ಗಾಯತ್ರಿ, ಪತ್ರಕರ್ತರಾದ ರಾಜೇಶ್, ವಿಜಯಾ ಮಹಾಂತೇಶ್, ರುದ್ರಮ್ಮ, ನಂದಿನಿ ಕಂದನೂಲು, ಸುನಂದ ವೆಂಕಟೇಶ್ ಹಾಗೂ ಕಸಾಪ ಪದಾಧಿಕಾರಿಗಳಾದ ಬಿಜೆಪಿ ಪ್ರಕಾಶ್, ಸತ್ಯಭಾಮ ಮಂಜುನಾಥ್, ಎಸ್.ಎಂ. ಮಲ್ಲಪ್ಪ ಬೇತೂರು ಭಾಗವಹಿಸಿದ್ದರು, ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---
*ಸಾರಾಂಶ*: ದಾವಣಗೆರೆಯಲ್ಲಿ ಆಗಸ್ಟ್ 8-9, 2026 ರಂದು ನಡೆಯಲಿರುವ "ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ"ದ ಆಹ್ವಾನ ಪತ್ರಿಕೆಯನ್ನು ಶ್ರೀಕ್ಷೇತ್ರ ಜಗದ್ಗುರುಗಳು ಬಿಡುಗಡೆ ಮಾಡಿದರು. ಮಹಿಳೆಯರ ಸಾಹಿತ್ಯ ಕೊಡುಗೆ ಒತ್ತು ನೀಡುವ ಈ ಸಮ್ಮೇಳನದಲ್ಲಿ ಸಾಕಷ್ಟು ಗಣ್ಯರು ಭಾಗವಹಿಸಿದ್ದರು.
ದಾವಣಗೆರೆ*: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಗಸ್ಟ್ 8 ಮತ್ತು 9ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕುವೆಂಪು ಕನ್ನಡ ಭವನದಲ್ಲಿ ಶಿವಾಯ ನಡೆದ ಸರಳ ಸಮಾರಂಭದಲ್ಲಿ ಶ್ರೀಕ್ಷೇತ್ರ ಜಗದ್ಗುರು ಪೀಠದ ಶ್ರೀ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಜಗದ್ಗುರುಗಳು, ಮಹಿಳೆಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಬೌದ್ಧಿಕ ಕೊಡುಗೆಯನ್ನು ಸಮಾಜ ಗುರುತಿಸುವಲ್ಲಿ ಇಂತಹ ಸಾಹಿತ್ಯ ಸಮ್ಮೇಳನಗಳ ಮಹತ್ವದ ಪಾತ್ರ ಇರುವುದೇ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳೆವಣಿಗೆಗೆ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯ ಎಂದು ತಿಳಿಸಿದರು.
*ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಜಗದ್ಗುರುಗಳು*
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಸುದೇವಪ್ಪ ತೊಗಲೇರಿ ವಹಿಸಿ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದೆ, ಜಿಲ್ಲೆಯ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಭಾಗವಹಿಸಿದ್ದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯಕ್, ತಾಲೂಕು ಕಸಾಪ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ಸಮ್ಮೇಳನದ ಪ್ರಧಾನ ಸಂಚಾಲಕರಾದ ಶ್ರೀಮತಿ ವಿಜಯಾ ಕೃಷ್ಣಮೂರ್ತಿ, ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾದ ಹೇಮಾ ಗಣೇಶ್ ಶೆಟ್ಟಿ, ಕಡವೆ ವೀರಯ್ಯ ಅಭ್ಯುದಯದ ನಿರ್ಮಲಾ ಶಿವಕುಮಾರ್, ಜಯಮ್ಮ ನೀಲಗುಂದ, ಯಶಾ ದಿನೇಶ್, ಸಂಧ್ಯಾ, ಸುರೇಶ್, ಓಂಕಾರಪ್ಪ, ರುದ್ರಮುನಿಸ್ವಾಮಿ, ಟಿ.ಎಸ್. ಶೈಲಜಾ, ಬಿ.ಎಸ್. ಗಾಯತ್ರಿ, ಪತ್ರಕರ್ತರಾದ ರಾಜೇಶ್, ವಿಜಯಾ ಮಹಾಂತೇಶ್, ರುದ್ರಮ್ಮ, ನಂದಿನಿ ಕಂದನೂಲು, ಸುನಂದ ವೆಂಕಟೇಶ್ ಹಾಗೂ ಕಸಾಪ ಪದಾಧಿಕಾರಿಗಳಾದ ಬಿಜೆಪಿ ಪ್ರಕಾಶ್, ಸತ್ಯಭಾಮ ಮಂಜುನಾಥ್, ಎಸ್.ಎಂ. ಮಲ್ಲಪ್ಪ ಬೇತೂರು ಭಾಗವಹಿಸಿದ್ದರು, ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
---
*ಸಾರಾಂಶ*: ದಾವಣಗೆರೆಯಲ್ಲಿ ಆಗಸ್ಟ್ 8-9, 2026 ರಂದು ನಡೆಯಲಿರುವ "ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ"ದ ಆಹ್ವಾನ ಪತ್ರಿಕೆಯನ್ನು ಶ್ರೀಕ್ಷೇತ್ರ ಜಗದ್ಗುರುಗಳು ಬಿಡುಗಡೆ ಮಾಡಿದರು. ಮಹಿಳೆಯರ ಸಾಹಿತ್ಯ ಕೊಡುಗೆ ಒತ್ತು ನೀಡುವ ಈ ಸಮ್ಮೇಳನದಲ್ಲಿ ಸಾಕಷ್ಟು ಗಣ್ಯರು ಭಾಗವಹಿಸಿದ್ದರು.

ಹಿಟ್ನಾಳ್ ಗೆ ಕೈತಪ್ಪಿದ ಸಚಿವ ಸ್ಥಾನ: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ ರಾಜೀನಾಮೆ- ಕೆಲವು ಕಾಂಗ್ರೆಸ್ ಪದಾಧಿಕಾರಿಗಳು ರಾಜೀನಾಮೆ

ಬರ ಪರಿಸ್ಥಿತಿ ಅಧ್ಯಯನಕ್ಕೆ ಉಸ್ತುವಾರಿ ಸಚಿವರ ನೇಮಕ- ಕೊಪ್ಪಳ ಜಿಲ್ಲೆಗೆ ತಂಗಡಗಿ: ಗದಗ ಜಿಲ್ಲೆಗೆ ರಾಯರೆಡ್ಡಿಗೆ ಉಸ್ತುವಾರಿ

ಪಿಎಸ್ ಐರಿಂದ ಡ್ಯಾಂನ ಮಣ್ಣು ಅಕ್ರಮ ಸಾಗಾಣೆ- ಎಂಎಲ್ ಸಿ ಹೇಮಲತಾ ನಾಯಕರಿಂದ ಅಕ್ರಮ ಬಯಲು-ಕ್ರಮಕ್ಕೆ ಎಸ್ ಪಿಗೆ ಸೂಚನೆ