

29th June 2025

ಗೆದ್ದ ತಂಡಕ್ಕೆ 1 ಲಕ್ಷ ರೂ., ರನ್ನರ್ ಅಪ್ ಗೆ 50 ಸಾವಿರ ರೂ.ಗಳ ವೈಯಕ್ತಿಕ ಬಹುಮಾನ ಘೋಷಣೆ
ಬಳ್ಳಾರಿ, ಜೂ.27: ಪತ್ರಕರ್ತರು ಒಟ್ಟಾರೆ ಸಮಾಜಕ್ಕೆ ಮಾದರಿ ಆಗುವಂತಹವರು, ಸಾಮಾನ್ಯ ಜನ ಪತ್ರಕರ್ತರನ್ನು ಅನುಸರಿಸುವುದರಿಂದ ಪತ್ರಕರ್ತರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿ ವೀ.ವಿ ಸಂಘದ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದ ಅಡಾಕ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರು ಕ್ರೀಡಾ ಚಟುವಟಿಕೆಯಲ್ಲೂ ತೊಡಗುವುದು ಸ್ಪೂರ್ತಿದಾಯಕ ವಿಷಯ, ನೀವೆಲ್ಲರೂ ಪಂದ್ಯಾವಳಿ ಆಯೋಜಿಸಿದ್ದು ಸಂತೋಷದ ವಿಷಯ, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಜನಪ್ರತಿನಿಧಿಗಳ ಒಂದು ತಂಡ-ಮಾಧ್ಯಮ ಮಿತ್ರರ ಒಂದು ತಂಡ ರಚಿಸಿ ನಾವು ನೀವು ಕ್ರಿಕೆಟ್ ಆಡೋಣ ಎಂದರು.
ಕ್ರಿಕೆಟ್ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 1 ಲಕ್ಷ ರೂ.ಗಳು, ರನ್ನರ್ ಅಪ್ ತಂಡಕ್ಕೆ 50 ಸಾವಿರ ರೂ.ಗಳನ್ನು ವೈಯುಕ್ತಿಕವಾಗಿ ಬಹುಮಾನ ನೀಡುವುದಾಗಿ ಘೋಷಿಸಿದ ಶಾಸಕ ನಾರಾ ಭರತ್ ರೆಡ್ಡಿ, ಕಾನಿಪ ಪತ್ರಕರ್ತರ ಶ್ರಯೋಭಿವೃದ್ಧಿ ನಿಧಿಗೆ ಮುಂಬರುವ ದಿನಗಳಲ್ಲಿ ದೇಣಿಗೆ ನೀಡುವೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಮಾಜಿ ಮೇಯರ್ ರಾಜೇಶ್ವರಿ, ಮಹಾನಗರ ಪಾಲಿಕೆಯ ಸದಸ್ಯ ನೂರ್ ಮೊಹಮ್ಮದ್, ಕಾಂಗ್ರೆಸ್ ಮುಖಂಡ ಸುಬ್ಬರಾಯುಡು, ಕಾನಿಪ ಅಡಾಕ್ ಸಮಿತಿಯ ವೀರಭದ್ರಗೌಡ, ಮೋಕ ಮಲ್ಲಯ್ಯ, ವಾರ್ತಾ ಇಲಾಖೆಯ ಅಧಿಕಾರಿ ಗುರುರಾಜ್ ಇದ್ದರು. ಪತ್ರಕರ್ತ ನರಸಿಂಹ ಮೂರ್ತಿ ಕುಲಕರ್ಣಿ ಸ್ವಾಗತಿಸಿ, ವಂದಿಸಿದರು.

ಬೈಲಹೊಂಗಲ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜಕೀಯ ಜಿದ್ದಾಜಿದ್ದಿನ ಶಕ್ತಿ ಪ್ರದರ್ಶನದಿಂದ ಇಡೀ ರಾಜಧಾನಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿ ಕಡುಬಡತನದಲ್ಲೂ ವರ್ಷವಿಡೀ ಕಷ್ಟಪಟ್ಟು ಓದಿದ ಹತ್ತಾರು ಬಡ ವಿದ್ಯಾರ್ಥಿನಿಯರು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲಾಗದೆ, ಕೊನೆ ಕ್ಷಣದಲ್ಲಿ ನೀಟ್ (NEET) ಮರುಪರೀಕ್ಷೆ ಬರೆಯುವ ಮಹತ್ವದ ಅವಕಾಶವನ್ನು ಕಳೆದುಕೊಂಡು ಪರೀಕ್ಷಾ ಕೇಂದ್ರಗಳ ಮುಂದೆ ಕಣ್ಣೀರು ಹಾಕುತ್ತಿರುವುದು ಅತ್ಯಂತ ಖಂಡನೀಯ, ಈ ವಿದ್ಯಾರ್ಥಿಗಳ ಮರಗು ಕಾಂಗ್ರೆಸ್ ಪಕ್ಷಕ್ಕೆ ತಟ್ಟಲಿದೆ ಎಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ್ಣಿಕೇರಿ ಶಾಲೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳಿಂದ ವಿವಿಧ ಯೋಗಾಸನಗಳು ಪ್ರದರ್ಶನ

ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿ