

11th August 2025

ಬಳ್ಳಾರಿ ಆ. 11 : ಕಳೆದ ಒಂದು ವರ್ಷದ ಹಿಂದೆ ಕೋಲ್ಕತ್ತ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಮತ್ತು ಅವರ ಸಾವಿಗೆ ನ್ಯಾಯ ಸಿಗಬೇಕೆಂದು ಮೆಡಿಕಲ್ ಸರ್ವೀಸ್ ಸೆಂಟರ್(MSC) ನಿಂದ ಬಳ್ಳಾರಿಯ ಬಿ ಎಮ್ ಸಿ ಆರ್ ಸಿ ವೈದ್ಯಕೀಯ ಕಾಲೇಜಿನಲ್ಲಿ ಮೊಂಬತ್ತಿಯನ್ನು ಹಚ್ಚಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು ಎಂದು ಬಿ ಎಂ ಎಸ್ ಆರ್ ಸಿ ಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಟನೆ ನಡೆದು ಒಂದು ವರ್ಷ ಕಳೆದರೂ ಇನ್ನು ಕೂಡ ನ್ಯಾಯಯುತವಾಗಿ ಸರಿಯಾದ ತನಿಖೆಯು ನಡೆದಿರುವುದಿಲ್ಲ. ಆದ್ದರಿಂದ ನಿಷ್ಪಕ್ಷಪಾತವಾದ ತನಿಖೆಯನ್ನು ನಡೆಸಿ ಘಟನೆಯಲ್ಲಿ ಅತ್ಯಾಚಾರ ಮತ್ತು ಅತ್ತೆಗೆ ಗುರಿಯಾದ ಮತ್ತು ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಬೇಕು ಮತ್ತು ಹತ್ಯೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಸಿಗಬೇಕೆಂದು ದೇವರಲ್ಲಿ ಪ್ರಾರ್ಥಿಸಲಾಯಿತು ಎಂದು ಡಾಕ್ಟರ್ ಉಪೇಂದ್ರ ರೆಡ್ಡಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಟಿ ವಿ ಎಮ್ ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಆರ್ ಎಲ್ ಎನ್ ಮೂರ್ತಿ, ಮೆಡಿಕಲ್ ಸರ್ವೀಸ್ ಸೆಂಟರ್ ನ ಡಾ.ದಿವ್ಯ, ಡಾ.ಉಪೇಂದ್ರ, ಡಾ.ಸೈಯದ್, ಫಾರ್ಮಸಿ ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಈ ಶ್ರದ್ಧಾಂಜಲಿ ಸಭೆಯಲ್ಲಿ ಇದ್ದರು.

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ......!

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ