

5th August 2025

ಬಳ್ಳಾರಿ ಆ 03. ಗಣಿನಾಡು ಬಳ್ಳಾರಿ ಜಿಲ್ಲೆಯ ವಿಜ್ ಡಮ್ ಲ್ಯಾಂಡ್ ಶಾಲೆಯ ಆವರಣದಲ್ಲಿ ಬಿ.ಸಿ.ಆರ್.ಎಫ್ ತಂಡದೊಂದಿಗೆ ಜೆ.ಎಸ್.ಡಬ್ಲ್ಯೂ. ಸ್ಟೀಲ್ ಸಿಟಿ ರನ್ 2025 4ನೇ ಆವೃತ್ತಿಗೆ ಭಾನುವಾರ ಬೆಳಿಗ್ಗೆ 6 ಗಂಟೆಗೆ ಜಿಂದಾಲ್ ಕಂಪನಿಯ ಮುಖ್ಯಸ್ಥ ಮುರಗಲ್ ಚಾಲನೆ ನೀಡಿದರು. ರಾಜ್ಯದ 14 ರಾಜ್ಯಗಳಿಂದ ರನ್ನರ್ಸ್ ಗಣಿನಾಡು ಬಳ್ಳಾರಿಗೆ ಆಗಮಿಸಿ 3, 5 ಹಾಗೂ 10 ಕಿಲೋಮೀಟರ್ ಓಟದಲ್ಲಿ 4 ಸಾವಿರ ಓಟಗಾರರು ಸ್ಪರ್ಧೆಯಲ್ಲಿ ಭಾಗವಹಿಸಿ, ಸಂತಸ ವ್ಯಕ್ತಿ ಪಡಿಸಿದರು.
ಬಿ.ಸಿ.ಆರ್.ಎಫ್ ಆರೋಗ್ಯವೇ ಮಹಾಭಾಗ್ಯ:-
ಆರೋಗ್ಯದ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಪ್ರತಿನಿತ್ಯ ದೇಹವನ್ನು ದಂಡಿಸುವ ಕೆಲಸ ಮಾಡಬೇಕು, ಆರೋಗ್ಯ ಚೆನ್ನಾಗಿ ಇದ್ದರೆ ಏನಾದ್ರೂ ಸಾಧನೆ ಮಾಡಬಹುದು ಎಂದು ಬಿ.ಸಿ.ಆರ್.ಎಫ್ ತಂಡದ ಅಧ್ಯಕ್ಷ ಡಾ.ಸೋಮನಾಥ ತಿಳಿಸಿದರು.
2025 ಆಗಸ್ಟ್ 3 ಭಾನುವಾರ ಬೆಳಿಗ್ಗೆ 6 ಗಂಟೆಗೆ ಬಳ್ಳಾರಿ ರನ್ನಿಂಗ್ ಅಂಡ್ ಸೈಕ್ಲಿಂಗ್ ಕ್ಲಬ್ ಹಾಗೂ ಜಿಂದಾಲ್ ಸ್ಟೀಲ್ ಸಿಟಿ ರನ್ನಿಂಗ್ 10, 5 ಹಾಗೂ 3 ಕಿಲೋಮೀಟರ್ ಓಟದಲ್ಲಿ 4 ಸಾವಿರ ಅಭ್ಯರ್ಥಿಗಳು ಭಾಗವಹಿಸಿದ್ದರು.
ಅಂತರಾಷ್ಟ್ರೀಯ ಕ್ರೀಡಾಪಟು ವಿ.ಸುದ್ರಿಕ್ಷಾ ಮಾತನಾಡಿದ ಅವರು ಜಿಲ್ಲಾ, ತಾಲೂಕು, ವಲಯ ಮಟ್ಟದಲ್ಲಿ ಇಂತಹ ಓಟದ ಸ್ಪರ್ಧೆಗಳನ್ನು ಮಾಡುವುದರ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡಬೇಕು ಎಂದರು.
64 ವರ್ಷದ ಶಶಿಕಾಂತ ಬೆಂದ್ರೆ ಮಾತನಾಡಿದ ಅವರು ರಾಜ್ಯದ ವಿವಿಧ ಜಿಲ್ಲೆಯಲ್ಲಿ ಇಂತಹ ಓಟಗಳನ್ನು ಆಯೋಜನೆ ಮಾಡಿ ಯುವಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬಹುದು ಎಂದರು. ಹಿರಿಯ ವಯಸ್ಕರಾದ 64 ವರ್ಷದ ಬೆಳಗಾವಿಯ ರೈತ ಬಸಪ್ಪ ಅವರು 10 ಕಿಲೋಮೀಟರ್ ಓಟದಲ್ಲಿ ಭಾಗವಹಿಸಿ, ಪೂರ್ಣಗೊಳಿಸಿದ್ದು ವಿಶೇಷವಾಗಿತ್ತು.
*10 ಕೀಲೋ ಮೀಟರ್ ಓಟ ಸಾಂಗ್ಲಿಯ ಚೈತನ್ಯ ಹಾಗೂ ತೇಜಸ್ವಿನಿ ಪ್ರಥಮಸ್ಥಾನ*
ಪುರುಷರ ವಿಭಾಗದಲ್ಲಿ 10 ಕಿಲೋ ಮೀಟರ್ ಓಟದಲ್ಲಿ ಸಾಂಗ್ಲಿಯ ಚೈತನ್ಯ ರೂಪನಾರ್ ಅವರು 30 ನಿಮಿಷ 1 ಸೆಕೆಂಡ್ ನಲ್ಲಿ ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದರೆ, ಮಹಿಳೆಯ ವಿಭಾಗದಲ್ಲಿ ಬೆಂಗಳೂರಿನ ತೇಜಸ್ವಿನಿ 37 ನಿಮಿಷ 10 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿದ್ದು ವಿಶೇಷ.
ಬಿ.ಸಿ.ಆರ್.ಎಫ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರು ಕೆಲಸ ಮಾಡಿದರು.ಅಭ್ಯರ್ಥಿಗಳಿಗೆ ಕುಡಿಯುವ ನೀರು, ಒ.ಆರ್.ಎಸ್, ಟಿಫನ್ ವ್ಯವಸ್ಥೆ ಮಾಡಲಾಗಿತ್ತು. ಬಳ್ಳಾರಿಯ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳದ ಸಿಬ್ಬಂದಿಗಳು,ತುರ್ತುಪರಿಸ್ಥಿತಿಗೆ ಅಂಬುಲೇನ್ಸ್ ವ್ಯವಸ್ಥೆ ಮಾಡಲಾಗಿತ್ತು.
*5.5 ಲಕ್ಷ ನಗದು ಹಣ ಬಹುಮಾನ*
3 ಹಾಗೂ 5 ಮತ್ತು 10 ಕಿಲೋ ಮೀಟರ್ ಗಳ ಓಟದಲ್ಲಿ ವಿವಿಧ ವಯಸ್ಸಿನ ವರ್ಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ.ಮುಖ್ಯವಾಗಿ ಬಳ್ಳಾರಿ ನಗರದ ಅಭ್ಯರ್ಥಿಗಳಿಗೆ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ನಗದುಹಣ ಹಾಗೂ ಪ್ರಮಾಣಪತ್ರ ನೀಡಿದರು.ಭಾಗವಹಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೆಡಲ್ ಗಳನ್ನು ವಿತರಣೆ ಮಾಡಿದರು.
*ಓಟದಲ್ಲಿ ಭಾಗವಹಿಸಿದ ಗಣ್ಯರು*
10 ಹಾಗೂ 5 ಕೀಲೋ ಮೀಟರ್ ಓಟದಲ್ಲಿ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಸಿಪಿಐ ಸುಭಾಷ್ ಚಂದ್ರ, ಪಿಎಸ್ಐ ಕಾಳಿಂಗ ಓಟದಲ್ಲಿ ಭಾಗವಹಿಸಿದ್ದರು.
ಬಿ.ಸಿ.ಆರ್.ಎಫ್ ತಂಡದ ಸದಸ್ಯರಾದ ಸಂದೀಪ್, ಪ್ರಶಾಂತ, ಸಾಗರ, ವಿಕಾಸ್, ಓಂ, ಡಾ.ಸುಂದರ್, ಡಾ.ತಿಪ್ಪಾರೆಡ್ಡಿ, ಜೋಸ್ನ, ಗಿರೀಶ್ ಕುಮಾರ್ ಗೌಡ, ಮತ್ತು ಬಿಸಿಆರ್ ತಂಡದ 200 ಕ್ಕಿಂತ ಹೆಚ್ಚಿನ ಸ್ವಯಂ ಸೇವಕರು ಭಾಗವಹಿಸಿದ್ದರು.

ಬೈಲಹೊಂಗಲ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜಕೀಯ ಜಿದ್ದಾಜಿದ್ದಿನ ಶಕ್ತಿ ಪ್ರದರ್ಶನದಿಂದ ಇಡೀ ರಾಜಧಾನಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿ ಕಡುಬಡತನದಲ್ಲೂ ವರ್ಷವಿಡೀ ಕಷ್ಟಪಟ್ಟು ಓದಿದ ಹತ್ತಾರು ಬಡ ವಿದ್ಯಾರ್ಥಿನಿಯರು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲಾಗದೆ, ಕೊನೆ ಕ್ಷಣದಲ್ಲಿ ನೀಟ್ (NEET) ಮರುಪರೀಕ್ಷೆ ಬರೆಯುವ ಮಹತ್ವದ ಅವಕಾಶವನ್ನು ಕಳೆದುಕೊಂಡು ಪರೀಕ್ಷಾ ಕೇಂದ್ರಗಳ ಮುಂದೆ ಕಣ್ಣೀರು ಹಾಕುತ್ತಿರುವುದು ಅತ್ಯಂತ ಖಂಡನೀಯ, ಈ ವಿದ್ಯಾರ್ಥಿಗಳ ಮರಗು ಕಾಂಗ್ರೆಸ್ ಪಕ್ಷಕ್ಕೆ ತಟ್ಟಲಿದೆ ಎಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ್ಣಿಕೇರಿ ಶಾಲೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳಿಂದ ವಿವಿಧ ಯೋಗಾಸನಗಳು ಪ್ರದರ್ಶನ

ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿ