
18th July 2025
ಬಳ್ಳಾರಿ, ಜು.16. ಬಳ್ಳಾರಿ ನಗರದ ಡಿಎಆರ್ ಆವರಣದಲ್ಲಿ ಬುಧವಾರ ಅಂದಾಜು 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ಪೊಲೀಸರು ಹಗಲು ರಾತ್ರಿ ಎನ್ನದಂತೆ ಕರ್ತವ್ಯ ನಿರ್ವಹಿಸುತ್ತಾ ಸಾರ್ವಜನಿಕರನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುತ್ತಾರೆ
ಅಂತಹ ಅಧಿಕಾರಿಗಳಿಗೆ ಅವರ ಕುಟುಂಬದ ನೆಮ್ಮದಿಗಾಗಿ ಮನೆಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದರು.
ಅಂದಾಜು 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ ಪ್ರಯುಕ್ತ ಇಂದು ಭೂಮಿ ಪೂಜೆ ನೆರವೇರಿಸಿ ಪೋಲಿಸ್ ವಸತಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ, ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿಯ ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಡಾ. ಶೋಭಾ ರಾಣಿ, ಎಎಸ್ಪಿ ರವಿಕುಮಾರ್, ಡಿಎಸ್ಪಿ ನಂದಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಚಾನಾಳ್ ಶೇಖರ್, ಹಗರಿ ಗೋವಿಂದ ಸೇರಿದಂತೆ ಮತ್ತಿತರರು ಇದ್ದರು.
ವಿಶ್ವ ಹಿಂದೂ ಪರಿಷತ್ತಿನ ಬಳ್ಳಾರಿ ಜಿಲ್ಲೆಯ ಹೊಸ ಜಿಲ್ಲಾಧ್ಯಕ್ಷರಾಗಿ ಕಲ್ಲೂರು ವೆಂಕಟೇಶುಲು ಶೆಟ್ಟಿ
ಶ್ರೀ ರಾಮರಾಜು ಫೌಂಡೇಶನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ- 500ಕ್ಕೂ ಹೆಚ್ಚು ಜನರಿಂದ ರಕ್ತದಾನ ಶಿಬಿರ ಯಶಸ್ವಿ-ರಾಮರಾಜು