7th October 2024

ಸವದತ್ತಿ ಯಲ್ಲಮ್ಮದೇವಿಯ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್..
ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ವಿಶ್ವಾಸ ವೈದ್ಯರ ಜೊತೆ ಚರ್ಚೆ..
ಬೆಳಗಾವಿ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೋಮವಾರ (ಅ.7) ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.
ಇದಾದ ಬಳಿಕ ಸವದತ್ತಿ ಯಲ್ಲಮ್ಮ ಸುಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ ಅವರ ಜತೆ ಚರ್ಚಿಸಿದ್ದು, ಶಾಸಕರು ಪುಣ್ಯಕ್ಷೇತ್ರದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸುದೀರ್ಘವಾದ ಮಾಹಿತಿ ನೀಡಿದ್ದಾರೆ.
ಈ ವೇಳೆ ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಭೀಮಾಶಂಕರ ಗುಳೇದ ಸ್ಥಳೀಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*