
5th December 2024
ಸೂರ್ಯ ನಾರಾಯಣರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಕಟ್ಟಿಮನೆ ನಾಗೇಂದ್ರ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರ
ಬಳ್ಳಾರಿ ಡಿ ೦೪. ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡರಾದ ನಾರಾ ಸೂರ್ಯನಾರಾಯಣರೆಡ್ಡಿಯವರ ಹುಟ್ಟು ಹಬ್ಬದ ಪ್ರಯುಕ್ತ ಎಪಿಎಂಸಿ ಅಧ್ಯಕ್ಷರಾದ ಕಟ್ಟೆಮನೆ ನಾಗೇಂದ್ರ ಅವರ ನೇತೃತ್ವದಲ್ಲಿ ಎಪಿಎಂಸಿಯ ಆವರಣದಲ್ಲಿ ಡಿ ೦೫ ಗುರುವಾರರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೫ ಗಂಟೆಯ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದಾರೆ.
ಈ ಶಿಬಿರದಲ್ಲಿ ಜನರಲ್ ಹೆಲ್ತ್ ಚೆಕಪ್, ಸುಗರ್,ರಕ್ತದೊತ್ತಡ,ಮತ್ತಿತರ ರೋಗಗಳಿಗೆ ನುರಿತ ವ್ಶೆದ್ಯರಿಂದ ತಪಾಸಣೆ,ಇಸಿಜಿ, ಇನ್ನಿತರ ರಕ್ತ ಪರೀಕ್ಷೆಗಳು,ಉಚಿತ ಔಷದಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಮತ್ತು ಬಿಮ್ಸ್ ಆಸ್ಪತ್ರೆಯಲ್ಲಿ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷರಾದ ಕಟ್ಟೆಮನೆ ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಅವಕಾಶವನ್ನು ಬಳ್ಳಾರಿಯ ನಾಗರೀಕರು ಸದ್ಭಳಕೆ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.