
29th July 2025
ಕಾಂಪೌಂಡ್ ವಾಲ್ ನಿರ್ಮಿಸಿ ಕೊಡಲು ಭರವಸೆ
ಬಳ್ಳಾರಿ ಜುಲೈ 21. ಬಳ್ಳಾರಿ ನಗರದ ಕೌಲ್ ಬಜಾರ್ ಪ್ರದೇಶದ ಈದ್ಗಾ ರಸ್ತೆಯಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಶಾಲೆಯ ಕಾಂಪೌಂಡ್, ಕಟ್ಟಡ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ಪರಿಶೀಲಿಸಿದರು.
ಜೊತೆಗೆ 7, 8, 9 ಮತ್ತು 10ನೇ ತರಗತಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಸಹ ಪರಿಶೀಲಿಸಿ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹನುಮಂತ ಚರಕುಂಟೆ, ಸದಸ್ಯರಾದ ರಾಧ, ಪುಟ್ಟ ರಂಗೇಗೌಡ ,ಮಲ್ಲಯ್ಯ ಮತ್ತು ಶಾಲಾ ಮುಖ್ಯ ಉಪಾಧ್ಯಾಯರು ಶಿಕ್ಷಕರು ಸೇರಿದಂತೆ ಇತರರಿದ್ದರು.
29th July 2025
ಬಳ್ಳಾರಿ, ಜು.22: ಸಮುದಾಯ ಭವನ ನಿರ್ಮಿಬೇಕೆಂಬ ಮೋಚಿ ಸಮಾಜದ ಹಲವು ದಿನಗಳ ಪ್ರಯತ್ನಕ್ಕೆ ನಾನೂ ಕೈ ಜೋಡಿಸುವೆ, 25 ಲಕ್ಷ ರೂ.ಗಳ ಅನುದಾನವನ್ನು ಶೀಘ್ರ ಮಂಜೂರು ಮಾಡಿಸುವೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಮಂಗಳವಾರ ರೂಪನಗುಡಿ ರಸ್ತೆಯ ಮಣಿಕಂಠ ಕಾಲೋನಿಯಲ್ಲಿ ಶ್ರೀ ಶಾಂಭವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಒಟ್ಟಾರೆ ಸಮಾಜದ ಯಾವುದೇ ಸಮುದಾಯದ ಜನರಿರಲಿ, ಅವರು ಎಷ್ಟು ಸಂಖ್ಯೆಯಲ್ಲಿದ್ದರೂ ಅವರ ಬೇಡಿಕೆ ಈಡೇರಿಸುವುದು ನನ್ನ ಆದ್ಯ ಕರ್ತವ್ಯ, ಒಂದು ಸಮುದಾಯದ ಒಬ್ಬನೇ ವ್ಯಕ್ತಿ ಇದ್ದರೂ ನಿರ್ಲಕ್ಷ್ಯ ಮಾಡಲಾರೆ ಎಂದರು.
ಎಲ್ಲ ಸಮುದಾಯದವರನ್ನು ಜೊತೆಗೂಡಿಸಿಕೊಂಡು ಹೋಗಬೇಕೆಂಬ ತೀರ್ಮಾನ ಮಾಡಿರುವೆ, ಅದರ ಪ್ರಕಾರ ಎಲ್ಲ ಜಾತಿ-ಧರ್ಮದವರ ಏಳಿಗೆಗೆ ಶ್ರಮಿಸುವೆ, ಇದರಲ್ಲಿ ಮತಬ್ಯಾಂಕ್ ಅಥವಾ ರಾಜಕೀಯದ ಉದ್ಧೇಶ ಇಲ್ಲ ಎಂದರು.
ಸಮುದಾಯ ಭವನದ ಹೊರತಾಗಿ ಬೇರೆ ಏನೇ ಬೇಡಿಕೆಗಳಿದ್ದರೂ ಕೇಳಿ, ಈಡೇರಿಸುವೆ ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ಮೋಚಿ ಸಮುದಾಯದ ಜನರ ಅಭಿವೃದ್ಧಿ ಆಗಬೇಕು, ಸಮುದಾಯದ ಯುವಕರು ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಪಡೆಯಬೇಕು, ನಾನು ನಿಮ್ಮ ಸಮಾಜದ ಜೊತೆಗಿರುವೆ ಎಂದರು.
ಇದಕ್ಕೂ ಮುನ್ನ ಕಾಂಗ್ರೆಸ್ ಮುಖಂಡ ಹೊನ್ನಪ್ಪ ಮಾತನಾಡಿ; ಶಾಸಕ ನಾರಾ ಭರತ್ ರೆಡ್ಡಿಯವರು ಕೊಡುಗೈ ದಾನಿಗಳು, ನಿಮ್ಮ ಬೇಡಿಕೆ ಅವರು ಈಡೇರಿಸುತ್ತಾರೆ, ಅವರ ಮೇಲೆ ಮೋಚಿ ಸಮಾಜದ ಆಶೀರ್ವಾದ ಸದಾ ಇರಬೇಕು ಎಂದರು.
ಮೋಚಿ ಸಮಾಜದ ಮುಖಂಡ, ಪಾಲಿಕೆಯ ಬಿಜೆಪಿ ಸದಸ್ಯ ಗುಡಿಗಂಟಿ ಹನಮಂತು ಮಾತನಾಡಿ; ಶಾಸಕ ಭರತ್ ರೆಡ್ಡಿಯವರು ಕಾಂಗ್ರೆಸ್ಸಿನವರಾದರೂ ಅಭಿವೃದ್ಧಿ ವಿಷಯದಲ್ಲಿ ಪಕ್ಷ ಭೇದ ಮಾಡುವವರಲ್ಲ, ಪಾಲಿಕೆಯ ಸದಸ್ಯರ ಪೈಕಿ ನನ್ನ ಮೇಲೆ ಅವರಿಗೆ ಅಪಾರ ಪ್ರೀತಿ, ನಮ್ಮ ಸಮಾಜದ ಬಗ್ಗೆಯೂ ಅಷ್ಟೇ ಪ್ರೀತಿ, ಅವರ ಸಹಕಾರ ನಮಗೆ ಇರುತ್ತದೆ, ಅದೇ ರೀತಿ ಅವರಿಗೆ ಮುಂಬರುವ ದಿನಗಳಲ್ಲಿ ನಾವು ಸಮಾಜದವರು ಸಹಕರಿಸಬೇಕು ಎಂದರು.
ಪಾಲಿಕೆಯ ಸದಸ್ಯರಾದ ನೂರ್ ಮೊಹಮ್ಮದ್, ಮಿಂಚು ಸೀನಾ, ಕಾಂಗ್ರೆಸ್ ಮುಖಂಡರಾದ ಚಾನಾಳ್ ಶೇಖರ್, ಹಗರಿ ಗೋವಿಂದ, ಮೋಚಿ ಸಮಾಜದ ಮುಖಂಡರಾದ ರಾಮು, ದೇವಣ್ಣ ಮತ್ತಿತರರು ಹಾಜರಿದ್ದರು.
29th July 2025
ಬಳ್ಳಾರಿ ಜುಲೈ 23: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆ ತನ್ನ 76 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ಉಚಿತ ಗರ್ಭಕಂಠದ ತಪಾಸಣೆ ಕಾರ್ಯಕ್ರಮವನ್ನುFPA ಇಂಡಿಯಾದ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದಂತಹ ಡಾ. ಯೋಗಾನಂದ ರೆಡ್ಡಿ Y.C. ಮಕ್ಕಳ ತಜ್ಞರು ಅಧ್ಯಕ್ಷರು ಕರ್ನಾಟಕ ವೈದಕೀಯ ಕೌನ್ಸಿಲ್,ಉದ್ಘಾಟನೆ ಮಾಡಿ ಮಾತನಾಡಿದ ಅವರು FPA ಇಂಡಿಯಾದ ಆರೋಗ್ಯ ಸೇವೆಯು ಶ್ಲಾಘನೀಯವಾದದು, ಇದು ಇಷ್ಟು ವರ್ಷಗಳ ಕಾಲ ಎಂತಹ ಮಹತ್ವದ ಆರೋಗ್ಯ ಸೇವೆ ನೀಡುತ್ತ ಬಂದಿದೆ ಎಂದರೆ ಅಖಂಡ ಬಳ್ಳಾರಿ ಜಿಲ್ಲೆಯ ಜನತೆ 20% ರಷ್ಟು ಆರೋಗ್ಯ ಸೇವೆಯನ್ನು FPA ಇಂಡಿಯಾ ನೀಡುತ್ತಿರುವುದು ಅಕ್ಷರ ಸಹ ಸತ್ಯ ಎಂದರು ಇದರ ಜೊತೆಯಲ್ಲಿ ಸಂಸ್ಥೆಯ ಹೇಳ್ಗೆಗೆ ಶ್ರಮ ಪಟ್ಟಂತಹ ಡಾ. BK ಶ್ರೀನಿವಾಸ ಮೂರ್ತಿ ಅವರ ಅಪಾರ ಕೊಡುಗೆಯನ್ನು ಕೊಂಡಾಡಿದರು.
ನಂತರ ಮಾತನಾಡಿದ ಇನ್ನೋರ್ವ ಕಾರ್ಯಕ್ರಮದ ಅತಿಥಿಗಳು ಡಾ. ಜ್ಯೋತಿ ಅರವಿಂದ ಪಾಟೀಲ್ ಸ್ತ್ರೀ ರೋಗ ತಜ್ಞರು,ಅದ್ಯಕ್ಷರು OBG & GYN ಸೊಸೈಟಿ ಬಳ್ಳಾರಿ ಇವರು ಗರ್ಭಕೋಶದ ಕ್ಯಾನ್ಸರ್ ತಪಾಸಣೆ ಮತ್ತು HPV ವ್ಯಾಕ್ಸಿನೇಷನ್ ಮಹತ್ವವನ್ನು ತಿಳಿಸಿಕೊಟ್ಟರು.
ಮತ್ತೋರ್ವ ಅತಿಥಿಗಳು ಡಾ. ಸಂಗೀತ ಕಟ್ಟಿಮನಿ ಕಾರ್ಯದರ್ಶಿಗಳು IMA ಬಳ್ಳಾರಿ ಹೆಣ್ಣು ಮಕ್ಕಳು ಜವಾಬ್ದಾರಿಯುತ ಜೀವನವನ್ನು ಕಟ್ಟಿಕೊಳ್ಳುವುದರಲ್ಲಿ ಸಭಲರಾಗಬೇಕು ಹೇಳಿ ಎದ್ದೇಳಿ ಎಚ್ಚೆತ್ತುಕೊಳ್ಳಿ ನಿಮ್ಮ ಆರೋಗ್ಯ ನಿಮ್ಮ ಹಕ್ಕು ಎಂದು ಹೇಳಿದರು.
ತದನಂತರ ಮಾತನಾಡಿದ FPA ಇಂಡಿಯಾದ ಬಳ್ಳಾರಿ ಶಾಖೆಯ ಉಪಾಧ್ಯಕ್ಷರು ಡಾ. ಚಂದನ ಇವರು ಪೋಸ್ಟ್ ನಟಾಲ್ ಕೇರ್ ಬಾಣಂತಿಯ ಅವಧಿಯಲ್ಲಿ ಯಾವ ರೀತಿಯ ಆರೋಗ್ಯ ಕ್ರಮಗಳನ್ನು ವಹಿಸಬೇಕು ಏನೆಲ್ಲಾ ಗರ್ಭ ನಿರೋಧಕ ವಿಧಾನಗಳನ್ನು ಪಾಲಿಸಬೇಕು ಎನ್ನುವುದನ್ನು ಸವಿವರವಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣವನ್ನು ಮಾಡಿದ TG ವಿಠ್ಠಲ್ FPA ಇಂಡಿಯಾ ಬಳ್ಳಾರಿ ಶಾಖೆಯ ಅದ್ಯಕ್ಷರು, ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯ ಮತ್ತು ಹಕ್ಕುಗಳ ಬಗ್ಗೆ ತಿಳಿದುಕೊಂಡು ಜೀವನ ನಡೆಸಿ ಹೆಣ್ಣಾಗಲಿ ಗಂಡಾಗಲೀ ಬೇಧ ಭಾವ ಮಾಡದೆ ಸಮಾನ ಹಕ್ಕು ನೀಡಿ ಗೌವರವಿಸಿ ಹಾಗೂ ಬ್ರೂಣ ಲಿಂಗ ಹತ್ಯೆ ಮಹಾಪಾಪ ಯಾರೂ ಅದನ್ನು ಮಾಡಬೇಡಿ ಒಳ್ಳೆಯ ಹಕ್ಕುಗಳನ್ನು ಆಯ್ದುಕೊಂಡು ಸಮೃದ್ಧಿ ಜೀವನವನ್ನು ಕಟ್ಟಿಕೊಳ್ಳಿ ಎಂದು ಹೇಳಿದರು.
ಕಾರ್ಕ್ರಮದಲ್ಲಿ FPA ಇಂಡಿಯಾ ಪ್ರಧಾನ ಕಚೇರಿಯ ಉಪಾಧ್ಯಕ್ಷರಾದಂತಹ ಶ್ರೀ ಯುತ S ವಿಜಯಸಿಂಹ ಇವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
FPA ಇಂಡಿಯಾ ಬಳ್ಳಾರಿ ಶಾಖಾ ವ್ಯವಸ್ಥಾಪಕರು S ವಿಜಯಲಕ್ಷ್ಮೀ ಸ್ವಾಗತ ಕೋರಿದರು ಕಾರ್ಯಕ್ರಮ ಅಧಿಕಾರಿ ನಿರೂಪಣೆ ಮಾಡಿದರು ಕಾರ್ಯಕ್ರಮದಲ್ಲಿ ಎಲ್ಲಾ FPA ಇಂಡಿಯಾ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿವರ್ಗ ಹಾಗೂ 100ಕ್ಕೂ ಹೆಚ್ಚಿನ ಫಲಾನುಭವಿಗಳು ನೆರೆದಿದ್ದರು.
ಕಾರ್ಯಕ್ರಮದ ನಂತರ ಪಾಲಭಾವಿಗಳಿಗೆ ಉಚಿತ ಗರ್ಭಕಂಠದ ತಪಾಸಣೆ ಮಾಡಲಾಯಿತು.
29th July 2025
ಬಳ್ಳಾರಿ,ಜು.24. ನಗರ ಪ್ರದೇಶ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ‘ನಮ್ಮ ಕ್ಲಿನಿಕ್’ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿವೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕರಿಮಾರೆಮ್ಮ ಕಾಲೋನಿಯಲ್ಲಿ ಆರಂಭಿಸಲಾದ ನೂತನ ‘ನಮ್ಮ ಕ್ಲಿನಿಕ್’ ಅನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಆರೋಗ್ಯ ಸಮಸ್ಯೆಗಳಿಗೆ ದೂರದೆಡೆಗೆ ಓಡಾಡಬಾರದು. ನಗರದ ಬಡ, ಆರ್ಥಿಕವಾಗಿ ಹಿಂದುಳಿದ ಸಮುದಾಯದವರಿಗೆ ತಮ್ಮ ವ್ಯಾಪ್ತಿಯಲ್ಲಿ ಉಚಿತವಾಗಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ‘ನಮ್ಮ ಕ್ಲಿನಿಕ್’ಗಳಲ್ಲಿ ಒದಗಿಸಲಾಗುತ್ತದೆ. ಮುಂಬರುವ ದಿನಗಳಲ್ಲಿ ಈ ಕಾಲೋನಿಯಲ್ಲಿಯೇ ಸುಮಾರು 5 ಕೋಟಿ ರೂ. ವೆಚ್ಚದ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಗೆ 2023-24 ನೇ ಸಾಲಿಗೆ 12 ನಮ್ಮ ಕ್ಲಿನಿಕ್ ಮತ್ತು 2024-25 ನೇ ಸಾಲಿಗೆ ಬಳ್ಳಾರಿ ನಗರದಲ್ಲಿ 06, ಸಿರುಗುಪ್ಪ 01 ಮತ್ತು ಕಂಪ್ಲಿ 01 ಸೇರಿ ಒಟ್ಟು 08 ನಮ್ಮ ಕ್ಲಿನಿಕ್ಗಳು ಮಂಜೂರಾಗಿವೆ. ಇಂದು ಬಳ್ಳಾರಿ ನಗರದಲ್ಲಿ 03 ಲೋಕಾರ್ಪಣೆಗೊಂಡಿದ್ದು, ಒಟ್ಟು 20 ನಮ್ಮ ಕ್ಲಿನಿಕ್ ಗಳು ಬಳ್ಳಾರಿ ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯ ಸೇವೆಗಳಿಗೆ ಅಣಿಯಾಗುತ್ತಿವೆ. 10 ರಿಂದ 20 ಸಾವಿರ ಜನಸಂಖ್ಯೆಗನುಗುಣವಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಸೋಮವಾರದಿಂದ ಶನಿವಾರದವರೆಗೆ ನಮ್ಮ ಕ್ಲಿನಿಕ್ಗಳಲ್ಲಿ ಸೇವೆಗಳು ಲಭ್ಯವಿದ್ದು, ಇಲ್ಲಿ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್ ಹಾಗೂ ಡಿ-ದರ್ಜೆ ನೌಕರರು ಇರಲಿದ್ದಾರೆ ಎಂದು ಹೇಳಿದರು.
ನಂತರ ನಗರದ ಶ್ರೀರಾಂಪುರ ಕಾಲೋನಿ, ಎ.ಪಿ.ಎಮ್.ಸಿ ಮಾರುಕಟ್ಟೆ ವ್ಯಾಪ್ತಿಯಲ್ಲಿ ಸೇರಿದಂತೆ ಒಟ್ಟು 3 ‘ನಮ್ಮ ಕ್ಲಿನಿಕ್’ ಗಳನ್ನು ಉದ್ಘಾಟಿಸಲಾಯಿತು.
*ಅನಿಸಿಕೆ:*
ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ನಗರದ ಆರೋಗ್ಯ ಕೇಂದ್ರಗಳಿಗೆ ಹೋಗುತ್ತಿದ್ದೇವು. ಈಗ ನಮ್ಮ ಏರಿಯಾದಲ್ಲಿ ‘ನಮ್ಮ ಕ್ಲಿನಿಕ್’ ಆರಂಭವಾಗಿರುವುದರಿAದ ತುಂಬಾ ಸಂತೋಷವಾಗುತ್ತಿದೆ. ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
- ಚಂದ್ರಕಲಾ, ನಿವಾಸಿ, ಕರಿಮಾರೆಮ್ಮ ಕಾಲೋನಿ, ಬಳ್ಳಾರಿ ನಗರ.
ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಟ್ಟಡವನ್ನು ಉದ್ಘಾಟನೆಗೊಳಿಸಿದ್ದಾರೆ. ನಮ್ಮ ಕಾಲೋನಿಯಲ್ಲಿಯೇ ಇರುವುದರಿಂದ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ತುಂಬಾ ಅನುಕೂಲವಾಗಲಿದೆ.
- ಚಾಂದಿನಿ, ನಿವಾಸಿ, ಕರಿಮಾರೆಮ್ಮ ಕಾಲೋನಿ, ಬಳ್ಳಾರಿ ನಗರ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಮಿಂಚು ಶ್ರೀನಿವಾಸ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಸುದ್ ಬೇಗಂ ಸೇರಿದಂತೆ ನಮ್ಮ ಕ್ಲಿನಿಕ್ಗಳ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
29th July 2025
ಬಳ್ಳಾರಿ. ಜು. 25: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕ ಮಹಾಮಂಡಳಿಗೆ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮುತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿ ಸತ್ಯನಾರಾಯಣ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಭು ಶಂಕರ್ ತಿಳಿಸಿದ್ದಾರೆ.
ಸಹಾಯಕ ಆಯ್ತಾ ಮತ್ತು ಚುನಾವಣಾ ಅಧಿಕಾರಿಯಾಗಿದ್ದ ಪ್ರಮೋದ್ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದು ಇಂದು ಮುಂಜಾನೆ ಅಧ್ಯಕ್ಷ ಹುದ್ದೆಗೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಹುದ್ದೆಗೆ ಸತ್ಯನಾರಾಯಣ ಅವರು ಮಾತ್ರ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಅವಧಿ ಮುಗಿಯುವವರೆಗೂ ಕಾದ ಚುನಾವಣಾ ಅಧಿಕಾರಿಗಳು ಅವಧಿ ಮುಗಿದ ತಕ್ಷಣ ಫಲಿತಾಂಶವನ್ನು ಪ್ರಕಟಿಸಿ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್ ಉಪಾಧ್ಯಕ್ಷರಾಗಿ ಸತ್ಯನಾರಾಯಣ ಅವರು ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗೆ ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ನಗರ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಸತ್ಯನಾರಾಯಣ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಆಡಳಿತ ಮಂಡಳಿಯ ಕಚೇರಿಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ಹಂಚಿದರು. ಚುನಾವಣೆ ಇಂದು ನಡೆದ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಗಂಗಾವತಿ ರಾಯಚೂರು ಸೇರಿದಂತೆ ನೂರಾರು ಬೆಂಬಲಿಗರು ಆಗಮಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರು ಗಳಿಗೆ ಶುಭ ಕೋರಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕರಾದ ಜೆ.ಎನ್. ಗಣೇಶ್ ಚುನಾವಣೆ ನಡೆದು ಪದಾಧಿಕಾರಿಗಳ ಘೋಷಣೆಯವರಿಗೂ ಅಲ್ಲಿದ್ದು ನಂತರ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.
29th July 2025
ಬಳ್ಳಾರಿ ಜುಲೈ 25. ಇದು ಡಿಜಿಟಲ್ ಯುಗ ಬರೀ ಪುಸ್ತಕಗಳನ್ನೇ ನಂಬಿಕೊಂಡರೆ ಸಾಲದು ನಿಮ್ಮ ಹೆಚ್ಚಿನ ಮತ್ತು ಗುಣಮಟ್ಟದ ವಿದ್ಯಾಭ್ಯಾಸಕ್ಕಾಗಿ ಕಂಪ್ಯೂಟರ್ ಸೇರಿದಂತೆ ಇತರ ಡಿಜಿಟಲ್ ಮಾಧ್ಯಮಗಳನ್ನು ಸಹ ಉಪಯೋಗಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.
ಅವರು ತಮ್ಮ ಕಛೇರಿಯಲ್ಲಿ ಗುರುವಾರ ಸಂಜೆ 23ನೇ ವಾರ್ಡಿನ ಬಿ. ಮಲ್ಲಯ್ಯ ಅವರ ಪುತ್ರಿ ಪ್ರತಿಭಾವಂತ ವಿದ್ಯಾರ್ಥಿನಿ ಬಿ.ಅಕ್ಷತಾ ಅವರಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ, ಅಕ್ಷತಾ ಬಿ.ಇ ವ್ಯಾಸಂಗ ಮಾಡುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಉಚಿತವಾಗಿ ಲ್ಯಾಪ್ ಟಾಪ್ ನೀಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಇದೇ ರೀತಿ ಹಂತ ಹಂತವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಭರತ್ ರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ , ಗೋವಿಂದ , ಪಿ.ಕೌಶಿಕ್ ಯಾದವ್ , ವಂಶಿ ಇತರರು ಭಾಗವಹಿಸಿದ್ದರು.
29th July 2025
ಬಳ್ಳಾರಿ ಜುಲೈ 26. ಮುಂದಿನ ತಿಂಗಳು ಅಂದರೆ ಆಗಸ್ಟ್ ಮೂರರಂದು ನಗರದಲ್ಲಿ ಸ್ಟೀಲ್ ಸಿಟಿ ರನ್ 2025ನ್ನು ಹಮ್ಮಿಕೊಳ್ಳಲಾಗಿದೆ ಆಸಕ್ತರು ಈ ಓಟದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿಕೊಳ್ಳಬೇಕೆಂದು ಸ್ಟೀಲ್ ಸಿಟಿ ರನ್ ಕಾರ್ಯಕ್ರಮ ಅಧ್ಯಕ್ಷರಾದ ಡಾಕ್ಟರ್ ಸೋಮನಾಥ್ ತಿಳಿಸಿದರು.
ಅವರು ನಗರದ ಬಾಲ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ನಾವು ಈ ಹಿಂದೆ ಆರೋಗ್ಯ ಮತ್ತು ದೈಹಿಕ ದೃಢತೆಗಾಗಿ ಸ್ಟೀಲ್ ಸಿಟಿ ರನ್ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೆವು ಆದರೆ ಕಳೆದ ಮೂರು ವರ್ಷದಿಂದ ಸ್ಟೀಲ್ ಸಿಟಿ ರನ್ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸುವುದರಿಂದ ಇದನ್ನು ಸಾರ್ವಜನಿಕ ಗೊಳಿಸುವ ಉದ್ದೇಶದಿಂದ 3 ಕಿ.ಮೀ 5 ಕಿ.ಮೀ ಮತ್ತು 10 ಕಿ.ಮೀ ದೂರದ ಓಟದ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮವು ಸಂಗನಕಲ್ಲು ರಸ್ತೆಯ ವಿಜಿಡಂ ಸ್ಕೂಲ್ ಇಂದ ಆರಂಭವಾಗಿ ಅಲ್ಲಿಂದ ಒಂದುವರೆ ಕಿಲೋ ಮೀಟರ್ ಎರಡುವರೆ ಮತ್ತು 5 ಕಿ.ಮೀಗಳ ಅಂತರವನ್ನು ಕ್ರಮಿಸಬೇಕಾಗುತ್ತದೆ.
ವಿಜಯ್ ಶಾಲಿ ಗಳಿಗಾಗಿ ಸುಮಾರು 5.25 ಲಕ್ಷದ ಬಹುಮಾನವನ್ನು ವಿತರಿಸಲಾಗುವುದು ನಗರದ ಸಾರ್ವಜನಿಕರು ಒಂದು ಎರಡು ಮತ್ತು ಮೂರನೇ ಬಹುಮಾನವನ್ನು ಪಡೆಯದೆ ಹೋದಲ್ಲಿ ಅವರಿಗೆ ನಾಲ್ಕು ಮತ್ತು 5ನೇ ಬಹುಮಾನ ಖಚಿತವಾಗಿರುತ್ತದೆ ನಿಮ್ಮ ಆರೋಗ್ಯ ಮತ್ತು ಫಿಟ್ನೆಸ್ ಗಾಗಿ ಎಲ್ಲರೂ ಈ ಓಟದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.
ನೊಂದಣಿ ಶುಲ್ಕ 10 ಕಿ.ಮೀ ಗೆ 500 ರೂಪಾಯಿ, ಐದು ಕಿಲೋಮೀಟರ್ ಗೆ ನನ್ನೂ400 ರೂಪಾಯಿ ಮತ್ತು ಮೂರು ಕಿಲೋಮೀಟರ್ ಸ್ಪರ್ಧೆಗೆ 350 ರೂಪಾಯಿಗಳನ್ನು ನಿಗದಿಗೊಳಿಸಲಾಗಿದೆ. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಒಂದು ಟೀ ಶರ್ಟ್, ಮುಂಜಾನೆಯ ಉಪಹಾರ ಮತ್ತು ಮಧ್ಯ ಮಧ್ಯದಲ್ಲಿ ಹೆಲ್ತ್ ಚೆಕ್ ಅಪ್ ಕ್ಯಾಂಪ್ ಗಳನ್ನು ಸಹ ಅಳವಡಿಸಲಾಗುವುದು. ನಗರದ ಸಾರ್ವಜನಿಕರು ಈ ಸ್ಟೀಲ್ ಸಿಟಿ ರನ್ ಓಟದ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯವಂತರಾಗಿರಿ ಎಂದು ಅವರು ಸಾರ್ವಜನಿಕರಿಗೆ ತಿಳಿಸಿದರು.
ಈ ಸ್ಪರ್ಧೆಯಲ್ಲಿ ಸುಮಾರು 14 ರಾಜ್ಯಗಳ 4000 ಅಧಿಕ ಜನ ಪಾಲ್ಗೊಳ್ಳುವ ನೀರಿಕ್ಷೆ ಇದೆ ಈಗಾಗಲೇ 1000 ಜನ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ ಇದು ಹೆಮ್ಮೆಯ ವಿಷಯ, ಅತ್ಯಂತ ಮುಖ್ಯವಾಗಿ ಈ ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ಅಥ್ಲೆಟ್ ನಗರದ ಸುದೀಸ್ಟ್ನ ರೆಡ್ಡಿ ಉದ್ಘಾಟಿಸುವರು. ಈ ಕಾರ್ಯಕ್ರಮವನ್ನು ಜೆಎಸ್ಡಬ್ಲ್ಯೂ ಸೇರಿದಂತೆ ವಿವಿಧ ಸಂಸ್ಥೆಗಳು ಪ್ರಾಯೋಜಕತ್ವವನ್ನು ಹೊಂದಿವೆ. ಆಸಕ್ತರು ಅದೇ ದಿನ ಕೂಡ ನೋಂದಣಿಯನ್ನು ಮಾಡಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್, ರವಿಶಂಕರ್, ವಿನೋದ್ ಜೈನ್, ಡಾಕ್ಟರ್ ಶಶಿಧರ್, ಡಾಕ್ಟರ್ ಸುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
29th July 2025
ಜಿಟಿ ಜಿಟಿ ಮಳೆ, ಕಿಚಿಪಿಚಿ ಕೆಸರು, ಹೊಲಗದ್ದೆಗಳೆಲ್ಲಾ ಹಸಿರು, ಬೆಟ್ಟಗುಡ್ಡಗಳಿಗೆಲ್ಲಾ ಅಬ್ಯೆಂಗ,ಹಳ್ಳ ಹಗರಿ ಹೊಳೆಗಳೆಲ್ಲಾ ಮೈದುಂಬಿ ಹರಿಯುವ ಅರ್ಭಟ, ಹಕ್ಕಿಗಳ ಕಲರವ, ನವಿಲನ ನರ್ತನ ಈ ಸಂಭ್ರಮವೆಲ್ಲಾ ಪ್ರಕೃತಿ ಮಾತೆಯದ್ದಾದರೆ ಮನೆಯನ್ನೆಲ್ಲಾ ಸ್ವಚ್ಛಗೊಳಿಸಿ ಸುಣ್ಣ ಬಣ್ಣಗಳಿಂದ ಅಲಂಕಾರ ಮಾಡಿ ಹೊಸ ಬಟ್ಡೆ ತೊಟ್ಡು ಸಿಹಿ ಸಿಹಿ ಅಡಿಗೆ ಉಂಡು ನಾಡಿನ ಜನ ಸಂಭ್ರಮದಲ್ಲಿದ್ದಾರೆ ಅಂದರೆ ಶ್ರಾವಣ ಮಾಸದ ಆಗಮನ ಆಗಿದೆಯೆಂದೇ ಅರ್ಥ, ಹೌದು ಆಷಾಡ ಕಳೆದು ಶ್ರಾವಣ ಬಂತೆAದರೆ ಸಾಕು ಕಾಡು ನಾಡು ಆನಂದದಲ್ಲಿ ನಲಿಯುತ್ತವೆ ಜನಗಳ ಮೈ ಮನೆಗಳಲ್ಲಿ ಸಂತೋಷ ಸಂಭ್ರಮ ಗರಿಗೆದರುತ್ತದೆ. ಪ್ರಕೃತಿ ತನ್ನನ್ನೆ ತಾನು ಸಿಂಗರಿಸಿಕೊAಡು ನವ ವಧುವಿನಂತೆ ಕಂಗೊಳಿಸುತ್ತಾಳೆ. ಇದನ್ನು ಕಂಡ ಬೇಂದ್ರೆಯವರು ಶ್ರಾವಣ ಬಂತು ಕಾಡಿಗೆ, ಬಂತು ಬೀಡಿಗೆ, ಬಂತು ನಾಡಿಗೆ.. ಬಂತು ಶ್ರಾವಣ ಕುಣಿದಾಂಗ ರಾವಣ ಎಂದು ಹಾಡಿದರೆ, ಜನಪದ ಮಹಿಳೆ ನಾಗರ ಪಂಚಮಿ ನಾಡಿಗೆ ದೊಡ್ಡದೂ.. ಅಣ್ಣಾ ಬರಲಿಲ್ಲ್ಲಾ ಕರಿಯಾಕ ಎಂದು ಹಾಡುತ್ತಾಳೆ. ಮುಸ್ಲಿಂ ಬಾಂದವರಿಗೆ ರಂಜಾನ್ ಪವಿತ್ರ ಮಾಸವೋ ಹಾಗೆ ಹಿಂದೂಗಳಿಗೆ ಶ್ರಾವಣ ಮಾಸ ಅಷ್ಟೇ ಪವಿತ್ತವಾದ ಮಾಸ ಒಂದು ತಿಂಗಳ ಪರ್ಯಂತ ಪೂಜೆ ವೃತ ಪುರಾಣ ಶ್ರವಣ ಹೀಗೆ ನಾನಾ ಭಕ್ತಿ ಪೂರಕ ಚಟುವಟಿಕೆಗಳಲ್ಲಿಯೇ ಈ ತಿಂಗಳನ್ನು ಕಳೆಯುತ್ತಾರೆ, ಹಾಗದಾರೆ ಬನ್ನಿ ಈ ತಿಂಗಳಿನ ಸೊಬಗನ್ನು ತಿಳಿಯೋಣ.
ರೊಟ್ಟಿ ಹಬ್ಬದ ರಿಂಗಣ
ಶ್ರಾವಣ ಮಾಸದ ಮೂರನೇ ದಿನವನ್ನು ರೊಟ್ಟಿ ಹಬ್ಬವೆಂದು ಆಚರಿಸುತ್ತಾರೆ. ಈ ಹಬ್ಬ ಬರುವ ಎರಡು ದಿನ ಮೊದಲೇ ಗೃಹಿಣಿಯರು ಜೋಳದ ರೊಟ್ಟಿ ಸಜ್ಜಿರೊಟ್ಟಿಗಳನ್ನು ಎಳ್ಳಚ್ಚಿ ಸುಟ್ಟು ಕಡಕ್ ಆಗಿ ಮಾಡಿ ಸೀರೆಯ ಜೋಳಿಗೆಯಲ್ಲಿ ಸಂಗ್ರಹಿಸಿಡುತ್ತಾರೆ, ಶೇಂಗಾ ಚಟ್ನಿ ಹೆಸರಿಟ್ಟು ಗುರಾಳ್ ಪುಡಿ ಕೊಬ್ಬರಿ ಪುಡಿ ಬೊಳ್ಳಳ್ಳಿ ಪುಡಿ ಇವುಗಳನ್ನು ಮೊದಲೇ ತಯಾರಿಸಿಕೊಂಡು ಡಬ್ಬಿಯಲ್ಲಿ ತುಂಬಿಟ್ಟಿರುತ್ತಾರೆ .ರೊಟ್ಟಿ ಹಬ್ಬದ ದಿನದಂದು ತರತರದ ತರಕಾರಿ ಪಲ್ಯ ಮುಳಗಾಯಿ ಎಣಿಗಾಯಿ ಬಾಡಿಸಿದ ಮೆಣಿಸಿನಕಾಯಿ ಕಾಳ ಪಲ್ಯ ಸೊಪ್ಪಿನ ಪಚಡಿ ತರಹೇವಾರಿ ಚಟ್ಟಿ ಅಬ್ಬಾ ! ಒಂದೇ ಎರಡೇ ಇದನ್ನು ಹೇಳುತ್ತಿದ್ದರೆ ಬಾಯಲ್ಲಿ ನೀರೂರುತ್ತವೆ.ಈ ಎಲ್ಲ ಪಡಿ ಪದಾರ್ಥಗಳನ್ನು ಮನೆಯವರಲ್ಲಾ ಒಂದೆಡೆ ಕೂತು ಬಂಧು ಬಾಂದವರೊAದಿಗೆ ನಗು ನಗುತ್ತಾ ಊಟ ಮಾಡುವ ಆ ಸಂಭ್ರಮ ಸ್ವರ್ಗಕ್ಕೆ ಕಿಚ್ವು ಹಚ್ವುವಂತಿರುತ್ತದೆ.
ನಾಗಚೌತಿಯ ಚಿತ್ತಾರ
ಶ್ರಾವಣ ಮಾಸದ ನಾಲ್ಕನೇ ದಿನವೇ ನಾಗಚೌತಿ, ನಾಗಪ್ಪನಿಗೆ ಹಾಲೆರೆಯುವ ಸಂಭ್ರಮ, ಮಹಿಳೆಯರು ಆದಿನ ಬೆಳಗ್ಗೆ ಎದ್ದು ಅಂಗಳವನ್ನು ಸಣಿಯಿಂದ ಸಾರಿಸಿ ,ರಂಗೋಲಿ ಚಿತ್ತಾರದಲ್ಲಿ ನಾಗರ ಹಾವಿನ ಚಿತ್ರವನ್ನು ಮೂಡಿಸುವರು ನಂತರ ನಾಗಪ್ಪನ ಪೂಜೆ . ಗೋದಿ ಸಸಿ ಹತ್ತಿಯಿಂದ ಮಾಡಿದ ಕೊಕ್ಕ ಬತ್ತಿ ಹೂಗಳಿಂದ ಸಾಲಾಂಕೃತಗೊAಡ ನಾಗಪ್ಪನ ವಿಗ್ರಹಕ್ಕೆ ಮನೆಯವೆಲ್ಲಾ ಸೇರಿ ನನ್ನ ಪಾಲು ನಮ್ಮಪ್ಪನ ಪಾಲು ನಮ್ಮಮ್ಮನ ಪಾಲು ನಮ್ಮಣ್ಣನ ಪಾಲೆಂದು ಹಾಲೆರೆಯವ ಸಂಭ್ರಮವನ್ನು ನೋಡಲೆರಡು ಕಣ್ಣು ಸಾಲದು .ಮನೆಯಲ್ಲಿ ತಯಾರಾದ ಅಳ್ಳಿಟ್ಟು ತಂಬಿಟ್ಡು ಶೇಂಗಾ ಉಂಡಿ ಎಳ್ಳುಂಡಿ ಗಾರ್ಗಿ ಹಲಸಂದಿ ವಡಿ ಕಲಪಟ್ಲ ಕಾಯಿ ಬುರುಬುರಿ ಇವುಗಳನೆಲ್ಲಾ ನಾಗಪ್ಪನಿಗೆ ನೈವೇದ್ಯ ಮಾಡಿ ನಂತರ ಮನೆಯವರೆಲ್ಲ ಒಂದೆಡೆ ಕುಳಿತು ಉಂಡಿ ತಿನ್ನುತ್ತಾ ಹಾಸ್ಯ ಚಟಾಕಿಗಳನ್ನು ಹಾರಿಸುತ್ತಾ ಊಡ ಮಾಡುವ ಆ ಸಂಭ್ರಮಕ್ಕೆ ಬೆಲೆ ಕಟ್ಟಲಾದೀತೆ ಮಕ್ಜಳು ಮನೆಯ ಪಡಸಾಲಿಯಲ್ಲಿ ಕಟ್ಟಿದ ಜೋಕಾಲಿ ಜೀಕುತ್ತಾ ಅಳ್ಳಿಟ್ಡು ತಂಬಿಟ್ಟು ತಿನ್ನೋಣಾ ಬಾ ನಾಗಪ್ಪನಿಗೆ ಹಾಲನ್ನು ಹಾಕೋಣ ಬಾ ,ಎಂದು ಹಾಡುತ್ತಾ ಜೋಕಾಲಿ ಜೀಕುತ್ತಾರೆ. ಗಂಡಸರು ಜೂಜಾಟ ಕಬ್ಬಡ್ಡಿ ಪಂದ್ಯಗಳನ್ಡಾಡಿದರೆ ಹೆಂಗಸರು ಚೌಕಾಬಾರ ಕೊಕೋ ಆಟ ಅಡಿ ಸಂಭ್ರಮಿಸುವ ದೃಶ್ಯಗಳನ್ನು ನಮ್ಮೂರ ಕೆರೆ ಅಂಗಳದಲ್ಲಿ ಕಾಣುತ್ತಿದ್ದೆವು. ಕೊಬ್ಬರಿ ಬಟ್ಟಲಿಗೆ ಎರಡು ರಂದ್ರ ಕೊರೆದು ಅದಕ್ಕೆ ದಾರ ಪೂಣಿಸಿ ಕೊಬ್ಬರಿ ಬಟ್ಟಲನ್ನು ಗಿರ ಗಿರ ತಿರುಗಿಸುವ ಮಕ್ಕಳ ಆಟ ನೋಡುವುದೇ ಚಂದ
ನಾಗರ ಪಂಚಮಿಯ ಪಂಚ್
ಶ್ರಾವಣ ಮಾಸದ ಐದನೇ ದಿನವೇ ನಾಗ ಪಂಚಮಿ ಇದನ್ನು ನಮ್ಮ ಗ್ರಾಮೀಣ ಜನ ಮರಿ ನಾಗಪ್ಪನ ಹಬ್ಬ ಎನ್ನುತ್ತಾರೆ. ಇಲ್ಲೂ ಅದೇ ಸಂಭ್ರಮ ,ಮನೆಯವರಲ್ಲಾ ಸೇರಿ ಮತ್ತೊಮ್ಮೆ ಮರಿ ನಾಗಪ್ಪನಿಗೆ ಹಾಲೆರೆಯವ ಪದ್ಧತಿ, ಆದರೆ ಉಂಡಿಯ ಬದಲಾಗಿ ಹೋಳಿಗೆ ಮಾಡುತ್ತಾರೆ .ಹೋಳಿಗೆ ತುಪ್ಪ ಕೋಸಂಬರಿ ಪಲ್ಯ ಕಟ್ಟಿನ ಸಾರು, ಹಪ್ಪಳ ಸಂಡಿಗೆ ಉಪ್ಪಿನ ಕಾಯಿ ಇವೆಲ್ಲವುಗಳನ್ನು ನಾಗಪ್ಪನಿಗೆ ನೈವೇದ್ಯ ಮಾಡಿ ನಂತರ ಮನೆಯವರು ನೆಂಟರಿಷ್ಟರು ಸೇರಿ ಹೋಳಿಗೆ ಊಟ ಮಾಡುತ್ತಾ ಹಿರಿಯರು ತಮ್ಮ ಅನುಭವದ ಬುತ್ತಿಯನ್ನು ಕಿರಿಯರಿಗೆ ಉಣ ಬಡಿಸುತ್ತಾರೆ, ಅಳಿಯ ಮಾವರ ಸರಸ, ಅತ್ತೆ ಸೊಸೆಯರ ವಿರಸ ಗೆಳೆಯರ ಚೆಲ್ಲಾಟ ಗಾನ-ಪಾನ ಜೂಜಾಟ-ಜೂಟಾಟ ಇವುಗಳಿಗೆಲ್ಲಾ ಸಾಕ್ಷಿಯಾದ ನಾಗಪಂಚಮಿ ಹಬ್ಬ ಗ್ರಾಮೀಣ ಜನರ ಜೀವ ದ್ರವ್ಯವಾಗಿದೆ.
ಮೌಡ್ಯವೆಂದು ಮೈ ಮರೆಯದಿರಿ
ಇಂದಿನ ವೈಜ್ಞಾನಿಕ ಹಾಗೂ ವೈಚಾರಿಕತೆಯ ಭರಾಟೆಯಲ್ಲಿ ಸಿಕ್ಕ ನಾವು ಪ್ರತಿಯೊಂದನ್ನು ಪ್ರಶ್ನಿಸುತ್ತಾ ಸಾಗಿದ್ದೇವೆ ಕಲ್ಲು ನಾಗರಕ್ಕೆ ಹಾಲೆರೆಯುವುದು ಎಷ್ಟು ಸೂಕ್ತ ಎಂದು ಈ ಹಬ್ಬವನ್ನು ಆಚರಿಸದೇ ಇದ್ದರೆ ಈ ಎಲ್ಲಾ ಸಂಭ್ರಮಗಳು ನಮ್ಮಿಂದ ದೂರವಾಗುವುದಿಲ್ಲವೇ, ಪಂಚಮಿ ಹಬ್ಬದ ಹಿಂದೆ ಕೆಲವೊಂದು ವೈಜ್ಞಾನಿಕ ಸತ್ಯಗಳಿವೆ , ಶ್ರಾವಣ ಮಾಸ ಬಂದರೆ ಸಾಕು ರೈತಾಪಿ ಕುಟುಂಬದ ಜನಕ್ಕೆ ಹೊಲ ಗದ್ಯಗಳಲ್ಲಿ ಕೆಲಸ ಹೆಚ್ಚಿರುತ್ತದೆ ಶ್ರಮದಾಯಕ ಕೆಲಸಕ್ಕೆ ದೈಹಿಕ ಶಕ್ತಿ ಮಾನಸಿಕ ಆರೋಗ್ಯ ಬೇಕಲ್ಲವೇ ಅದಕ್ಕೆ ಈ ಹಬ್ಬದ ಆಚರಣೆ ಈ ಹಬ್ಬದ ನೆಪದಲ್ಲಿ ಶ್ರಮಿಕರು ಪೌಷ್ಟಿಕ ಆಹಾರ ಸೇವಿಸಿ ಮೂರ್ನಾಲ್ಕು ದಿನ ಆನಂದದಿAದ ಕಾಲ ಕಳೆದಾಗ ಆತನ ಮನಸ್ಸು ಸದೃಡಗೊಂಡು ಮುಂದಿನ ಕಾರ್ಯಕ್ಕೆ ಅವರು ಸಿದ್ದಗೊಳ್ಳುತ್ತಾರೆ . ಜೊತೆಗೆ ಮಾನವೀಯ ಸಂಬAದಗಳು ಗಟ್ಟಿಗೊಳ್ಳುತ್ತವೆ. ಎಲ್ಲ ಜಾತಿ ಜನಾಂಗದವರು ಸೇರಿ ಕಬ್ಬಡ್ಡಿ ಕೋಕೋ ಆಟ ಆಡುವಾಗ ಅವರಲ್ಲಿ ಮೇಲು ಕೀಳು ಭಾವನೆಗಳು ದೂರಾಗಿ ನಾವೆಲ್ಲಾ ಬಂದೇ ಎನ್ನುವ ಭಾವ ಬರುತ್ತದೆ ಅಲ್ಲವೆ? ಇದಕ್ಕಿಂತ ಇನ್ನೇನು ಬೇಕು. ಇರುವಷ್ಟು ದಿನ ನಾವು ನಗು ನಗುತ್ತಾ ಬಾಳಬೇಕಲ್ಲವೇ ಬರುವಾಗ ನಾವೇನೂ ತಂದಿಲ್ಲ ಹೋಗುವಾಗ ಎನೂ ಒಯ್ಯಲಾರೆ ನಗು ನಗುತ್ತಾ ಬಾಳಿದರೆ ಅದೇ ಸ್ವರ್ಗ ಸುಖವಲ್ಲವೇ ಇಂತಹ ಬದುಕು ಎಲ್ಲರದ್ದಾಗಲಿ ಎನ್ನುವುದೇ ಈ ಪಂಚಮಿ ಹಬ್ಬದ ಹಾರೈಕೆಯಾಗಿದೆ.
"ಸರಸವೇ ಜನನ ವಿರಸವೇ ಮರಣ ಸಮರಸವೇ ಜೀವನ"
ಎ.ಎಂ.ಪಿ ವೀರೇಶಸ್ವಾಮಿ
ಹೊಳಗುಂದಿ.
29th July 2025
ಕಂಪ್ಲಿ ಜುಲೈ 27. ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆಚ್ಚು ಸಮಯ ಕುಳಿತುಕೊಳ್ಳುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಪುಸ್ತಕದಲ್ಲಿ ದಾಖಲೆ ಮಾಡಿದ್ದಾಳೆ,
ಚಿಕ್ಕ ವಯಸ್ಸಿನಲ್ಲಿಯೇ ದ್ವಿತಾ ಮೋಹನ್ ಅವರು ಜೂನ್ 28, 2025 ರಂದು ಬೆಂಗಳೂರಿನಲ್ಲಿ ಯಾವುದೇ ಬಾಹ್ಯ ಬೆಂಬಲ ಅಥವಾ ಸಹಾಯವಿಲ್ಲದೆ 44 ನಿಮಿಷ ಮತ್ತು 8 ಸೆಕೆಂಡುಗಳ ಕಾಲ ಕುಳಿತುಕೊಂಡು ಗಮನಾರ್ಹ ಸಮತೋಲನ ಮತ್ತು ಶಕ್ತಿಯನ್ನು ಪ್ರದರ್ಶಿಸಿ ಸಾಧಿಸಿದ್ದಾರೆ.
ಇಷ್ಟು ಚಿಕ್ಕ ವಯಸ್ಸಿನಲ್ಲಿ ಅವರ ಅಸಾಧಾರಣ ಸಾಮರ್ಥ್ಯವು ಅವರ ದೈಹಿಕ ಸಮನ್ವಯ ಮತ್ತು ಆರಂಭಿಕ ಬೆಳವಣಿಗೆಯ ಮೈಲಿಗಲ್ಲು ಸಾಧನೆಗಳನ್ನು ಎತ್ತಿ ತೋರಿಸುತ್ತದೆ.
ಈ ಅದ್ಭುತ ಸಾಧನೆಯೊಂದಿಗೆ, ಅವರು ಅಧಿಕೃತವಾಗಿ ವರ್ಲ್ಡ್ವೈಡ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ಸ್ಥಾಪಿಸಿದ್ದಾರೆ, ಅನೇಕ ಯುವ ಪೋಷಕರನ್ನು ಪ್ರೇರೇಪಿಸಿದ್ದಾರೆ ಮತ್ತು ಶಿಶು ಸಾಮರ್ಥ್ಯಗಳ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆoದು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಸಂಪಾದಕೀಯ ತಿಳಿಸಿದ್ದಾರೆ,
ಈ ಹಿಂದೆ ಮೋಹನ್ ಕುಮಾರ್ ದಾನಪ್ಪನವರು ರಾಷ್ಟ್ರಮಟ್ಟದಲ್ಲಿ ಮ್ಯಾರಥಾನ್ ಮಾಡಿ ದಾಖಲೆ ಮಾಡಿರುತ್ತಾರೆ, ಇವರ ಹಿರಿಯ ಪುತ್ರಿ ದಿಶಾ ಮೋಹನ್ ರು ಫ್ಯಾನ್ಸಿ ಡ್ರೆಸ್ ಮತ್ತು ಭರತನಾಟ್ಯದಲ್ಲಿ ದಾಖಲೆ ಮಾಡಿದ್ದು ಪ್ರಸ್ತುತ ಚಿಕ್ಕ ವಯಸ್ಸಿನಲ್ಲಿ ದ್ವಿತಾ ಮೋಹನ್ ರ ಈ ಸಾಧನೆಯನ್ನು ಕಂಡು ಅಜ್ಜ ರಾಜ್ಯ ದಿಶಾ ಸಮಿತಿ ಸದಸ್ಯ ಎ.ಸಿ.ದಾನಪ್ಪ, ತಂದೆ ಮೋಹನ್ ಕುಮಾರ್ ದಾನಪ್ಪ, ತಾಯಿ ಸೌಮ್ಯಶ್ರೀ ಮೋಹನ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ!
21st July 2025
ಬಳ್ಳಾರಿ ಜುಲೈ 20. ಸಂಡೂರು, ಚೋರನೂರು ಮತ್ತು ತೋರಣಗಲ್ಲು ಹಳ್ಳಿಗಳ ಕಾಡು ಮತ್ತು ಗುಡ್ಡ ಪ್ರದೇಶಗಳಲ್ಲಿ, ಈ ಹೊಸ ಬೈಕ್ಗಳು ಬದಲಾವಣೆ ತರಲಾರಂಭಿಸಿವೆ. ಎನ್ಎಂಡಿಸಿ ಸಂಸ್ಥೆಯ ಬೆಂಬಲದಿಂದ, ಬಳ್ಳಾರಿ ಜಿಲ್ಲಾ ಪೊಲೀಸರಿಗೆ ಎಂಟು ಶಕ್ತಿಯುತ ಚೀಟಾ ಪ್ಯಾಟ್ರೋಲ್ ಬೈಕ್ಗಳನ್ನು ಒದಗಿಸಲಾಗಿದ್ದು, ಇದು ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾರ್ಯಾಚರಣೆಗೆ ಸಹಾಯ ಮಾಡಲಿದೆ.
ಎನ್ಎಂಡಿಸಿಯ ಸಂಸ್ಥೆಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಿಎಸ್ಸಾರ್ ಕಾರ್ಯಕ್ರಮದಡಿಯಲ್ಲಿ ₹16 ಲಕ್ಷ ವೆಚ್ಚದಲ್ಲಿ ಈ ಉಪಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ನಡೆದ ಔಪಚಾರಿಕ ಹಸ್ತಾಂತರ ಸಮಾರಂಭದಲ್ಲಿ ಎನ್ಎಂಡಿಸಿ ಡೊಣಿಮಲೈ ಕೌಂಪ್ಲೆಕ್ಸ್ನ ಕಾರ್ಯನಿರ್ವಾಹಕ ನಿರ್ದೇಶಕ ಶಿವೇಂದ್ರ ಬಹಾದುರ ಸಿಂಗ್ ಅವರು ಬಳ್ಳಾರಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಈ ಬೈಕ್ಗಳನ್ನು ಹಸ್ತಾಂತರಿಸಿದರು.
ಕಡಿಮೆ ಹಾದಿ ಹಾಗೂ ಗುಡ್ಡಭೂಮಿ ಇರುವ ಗ್ರಾಮಗಳಲ್ಲಿ ಈ ಹೊಸ ಬೈಕ್ಗಳು ಈಗಾಗಲೇ ಉಲ್ಲೇಖನೀಯ ಬದಲಾವಣೆಯನ್ನು ತಂದಿವೆ. ಪೊಲೀಸರು ಈಗ ಶೀಘ್ರವಾಗಿ ತಲುಪಲಾಗದ ಪ್ರದೇಶಗಳಿಗೆ ನಿರಂತರವಾಗಿ ಪ್ಯಾಟ್ರೋಲಿಂಗ್ ನಡೆಸಬಹುದು ಹಾಗೂ ಮಹಿಳೆಯರು, ಮಕ್ಕಳ ಜೊತೆಗೆ ಹಿರಿಯ ನಾಗರಿಕರ ತುರ್ತು ಕರೆಗಳಿಗೆ ವೇಗವಾಗಿ ಪ್ರತಿಕ್ರಿಯಿಸಬಹುದು.
ಪೊಲೀಸರು ಈ ಕ್ರಮವನ್ನು ಹರ್ಷದಿಂದ ಸ್ವಾಗತಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ವ್ಯಾಪ್ತಿಯ ಪ್ಯಾಟ್ರೋಲಿಂಗ್ ಮತ್ತು ಸಾರ್ವಜನಿಕರೊಂದಿಗೆ ಹೆಚ್ಚು ಸಂವಹನ ಸಾಧ್ಯವಾಗುತ್ತಿರುವುದಾಗಿ ತಿಳಿಸಿದ್ದಾರೆ. ಮಹಿಳೆಯರು ವಿಶೇಷವಾಗಿ ಈ ಬದಲಾವಣೆಯಿಂದ ಆತ್ಮವಿಶ್ವಾಸದಿಂದ ತಮ್ಮ ದಿನಚರಿಯನ್ನು ನಿರ್ವಹಿಸಬಹುದೆಂದು ಹಂಚಿಕೊಂಡಿದ್ದಾರೆ.
"ಮೊದಲು ರಾತ್ರಿ ವೇಳೆ ಮನೆಯ ಹೊರಗೆ ಸಂಚರಿಸಲು ಭಯವಿತ್ತು. ಈಗ ನಮ್ಮ ಹಳ್ಳಿಯಲ್ಲಿ ಈ ಬೈಕ್ಗಳಲ್ಲಿ ಪ್ಯಾಟ್ರೋಲಿಂಗ್ ಆಗುತ್ತಿರುವುದನ್ನು ನೋಡಿ ನಿಜಕ್ಕೂ ಭದ್ರತೆಯ ಭಾವನೆ ಬರುತ್ತದೆ" ಎಂದು ತೋರಣಗಲ್ಲು ಸಮೀಪದ ಗ್ರಾಮದ ಮಹಿಳೆಯರು ಹೇಳಿದರು.