

29th July 2025

ಬಳ್ಳಾರಿ ಜುಲೈ 29. ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದಿದೆ. ಮೂರು ವರ್ಷದ ಬಾಲಕ ವಿಕ್ಕಿ ಸಾವನ್ನಪ್ಪಿರುವ ಬಾಲಕ ಎಂದು ಗುರುತಿಸಲಾಗಿದೆ.
ಅತಿ ವೇಗ ಹಾಗೂ ಚಾಲಕನ ಅಜಾಗರೂಕತೆಯಿಂದ ಮಗು ಬಲಿಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಳ್ಳಾರಿಯ ಬಾಪೂಜಿ ನಗರದ ಸಮರ ಹಾಗೂ ಶೈಲಜಾ ದಂಪತಿಯ ಎನ್ನುವವರ ಮಗು ಎಂದು ತಿಳಿದು ಬಂದಿದೆ.
ಬಾಪುಜಿ ನಗರದಲ್ಲಿ ಕಸ ಸಂಗ್ರಹಿಸಲು ತೆರಳಿದ್ದ ವಾಹನವು, ರಸ್ತೆ ಬದಿ ಆಟ ಆಡುತ್ತಿದ್ದ ವಿಕ್ಕಿ ತಲೆ ಮೇಲೆ ಹರಿದಿದೆ. ಕೂಡಲೇ ಗಾಯಳು ಮಗುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದ್ರೇ ಆಸ್ಪತ್ರೆ ಮುಟ್ಟುವುದರಲ್ಲೇ ಮಗು ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬಳ್ಳಾರಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರ ದೌಡಾಯಿಸಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ