

5th July 2025

ಬಳ್ಳಾರಿ,ಜು.04: ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಉಳಿಸಿ ಬೆಳೆಸುವ ಕೆಲಸ ಮಾಡುವುದು ಇಂದಿನ ದಿನಮಾನದಲ್ಲಿ ಅವಶ್ಯಕವಾಗಿದೆ ಎಂದು ಹಚ್ಚೋಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಎಚ್.ಕೆ.ಸಿದ್ದಯ್ಯ ಸ್ವಾಮಿ ಅವರು ತಿಳಿಸಿದರು.
ಅವರು ಸಿರುಗುಪ್ಪ ತಾಲೂಕಿನ ಕುಡುದರಹಾಳ ಗ್ರಾಮದ ತಾಯಮ್ಮ ದೇವಿ ಪುಣ್ಯ ಆಶ್ರಮದ ಎಲೆವಾಳು ಸಿದ್ದಯ್ಯ ಸ್ವಾಮಿ ಬಯಲು ರಂಗಮಂದಿರದಲ್ಲಿ ಹಂದ್ಯಾಳು ಮಹಾದೇವ ತಾತ ಕಲಾ ಸಂಘ ವತಿಯಿಂದ ಗುರುವಾರ ನಡೆದ ನಾಟಕ ಹಬ್ಬ 2025 ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಡಾಕ್ಟರ್, ಇಂಜಿನಿಯರ್ ಆಗಬೇಕೆನ್ನುವ ಕನಸು ಕಾಣುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದ ಯುವಕರಲ್ಲಿ ಕಲೆ ಸಂಸ್ಕೃತಿ ಉಳಿಸುವಲ್ಲಿ ಮಹಾದೇವ ತಾತ ಕಲಾ ಸಂಘದ ಕೆಲಸ ಶ್ಲಾಘನೀಯವಾದುದು ಎಂದರು.
ಮಹಾದೇವ ತಾತಾ ಕಲಾ ಸಂಘದ ಅಧ್ಯಕ್ಷ ಪುರುಷೋತ್ತಮ ಹಂದ್ಯಾಳು ಪ್ರಾಸ್ತಾವಿಕ ಮಾತುಗಳನ್ನು ಆಡಿ, ಸಂಬಂಧಗಳು ಜೀವನದ ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ, ಭಾವನಾತ್ಮಕ ಯೋಗಕ್ಷೇಮಕ್ಕೆ ಮತ್ತು ಸಹಕಾರದ ಜೀವನ ನಡೆಸಲು ಸಂಬಂಧಗಳು ಬಹಳ ಮುಖ್ಯ ಎಂದು ಹೇಳಿದರು.
ಕುಡುದರಹಾಳ್ ತಾಯಮ್ಮ ದೇವಿ ಪುಣ್ಯ ಆಶ್ರಮದ ಪೀಠಾಧ್ಯಕ್ಷ ಡಾ.ಶಿವಕುಮಾರ್ ತಾತ ಅವರು ದಿವ್ಯಸಾನಿಧ್ಯ ವಹಿಸಿ ಮಾತನಾಡಿ ಸಂಬಂಧಗಳು ನಮ್ಮ ಸ್ವಯಂ ಅರಿವು ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿ ಆಗುತ್ತವೆ ಎಂದರು.
ಕಾಯಕ್ರಮದಲ್ಲಿ ಕುಮಾರ ಪ್ರಸಾದ್ ಸಂಗೀತ ಗಾಯನ ಪ್ರಸ್ತುತಪಡಿಸಿದರು. ಬಳಿಕ ಸಿರಿಗೇರಿ ಧಾತ್ರಿ ರಂಗ ಸಂಸ್ಥೆಯ ಕಲಾವಿದರು “ಸಂಬಂಧ” ಎಂಬ ನಾಟಕವನ್ನು ಪ್ರದರ್ಶಿಸಿದರು.
ಈ ವೇಳೆ ಕುಡದರಹಾಳು ಗ್ರಾಮದ ಗುತ್ತಿಗೆದಾರರಾದ ಬಿ.ವೆಂಕಟೇಶ, ಮುಖಂಡರಾದ ಕೆ.ಪಿ.ಖಾಸಿಂ ಸಾಬ್, ಹಚ್ಚೋಳ್ಳಿಯ ಜ್ಞಾನರೆಡ್ಡಿ, ಹಚ್ಚೋಳ್ಳಿ ಗ್ರಾಪಂ ಮಾಜಿ ಸದಸ್ಯ ಪಾಲಕ್ಷಿ ಗೌಡ, ಹಚ್ಚೊಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಚ್.ಎಸ್.ಬುಷಪ್ಪ ಸಹುಕಾರ, ಹೆಚ್.ಕೆ.ನಾಗರಾಜ, ಪಿ.ಭಾಷಾ, ಹುಸೇನಪ್ಪ, ಮುದುಕಪ್ಪ, ಬೀರಲಿಂಗ ಸೇರಿದಂತೆ ಮುಂತಾದ ಹಿರಿಯರು ಉಪಸ್ಥಿತರಿದ್ದರು.
ಅಂಬರೀಶ್ ಹಚ್ಚೋಳ್ಳಿ ಸ್ವಾಗತಿಸಿದರು. ಜಿ.ಲಿಂಗಪ್ಪ ವಂದಿಸಿದರು.

"ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ" ಎಲ್. ಜಿ.ಜ್ಯೋತಿಶ್ವರ ಅಭಿಮತ