

6th October 2025

ಕೊಪ್ಪಳ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದ ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಸೇರಿದಂತೆ ಕೊಪ್ಪಳ ಜಿಲ್ಲೆಯ ಗೆದ್ದ ಕಾಂಗ್ರೆಸ್ ಜನಪ್ರತಿನಿಧಿಗಳು ಮೋಸಗಾರರು. ಕಾಂಗ್ರೆಸ್ ಹೈಕಮಾಂಡ್ ಮುಂದೆ ರೀಲ್ ಬಿಡುವ ಮೂಲಕ ಜನತೆಗೆ ಮತ್ತು ನನಗೆ ಮೋಸ ಮಾಡಿದ್ದಾರೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಗುಡುಗಿದ್ದು, ಮುಖ್ಯಮಂತ್ರಿ ಬರುವ ದಿನದಂದೆ ಆಡಿಯೋ ಮೂಲಕ ಜಿಲ್ಲೆಯ ಜನತೆಗೆ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಜನಪ್ರತಿನಿಧಿಗಳ ಬಣ್ಣ ಬಯಲು ಮಾಡಿದ್ದಾರೆ.
ಜಿಲ್ಲೆಯ ರೂ.೨೦೦೦ ಕೋಟಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸುತ್ತಿರುವ ಬೆನ್ನೆಲ್ಲೆ ಜಿಲ್ಲೆಯ ಕಾಂಗ್ರೆಸ್ ಹಿಡಿತ ಹೊಂದಿರುವ ತಂಗಡಗಿ, ಹಿಟ್ನಾಳ್ ಕುಟುಂಬ ಮತ್ತು ರಾಯರೆಡ್ಡಿ ವಿರುದ್ಧ ಅನ್ಸಾರಿ ಧ್ವನಿ ಎತ್ತುವ ಮೂಲಕ ಆಡಿಯೋ ಮೂಲಕ ತಮ್ಮ ಮುಸ್ಲಿಂ ಸಮಾಜಕ್ಕೆ ಮತ್ತು ಬೆಂಬಲಿಗರಿಗೆ ಆಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.
ಹಿಟ್ನಾಳ್ ಕುಟುಂಬದ ಸಂಸದರು, ಶಾಸಕರು, ಕನಕಗಿರಿ ಕ್ಷೇತ್ರದಿಂದ ಗೆದ್ದು ಸಚಿವರಾಗಿರುವ ತಂಗಡಗಿ, ಮತ್ತು ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರು ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಹೈಕಮಾಂಡ್ಗೆ ಜಿಲ್ಲೆಯಲ್ಲಿ ನಡೆಯುವ ಸತ್ಯ ಸಂಗತಿಗಳನ್ನು ಮರೆ ಮಾಚಿ ಸುಳ್ಳಿನ ರೀಲ್ ಬಿಡುತ್ತಿದ್ದಾರೆ ಎಂದು ಅನ್ಸಾರಿ ಬಾಂಬ್ ಹಾಕಿರುವುದು ಕಾಂಗ್ರೆಸ್ ವಲಯದಲ್ಲಿ ಭಾರಿ ಸಂಚಲನ ಮೂಡಿದೆ. ತಮ್ಮ ಬೆಂಬಲಿಗ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಕೊಪ್ಪಳ ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಇಕ್ಬಾಲ್ ಅನ್ಸಾರಿ ಅ.೫ ರಂದು ಆಡಿಯೋ ಸಂದೇಶ ರವಾನಿಸಿದ್ದು, ಅ.೬ ರಂದು ಕೊಪ್ಪಳ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬರುತ್ತಿರುವ ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಪ್ರತಿಯೊಂದು ಗ್ರಾಮದ ಫಲಾನುಭವಿಗಳನ್ನು ನಮ್ಮ ಬೆಂಬಲಿಗ ಕಾರ್ಯಕರ್ತರು ಕರೆದುಕೊಂಡು ಹೋಗಬೇಕು. ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡುವ ಮೂಲಕ ಅತ್ಯುತ್ತಮ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಐದು ಗ್ಯಾರಂಟಿ ಗಿನ್ನಿಸ್ ದಾಖಲೆಯಾಗಿದೆ ಇದನ್ನು ನಾವೆಲ್ಲರು ತುಂಬು ಹೃದಯದಿಂದ ಸ್ವಾಗತಿಸಿ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಸ್ವಾಗತಿಸುತ್ತೇನೆ. ಆದರೆ ಕೊಪ್ಪಳ ಜಿಲ್ಲೆಯ ಸಚಿವ, ಸಂಸದ, ಶಾಸಕ ಮತ್ತು ಆರ್ಥಿಕ ಸಲಹೆಗಾರ ಮಾಡಿರುವ ಮೋಸವನ್ನು ಸಹಿಸುವುದಿಲ್ಲ. ಅವರು ನನ್ನ ಬಗ್ಗೆ ಮುಖ್ಯಮಂತ್ರಿ ಬಳಿ ಸುಳ್ಳಿನ ಕಂತೆ ಹೆಣೆಯುತ್ತಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ್ ಪರ ಚುನಾವಣೆಯಲ್ಲಿ ಕೆಲಸ ಮಾಡುವ ಮನಸ್ಸು ನನಗೆ ಇದ್ದಿಲ್ಲ. ಆದರೆ ಮುಖ್ಯಮಂತ್ರಿಯವರ ಮಾತಿಗೆ ನಾನು ಬೆಲೆ ಕೊಟ್ಟು ಗಂಗಾವತಿಯಲ್ಲಿ ೧೬ ಸಾವಿರ ಮತಗಳ ಲೀಡ್ ಆಗುವಂತೆ ಕೆಲಸ ಮಾಡಿದ್ದಾರೆ. ಆದರೆ ಗೆದ್ದ ನಂತರ ಹಿಟ್ನಾಳ್ ಸಹೋದರರು, ಇವರೊಂದಿಗೆ ಸಚಿವ ಹಾಗೂ ರಾಯರೆಡ್ಡಿ ಸಿಎಂ ಮುಂದೆ ನನ್ನ ವಿರುದ್ಧ ಕ್ಯಾಸೆಟ್ ಹಾಕುತ್ತಾರೆ. ಗಂಗಾವತಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಿಗೆ ಬೆಂಬಲಿಸಿ ನನ್ನ ವಿರುದ್ಧ ಮಸಲತ್ತು ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಇವರ ಕುತುಂತ್ರದ ಬಣ್ಣ ಬಯಲು ಮಾಡಲು ನಾನು ಸಿದ್ಧನಿದ್ದೇನೆ. ಮುಂದಿನ ದಿನಗಳಲ್ಲಿ ಕೇಲವ ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಅಲ್ಲ ರಾಜ್ಯಾದ್ಯಂತ ನಮ್ಮ ಬೆಂಬಲಿಗರು ಮತ್ತು ಮುಸ್ಲಿಂ ಸಮಾಜಕ್ಕೆ ಹಿಟ್ನಾಳ್ ಕುಟುಂಬ, ತಂಗಡಗಿ ಮತ್ತು ರಾಯರೆಡ್ಡಿ ಮಾಡಿರುವ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಇಂದು ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಜನತೆ ಮತ್ತು ಫಲಾನನುಭವಿಗಳು ಹೋಗಿಬನ್ನಿ. ಆದರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರನ್ನು ನಂಬಬೇಡಿ. ಜಿಲ್ಲೆಯ ಕಾಂಗ್ರೆಸ್ ಜನಪ್ರತಿನಿಧಿಗಳನ್ನು ಯಾವತ್ತು ನಂಬಬೇಡಿ ಎಂದು ಸಚಿವ ತಂಗಡಗಿ, ಸಂಸದ, ಶಾಸಕ ಹಿಟ್ನಾಳ್ ಸಹೋದರರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ವಿರುದ್ಧ ಏಕ ವಚನದಲ್ಲಿ ಅನ್ಸಾರಿ ಆಕ್ರೊಶ ಹೊರ ಹಾಕಿರುವುದು ಇಂದು ಕೊಪ್ಪಳದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಕಪ್ಪು ಚುಕ್ಕೆಯಾಗಿದೆ.
ಬಾಕ್ಸ್:
ಸಿಎಂ ಕಾರ್ಯಕ್ರಮಕ್ಕೆ ಹೋಗಿ ಬನ್ನಿ
ಆದರೆ ಕಾಂಗ್ರೆಸ್ ಮುಖಂಡರನ್ನು ನಂಬಬೇಡಿ
ಇಂದು ಕೊಪ್ಪಳದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ನನ್ನ ಬೆಂಬಲಿಗ ಕಾರ್ಯಕರ್ತರು ಹೋಗಿ ಬನ್ನಿ. ಆದರೆ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಸದ, ಶಾಸಕ, ಸಚಿವ ಹಾಗೂ ಸಿಎಂ ಆರ್ಥಿಕ ಸಲಹೆಗಾರನನ್ನು ನಂಬಬೇಡಿ. ಅವರೆಲ್ಲರೂ ಮೋಸಗಾರರು. ನನಗೆ ನೇರವಾಗಿ ಇವರೆಲ್ಲರೂ ಸೇರಿ ಮೋಸ ಮಾಡಿದ್ದಾರೆ. ಮತ್ತು ಇಂದಿನ ಕಾರ್ಯಕ್ರಮಕ್ಕೆ ನನಗೆ ಮಾಹಿತಿ ನೀಡಿಲ್ಲ.
ಇಕ್ಬಾಲ್ ಅನ್ಸಾರಿ, ಮಾಜಿ ಸಚಿವ, ಗಂಗಾವತಿ.

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿವಶರಣಪ್ಪಗೌಡ್ರ ಪಾಟೀಲ್ ನಿಧನ.