

3rd December 2025

ಮಂಡ್ಯ :- ವಿಕಲಚೇತನರನ್ನಲ್ಲಿ ವಿಶೇಷವಾದ ಚೈತನ್ಯ ಮತ್ತು ಚೇತನ ಇರುವುದರಿಂದ ಅವರನ್ನು ವಿಶೇಷಚೇನರು ಎಂದು ಕರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗ್ರಾಮೀಣ ಪುನರ್ವಸತಿ ಯೋಜನೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಸಂಜಯ ಟಾಕೀಸ್ ವೃತ್ತದಲ್ಲಿ ಆಯೋಜಿಸಲಾಗಿದ್ದ ವಿಕಲಚೇತನರ ಜಾಥಾ ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಹದ ಯಾವುದೋ ಒಂದು ಅಂಗವೈಕಲ್ಯ ಇರುವ ಕಾರಣದಿಂದ ಬದುಕೆ ಇಲ್ಲ ಎಂಬಂತೆ ತಿಳಿದುಕೊಳ್ಳುವುದು ತಪ್ಪು. ವಿಕಲಚೇತನರಲ್ಲಿ ವಿಶೇಷವಾದ ಪ್ರತಿಭೆ ಇರುತ್ತದೆ.ಅವರ ಪ್ರತಿಭೆಗೆ ಅನುಗುಣವಾಗಿ ಅವಕಾಶಗಳು ದೊರೆಯಬೇಕು. ಅವರೆಲ್ಲರೂ ಸ್ವಾವಲಂಬಿಗಳಾಗಿ ಬದುಕು ಸಾಗಿಸಬೇಕು ಇದೆ ನಮ್ಮ ಆಶಯ ಎಂದು ಹೇಳಿದರು.
ವಿಕಲಚೇತನರ ಪ್ರತಿಭೆ ಗುರುತಿಸಿ ಅವರಿಗೆ ಅವಕಾಶಗಳನ್ನು ಕಲ್ಪಿಸಬೇಕು ಅನುಕಂಪ ತೋರಿಸುವ ಅಗತ್ಯ. ವಿಶೇಷಚೇತನರು ಸಹ ನಮ್ಮಂತೆ ಎಂದು ಭಾವಿಸಬೇಕು. ಅವರು ಏಳಿಗೆಗಾಗಿ ನಾವು ಶ್ರಮಿಸಬೇಕು. ಮಂಡ್ಯ ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.
ಕಳೆದ ಆರು ತಿಂಗಳ ಹಿಂದೆ ವಿಕಲಚೇತನರ ಕುಂದು ಕೊರತೆಗಳ ಸಭೆ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಲಾಗಿತ್ತು. ವಿಶೇಷ ಚೇತನರಿಗೆ ಕೆಲವು ಉಪಕರಣಗಳನ್ನು ನೀಡಲಾಯಿತು. ಜಿಲ್ಲಾಡಳಿತ ವಿಕಲಚೇತನರ ಪರವಾಗಿ ಇರುತ್ತದೆ. ಅವರನ್ನು ಸ್ವಾವಲಂಬಿಗಳಾಗಿ ಮಾಡಲು ಶ್ರಮ ವಹಿಸುತ್ತದೆ ಎಂದು ಹೇಳಿದರು.
ಸಭೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ಪ್ರೇರಣಾ ಅಂದರ ಹಾಗೂ ಅಂಗವಿಕಲರ ವಸತಿ ನಿಲಯದ ಮುಖ್ಯಸ್ಥ ರವಿ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಂಡ್ಯ :- ವಿಕಲಚೇತನರನ್ನಲ್ಲಿ ವಿಶೇಷವಾದ ಚೈತನ್ಯ ಮತ್ತು ಚೇತನ ಇರುವುದರಿಂದ ಅವರನ್ನು ವಿಶೇಷಚೇನರು ಎಂದು ಕರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗ್ರಾಮೀಣ ಪುನರ್ವಸತಿ ಯೋಜನೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಸಂಜಯ ಟಾಕೀಸ್ ವೃತ್ತದಲ್ಲಿ ಆಯೋಜಿಸಲಾಗಿದ್ದ ವಿಕಲಚೇತನರ ಜಾಥಾ ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಹದ ಯಾವುದೋ ಒಂದು ಅಂಗವೈಕಲ್ಯ ಇರುವ ಕಾರಣದಿಂದ ಬದುಕೆ ಇಲ್ಲ ಎಂಬಂತೆ ತಿಳಿದುಕೊಳ್ಳುವುದು ತಪ್ಪು. ವಿಕಲಚೇತನರಲ್ಲಿ ವಿಶೇಷವಾದ ಪ್ರತಿಭೆ ಇರುತ್ತದೆ.ಅವರ ಪ್ರತಿಭೆಗೆ ಅನುಗುಣವಾಗಿ ಅವಕಾಶಗಳು ದೊರೆಯಬೇಕು. ಅವರೆಲ್ಲರೂ ಸ್ವಾವಲಂಬಿಗಳಾಗಿ ಬದುಕು ಸಾಗಿಸಬೇಕು ಇದೆ ನಮ್ಮ ಆಶಯ ಎಂದು ಹೇಳಿದರು.
ವಿಕಲಚೇತನರ ಪ್ರತಿಭೆ ಗುರುತಿಸಿ ಅವರಿಗೆ ಅವಕಾಶಗಳನ್ನು ಕಲ್ಪಿಸಬೇಕು ಅನುಕಂಪ ತೋರಿಸುವ ಅಗತ್ಯ. ವಿಶೇಷಚೇತನರು ಸಹ ನಮ್ಮಂತೆ ಎಂದು ಭಾವಿಸಬೇಕು. ಅವರು ಏಳಿಗೆಗಾಗಿ ನಾವು ಶ್ರಮಿಸಬೇಕು. ಮಂಡ್ಯ ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.
ಕಳೆದ ಆರು ತಿಂಗಳ ಹಿಂದೆ ವಿಕಲಚೇತನರ ಕುಂದು ಕೊರತೆಗಳ ಸಭೆ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಲಾಗಿತ್ತು. ವಿಶೇಷ ಚೇತನರಿಗೆ ಕೆಲವು ಉಪಕರಣಗಳನ್ನು ನೀಡಲಾಯಿತು. ಜಿಲ್ಲಾಡಳಿತ ವಿಕಲಚೇತನರ ಪರವಾಗಿ ಇರುತ್ತದೆ. ಅವರನ್ನು ಸ್ವಾವಲಂಬಿಗಳಾಗಿ ಮಾಡಲು ಶ್ರಮ ವಹಿಸುತ್ತದೆ ಎಂದು ಹೇಳಿದರು.
ಸಭೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ಪ್ರೇರಣಾ ಅಂದರ ಹಾಗೂ ಅಂಗವಿಕಲರ ವಸತಿ ನಿಲಯದ ಮುಖ್ಯಸ್ಥ ರವಿ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಡಂಬಳ ಗ್ರಾಮದಲ್ಲಿ ಆಹಾರ ಸಂರಕ್ಷಣಿಯ ಮೇಲ್ವಿಚಾರಣೆ ಕುರಿತು ತರಬೇತಿ ಕಾರ್ಯಕ್ರಮ