

22nd September 2025

ಕೊಪ್ಪಳ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್ ಕೆರೆಹಳ್ಳಿ ನೇಮಕಗೊಂಡಿದ್ದಾರೆ.
ನಗರದ ಕಾಂಗ್ರೆಸ್ ನ ಕಚೇರಿಯಲ್ಲಿ ನಡೆದ ಎಸ್ ಸಿ ಘಟಕದ ರಾಜ್ಯ ಕಮಿಟಿ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್ ಕೆರೆಹಳ್ಳಿ ಅವರು ನೇಮಕ ಗೊಂಡಿದ್ದಾರೆ.
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಹಾಗೂ ಎಸ್ ಸಿ ಘಟಕದ ರಾಜ್ಯಾಧ್ಯಕ್ಷ ಆರ್.ಧರ್ಮಸೇನ್ ಅವರ ಆದೇಶ ಮೇರೆರೆ ಹಾಗೂ ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಗಾಳೆಪ್ಪ ಹೆಚ್. ಪೂಜಾರ್ ಅವರು ಸಚಿವ ಶಿವರಾಜ್ ಎಸ್ ತಂಗಡಗಿ, ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಕೆ.ರಾಘವೇಂದ್ರ ಹಿಟ್ನಾಳ್ ಅವರ ಸೂಚನೆಯಂತೆ ನೇಮಕಾತಿ ಆದೇಶದ ಪತ್ರ ನೀಡಲಾಯಿತು.
ಪರಶುರಾಮ್ ಕೆರೆಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದಲೂ ನಿರಂತರವಾಗಿ ಪಕ್ಷದ ಸಂಘಟನೆ,ಬಲವರ್ಧನೆಗಾಗಿ ಶ್ರಮಿಸಿದ್ದು, ಒಬ್ಬ ನಿಷ್ಠಾವಂತ ಪ್ರಾಮಾಣಿಕ, ಕಾಂಗ್ರೆಸ್ ಕಾರ್ಯಕರ್ತನಾಗಿ, ಸಕ್ರಿಯವಾಗಿ ಪಕ್ಷದಲ್ಲಿ ತೊಡಸಿಕೊಂಡು, ಕಾಂಗ್ರೆಸ್ ಪಕ್ಷವನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಪಕ್ಷ ಸಂಘಟನೆಯಲ್ಲಿ ಭಾಗವಹಿಸಿ ಪಕ್ಷ ಕಟ್ಟಲು ಶ್ರಮಿಸಿದ್ದಾರೆ. ಕೊಪ್ಪಳ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿ ಹಳ್ಳಿ, ನಗರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ .ಅವರ ಸಂಘಟನಾ ಸಾಮರ್ಥ್ಯವನ್ನು ಅರಿತು ಪಕ್ಷದ ಮುಖಂಡರು ಈ ಹುದ್ದೆ ನೀಡಿದ್ದಾರೆ. ಆದೇಶ ಪತ್ರಪಡೆದ ಕೆರೆಹಳ್ಳಿ ಪಕ್ಷದ ಸಂಘಟನೆ ಬಲಗೊಳಿಸುವುದಾಗಿ ಹೇಳಿ ಮುಖಂಡರು, ಕಾರ್ಯಕರ್ತರಿಗೆ ಅಭಿನಂದಿಸಿದರು.
ಸಭೆಯಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್ , ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಗೂಳಪ್ಪ ಹಲಗೇರಿ, ಎಸ್ ಸಿ ಘಟಕದ ರಾಜ್ಯ ಉಪಾಧ್ಯಕ್ಷ ಕನ್ನಿರಾಮ್ ರಾಥೋಡ್ ಗುಲ್ಬರ್ಗಾ, ಕೆಪಿಸಿಸಿ ರಾಜ್ಯ ಸಂಚಾಲಕ ನಾಗರಾಜ್ ನಾಯಕ್ ಚೆನ್ನಗಿರಿ , ಕೆಪಿಸಿಸಿ ಸಂಚಾಲಕ ಕಾಳಯ್ಯ ಮೈಸೂರ, ಎಸ್ ಸಿ ರಾಜ್ಯ ಕಮಿಟಿ ಸದಸ್ಯ, ಶುಕ್ರರಾಜ್ ತಾಳಕೇರಿ, ದೇವೇಂದ್ರಪ್ಪ ಎಚ್ ಪೂಜಾರ್ ದದೆಗಲ್, ಶರಣಮ್ಮ ಯಲಬುರ್ಗಾ, ಜಿಲ್ಲಾ ಉಪಾಧ್ಯಕ್ಷರಾದ ತಿಪ್ಪಣ್ಣ ಚಲವಾದಿ ಮ್ಯಾಗೇರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹನುಮಂತಪ್ಪ ಸಿಂದೋಗಿ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಮೂಲಿಮನಿ ಮೋಚಿ, ಬಸವರಾಜ ಬೇವಿನಕಟ್ಟಿ ಕುಷ್ಟಗಿ, ರಮೇಶ ಚಲವಾದಿ ಯಲಬುರ್ಗಾ, ಎಲ್ಲಾ ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ, ಈಶಪ್ಪ ಕೂಕನೂರು, ಚಂದ್ರು ಕುಷ್ಟಗಿ, ಶಿವಾನಂದ್ ಬಣಕಾರ್ ಯಲಬುರ್ಗಾ, ಶಾಂತಪ್ಪ ಬಸರಿಗಿಡ ಕನಕಗಿರಿ, ಮಾಂತೇಶ ವಡ್ಡರ್ ಹನುಮಸಾಗರ, ಶಿವಕುಮಾರ್ ಇಳಿಗಿನೂರು ಕಾರಟಗಿ, ಯಮನೂರಪ್ಪ ದನಕನದೊಡ್ಡಿ ಗಂಗಾವತಿ, ಲಲಿತ್ ಕುಮಾರ ಮ್ಯಾಗೇರಿ ಚಲವಾದಿ ಕೊಪ್ಪಳ , ಕಳಕೇಶ ಸೂಡಿ ಯಲಬುರ್ಗಾ, ಪಾಮಣ್ಣ ಕನಕಗಿರಿ, ಮಲ್ಲೇಶ್ ದೇವರಮನಿ ಗಂಗಾವತಿ ಮತ್ತಿತರು.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..