

29th July 2025

ಬಳ್ಳಾರಿ ಜುಲೈ 25. ಇದು ಡಿಜಿಟಲ್ ಯುಗ ಬರೀ ಪುಸ್ತಕಗಳನ್ನೇ ನಂಬಿಕೊಂಡರೆ ಸಾಲದು ನಿಮ್ಮ ಹೆಚ್ಚಿನ ಮತ್ತು ಗುಣಮಟ್ಟದ ವಿದ್ಯಾಭ್ಯಾಸಕ್ಕಾಗಿ ಕಂಪ್ಯೂಟರ್ ಸೇರಿದಂತೆ ಇತರ ಡಿಜಿಟಲ್ ಮಾಧ್ಯಮಗಳನ್ನು ಸಹ ಉಪಯೋಗಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.
ಅವರು ತಮ್ಮ ಕಛೇರಿಯಲ್ಲಿ ಗುರುವಾರ ಸಂಜೆ 23ನೇ ವಾರ್ಡಿನ ಬಿ. ಮಲ್ಲಯ್ಯ ಅವರ ಪುತ್ರಿ ಪ್ರತಿಭಾವಂತ ವಿದ್ಯಾರ್ಥಿನಿ ಬಿ.ಅಕ್ಷತಾ ಅವರಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ, ಅಕ್ಷತಾ ಬಿ.ಇ ವ್ಯಾಸಂಗ ಮಾಡುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಉಚಿತವಾಗಿ ಲ್ಯಾಪ್ ಟಾಪ್ ನೀಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಇದೇ ರೀತಿ ಹಂತ ಹಂತವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಭರತ್ ರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ , ಗೋವಿಂದ , ಪಿ.ಕೌಶಿಕ್ ಯಾದವ್ , ವಂಶಿ ಇತರರು ಭಾಗವಹಿಸಿದ್ದರು.

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ......!

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ

ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ