

3rd December 2025

ಮಂಡ್ಯ:- ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ನಡೆಯಲಿರುವ ಕೃಷಿ ಮೇಳ 2025 ಅನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದ್ದಾರೆ.
ಕೃಷಿ ಮೇಳ 2025 ರ ಅಂಗವಾಗಿ ಜಿಲ್ಲಾ ಪಂಚಾಯತಿನಿಂದ ವಿಸಿ ಫಾರ್ಮ್ ವರೆಗೂ ಆಯೋಜಿಸ ಲಾಗಿದ್ದ ಸೈಕಲ್ ಮತ್ತು ಬೈಕ್ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ನಾವಿನ್ಯತೆ, ತಂತ್ರಜ್ಞಾನ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡುವ ಅರ್ಥಪೂರ್ಣವಾದ ಕಾರ್ಯಕ್ರಮ ಇದಾಗಿದ್ದು ಕೃಷಿ ದೇಶದ ಬೆನ್ನೆಲುಬು. ಕೃಷಿಯಲ್ಲಿ ಪ್ರಗತಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಕಾಣುತ್ತದೆ. ಸದರಿ ಕೃಷಿ ಮೇಳದಲ್ಲಿ ಹೊಸ ಹೊಸ ತಂತ್ರಜ್ಞಾನ ಬಳಕೆ ಮತ್ತು ಹೊಸ ತಳಿಗಳ ಪ್ರದರ್ಶನ ಮಾಡಲಾಗುತ್ತದೆ ಎಲ್ಲಾ ರೈತರು ಕೃಷಿ ಮೇಳದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಡಿಸೆಂಬರ್ 5 ರಿಂದ 7 ರವರೆಗೂ ನಡೆಯಲಿರುವ ಕೃಷಿ ಮೇಳ 2025ರ ಕುರಿತಾಗಿ ರೈತರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಬೈಕ್ ಮತ್ತು ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್ ನಿಂದ ವಿ.ಸಿ ಫಾರ್ಮ್ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವರೆಗೂ ಜಾಥಾ ಸಾಗಲಿದೆ. ಇದರ ಉದ್ದೇಶ ಕೃಷಿ ಸಂಜೀವಿನಿಯ ಬಲವರ್ಧನೆಯನ್ನು ಹೇಗೆ ಸಾಧಿಸಬೇಕು ಇದರಿಂದ ಜನರಿಗೆ ಹೇಗೆ ಉಪಯೋಗ ಆಗುತ್ತದೆ ಎಂಬುದರ ಕುರಿತ ತಿಳಿಸುವುದು. ಹೊಸ ತಂತ್ರಜ್ಞಾನ ಬಳಸಿ ಸಮಗ್ರ ಕೃಷಿಯಿಂದ ಸುಸ್ಥಿರ ಪಡೆಯಬಹುದು ಎಂಬುದರ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ರೈತರು ಸಾಮಾನ್ಯ ಜನರು ಸಹ ಕೃಷಿ ಮೇಳದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದು. ಐದು ಜಿಲ್ಲೆಗಳಿಂದ ಬಂದ
ಎನ್ಆರ್ ಎಲ್ಎಂ ಮಹಿಳಾ ಸ್ವಸಹಾಯ ಗುಂಪಿನ ಮಹಿಳೆಯರು 50 ಹೆಚ್ಚು ಮಳಿಗೆಗಳನ್ನು ಕೃಷಿ ಮೇಳದಲ್ಲಿ ಸ್ಥಾಪನೆ ಮಾಡಲಿದ್ದಾರೆ. ವಿಭಿನ್ನ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಆದ ನಂತರ ಪ್ರಥಮ ಬಾರಿಗೆ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಸದರಿ ಕೃಷಿ ಮೇಳದಲ್ಲಿ ಅನೇಕ ಕೃಷಿ ವಿಜ್ಞಾನಿಗಳು ತಳಿಗಳ ಬಗ್ಗೆ ಪರಿಚಯ ಮಾಡಲಾಗುವುದು. ಯುವ ಸಮೂಹ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಹೇಳಿದರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಅವರು ಮಾತನಾಡಿ ಐದು ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ 5 ಜಿಲ್ಲೆಗಳ ರೈತ ಬಾಂಧವರು ಕೃಷಿ ಮೇಳದಲ್ಲಿ ಭಾಗವಹಿಸಲಿದ್ದಾರೆ. ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾಣಬಹುದು, ರೈತರು ಸಮಗ್ರ ಕೃಷಿಗೆ ಆದ್ಯತೆ ನೀಡಬೇಕು. ಸೂಕ್ತ ವಿಧಾನದ ಮೂಲಕ ವ್ಯವಸಾಯ ಮಾಡಿ ಆದಾಯ ಗಳಿಸುವುದು ಹೇಗೆ ಎಂಬುದರ ಬಗ್ಗೆ ಕೃಷಿ ಮೇಳದಲ್ಲಿ ತಿಳಿಸಲಾಗುವುದು. ರೈತರು ಕೃಷಿ ವಿಜ್ಞಾನಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಹೆಚ್ಚಿನ ರೈತರು ಕೃಷಿ ಮೇಳದಲ್ಲಿ ಭಾಗವಹಿಸಿ ಕೃಷಿ ಮೇಳದಲ್ಲಿ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಾಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಂಡ್ಯ:- ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ನಡೆಯಲಿರುವ ಕೃಷಿ ಮೇಳ 2025 ಅನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದ್ದಾರೆ.
ಕೃಷಿ ಮೇಳ 2025 ರ ಅಂಗವಾಗಿ ಜಿಲ್ಲಾ ಪಂಚಾಯತಿನಿಂದ ವಿಸಿ ಫಾರ್ಮ್ ವರೆಗೂ ಆಯೋಜಿಸ ಲಾಗಿದ್ದ ಸೈಕಲ್ ಮತ್ತು ಬೈಕ್ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ನಾವಿನ್ಯತೆ, ತಂತ್ರಜ್ಞಾನ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡುವ ಅರ್ಥಪೂರ್ಣವಾದ ಕಾರ್ಯಕ್ರಮ ಇದಾಗಿದ್ದು ಕೃಷಿ ದೇಶದ ಬೆನ್ನೆಲುಬು. ಕೃಷಿಯಲ್ಲಿ ಪ್ರಗತಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಕಾಣುತ್ತದೆ. ಸದರಿ ಕೃಷಿ ಮೇಳದಲ್ಲಿ ಹೊಸ ಹೊಸ ತಂತ್ರಜ್ಞಾನ ಬಳಕೆ ಮತ್ತು ಹೊಸ ತಳಿಗಳ ಪ್ರದರ್ಶನ ಮಾಡಲಾಗುತ್ತದೆ ಎಲ್ಲಾ ರೈತರು ಕೃಷಿ ಮೇಳದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಡಿಸೆಂಬರ್ 5 ರಿಂದ 7 ರವರೆಗೂ ನಡೆಯಲಿರುವ ಕೃಷಿ ಮೇಳ 2025ರ ಕುರಿತಾಗಿ ರೈತರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಬೈಕ್ ಮತ್ತು ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್ ನಿಂದ ವಿ.ಸಿ ಫಾರ್ಮ್ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವರೆಗೂ ಜಾಥಾ ಸಾಗಲಿದೆ. ಇದರ ಉದ್ದೇಶ ಕೃಷಿ ಸಂಜೀವಿನಿಯ ಬಲವರ್ಧನೆಯನ್ನು ಹೇಗೆ ಸಾಧಿಸಬೇಕು ಇದರಿಂದ ಜನರಿಗೆ ಹೇಗೆ ಉಪಯೋಗ ಆಗುತ್ತದೆ ಎಂಬುದರ ಕುರಿತ ತಿಳಿಸುವುದು. ಹೊಸ ತಂತ್ರಜ್ಞಾನ ಬಳಸಿ ಸಮಗ್ರ ಕೃಷಿಯಿಂದ ಸುಸ್ಥಿರ ಪಡೆಯಬಹುದು ಎಂಬುದರ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ರೈತರು ಸಾಮಾನ್ಯ ಜನರು ಸಹ ಕೃಷಿ ಮೇಳದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದು. ಐದು ಜಿಲ್ಲೆಗಳಿಂದ ಬಂದ
ಎನ್ಆರ್ ಎಲ್ಎಂ ಮಹಿಳಾ ಸ್ವಸಹಾಯ ಗುಂಪಿನ ಮಹಿಳೆಯರು 50 ಹೆಚ್ಚು ಮಳಿಗೆಗಳನ್ನು ಕೃಷಿ ಮೇಳದಲ್ಲಿ ಸ್ಥಾಪನೆ ಮಾಡಲಿದ್ದಾರೆ. ವಿಭಿನ್ನ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಆದ ನಂತರ ಪ್ರಥಮ ಬಾರಿಗೆ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಸದರಿ ಕೃಷಿ ಮೇಳದಲ್ಲಿ ಅನೇಕ ಕೃಷಿ ವಿಜ್ಞಾನಿಗಳು ತಳಿಗಳ ಬಗ್ಗೆ ಪರಿಚಯ ಮಾಡಲಾಗುವುದು. ಯುವ ಸಮೂಹ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಹೇಳಿದರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಅವರು ಮಾತನಾಡಿ ಐದು ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ 5 ಜಿಲ್ಲೆಗಳ ರೈತ ಬಾಂಧವರು ಕೃಷಿ ಮೇಳದಲ್ಲಿ ಭಾಗವಹಿಸಲಿದ್ದಾರೆ. ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾಣಬಹುದು, ರೈತರು ಸಮಗ್ರ ಕೃಷಿಗೆ ಆದ್ಯತೆ ನೀಡಬೇಕು. ಸೂಕ್ತ ವಿಧಾನದ ಮೂಲಕ ವ್ಯವಸಾಯ ಮಾಡಿ ಆದಾಯ ಗಳಿಸುವುದು ಹೇಗೆ ಎಂಬುದರ ಬಗ್ಗೆ ಕೃಷಿ ಮೇಳದಲ್ಲಿ ತಿಳಿಸಲಾಗುವುದು. ರೈತರು ಕೃಷಿ ವಿಜ್ಞಾನಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಹೆಚ್ಚಿನ ರೈತರು ಕೃಷಿ ಮೇಳದಲ್ಲಿ ಭಾಗವಹಿಸಿ ಕೃಷಿ ಮೇಳದಲ್ಲಿ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಾಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಡಂಬಳ ಗ್ರಾಮದಲ್ಲಿ ಆಹಾರ ಸಂರಕ್ಷಣಿಯ ಮೇಲ್ವಿಚಾರಣೆ ಕುರಿತು ತರಬೇತಿ ಕಾರ್ಯಕ್ರಮ