

14th January 2026

ಕೊಪ್ಪಳ.
ಜಿಪಂ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಬರುವ ವಿವಿಧ ಯೋಜನೆಗಳ ಅನುಷ್ಟಾನದ ಪ್ರಗತಿಯನ್ನು ಪರಿಶೀಲಿಸಲು ಕರ್ನಾಟಕ ಗ್ರಾಮ ಸ್ವರಾಜ ಮತ್ತು ಪಂಚಾಯತ್ ರಾಜ್( ಜಿಲ್ಲಾ ಯೋಜನಾ ಸಮಿತಿಯ) ಜಿಲ್ಲೆಯ ಪುರಸಭೆ ಮತಕ್ಷೇತ್ರಗಳ ನಗರ ಮತ್ತು ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳ ಸದಸ್ಯರಲ್ಲಿ ಆರು ಜನ ಸದಸ್ಯರನ್ನು ಯೋಜನಾ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ನಾಲ್ಕು ಜನ ಬಿಜೆಪಿ ಮತ್ತು ಇಬ್ಬರು ಕಾಂಗ್ರೆಸ್ ಸದಸ್ಯರು ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಲ್ಲಿ ಅತೀ ಹೆಚ್ಚು ಮತದಾರ ಸದಸ್ಯರು ಕಾಂಗ್ರೆಸ್ ಪಕ್ಷದಲ್ಲಿದ್ದರೂ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಮತ್ತು ಮಂಡಲ ಬಿಜೆಪಿ ಮುಖಂಡರಿಗೆ ಹರ್ಷವಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರಿಗೆ ಸೋಲಿನ ಮುಜುಗರ ಎದುರಿಸುವಂತಾಗಿದೆ.
ಮಂಗಳವಾರ ಜಿಲ್ಲಾಡಳಿತ ಭವನದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ಚುನಾವಣೆಯ ಮತದಾನ ಪ್ರಕ್ರೀಯೆ ನಂತರ ಸಂಜೆ ಸದಸ್ಯರ ಆಯ್ಕೆಯನ್ನು ಪ್ರಕಟಿಸಲಾಯಿತು. ಜಿಲ್ಲೆಯ ಕಾರಟಗಿ ಪುರಸಭೆ, ಭಾಗ್ಯನಗರ, ಕುಕನೂರು, ಕನಕಗಿರಿ ಮತ್ತು ತಾವರಗೇರಿ ಪಟ್ಟಣ ಪಂಚಾಯತ್ನಲ್ಲಿರುವ ಒಟ್ಟು ೯೪ ಸದಸ್ಯರು ಮತದಾರರಾಗಿದ್ದು, ಆರು ಸ್ಥಾನದ ಆಯ್ಕೆ ನಡೆಸಲಾಗಿದೆ. ಆರು ಸ್ಥಾನಕ್ಕೆ ೧೧ ಜನ ಸ್ಪರ್ಧೆ ಮಾಡಿದ್ದರು. ವಿಶೇಷವಾಗಿ ೯೪ ಸದಸ್ಯರ ಪೈಕಿ ೫೬ ಅತಿ ಹೆಚ್ಚು ಮತದಾರರು ಕಾಂಗ್ರೆಸ್ ಪಕ್ಷದವರಾಗಿದ್ದರೂ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಸದಸ್ಯರು ಅತಿ ಹೆಚ್ಚು ಮತ ಪಡೆದು ಗೆಲುವು ಸಾಧಿಸಿದ್ದಾರೆ. ಆದರೆ ಕಾಂಗ್ರೆಸ್ಸಿನ ಇಬ್ಬರು ಮಾತ್ರ ಆಯ್ಕೆಯಾಗಿರುವುದು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿಡಿತ ಕಡಿಮೆಯಾಗುತ್ತಿರುವುದು ಗೋಚರವಾಗುತ್ತಿದೆ.
ಆರು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಭಾಗ್ಯನಗರ ಪಂಪ ಸದಸ್ಯ ಪರಶುರಾಮನಾಯಕ(೪೬ ಮತ) ಕುಕನೂರು ಪಂಪಂನ ಬಾಲರಾಜ ಗಾಳಿ(೪೯ಮತ) ತಾವರಗೇರಿ ಪಂಪಣ ಶಿವನಗೌಡ(೪೬ಮತ) ಮತ್ತು ಕಾರಟಗಿ ಪುರಸಭೆಯ ಬಿಜೆಪಿ ಸದಸ್ಯ ಸೋಮಶೇಖರಪ್ಪ ಬೆರಿಗಿ (೫೧ ಮತ) ಗೆಲುವು ಸಾಧಿಸಿದ್ದರೆ. ಕಾಂಗ್ರೆಸ್ ಪಕ್ಷದ ಕಾರಟಗಿ ಪುರಸಭೆಯ ಈಶಪ್ಪ ಇಟ್ಟಂಗಿ (೪೬ಮತ) ಮತ್ತು ಕನಕಗಿರಿ ಪಂಪಂನ ಸಿದ್ಧೇಶಕುಮಾರ ಕಲಬಾಲುಮಠ (೫೪ ಮತ)ಗೆಲುವು ಸಾಧಿಸಿದ್ದಾರೆ.
ಚುನಾವಣೆ ಫಲಿತಾಂಶ ಹೊರ ಬರುತ್ತಿದ್ದಂತೆ ಬಿಜೆಪಿ ಮುಖಂಡರು ಜಿಲ್ಲಾಡಳಿತ ಕಚೇರಿ ಬಿಜೆಪಿ ಸದಸ್ಯರ ವಿಜಯೋತ್ಸವದಲ್ಲಿ ಎಂಎಲ್ಸಿ ಹೇಮಲತಾ ನಾಯಕ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ಹಾಲಪ್ಪ ಆಚಾರ, ಬಿಜೆಪಿ ಮುಖಂಡ ಡಾ.ಬಸವರಾಜ.ಕೆ ಮತ್ತಿತರ ಮುಖಂಡರು ಹರ್ಷ ವ್ಯಕ್ತಪಡಿಸಿದರು.
ಆರು ಜನ ಸದಸ್ಯರು ತಮ್ಮ ಪಕ್ಷದವರೇ ಆಯ್ಕೆಯಾಗುವ ಅವಕಾಶವಿದ್ದರೂ ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರ ನಿರ್ಲಕ್ಷದಿಂದ ಸೋಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.
ಬಾಕ್ಸ್:
ಕಾಂಗ್ರೆಸ್ ಪಕ್ಷದ ದುರಾದುಷ್ಟ
ಕಾಂಗ್ರೆಸ್ ಪಕ್ಷದಲ್ಲಿ ಜಿಲ್ಲಾ ಉಸ್ತುವಾರಿ, ಸಂಸದರು, ಶಾಸಕರು ಇದ್ದು, ಐದು ಸ್ಥಳೀಯ ಸಂಸ್ಥೆಯಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಪಕ್ಷದ ಸದಸ್ಯರು ಇದ್ದರೂ ಸಹ ಜಿಲ್ಲಾ ಅನುಷ್ಟಾನ ಸಮಿತಿ ಸದಸ್ಯರ ಚುನಾವಣೆಯ ಆರು ಸ್ಥಾನದಲ್ಲಿ ಕೇವಲ ಇಬ್ಬರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷದ ದುರಾದುಷ್ಟಕರ ಸಂಗತಿಯಾಗಿದೆ. ಮೂರು ಭಾರಿ ಶಾಸಕರಾಗಿ ಈಗ ಜಿಲ್ಲಾಧ್ಯಕ್ಷರಾಗಿರುವ ಅಮರೇಗೌಡ ಬಯ್ಯಾಪುರ, ಸಚಿವ ತಂಗಡಗಿ, ಸಂಸದ, ಶಾಸರಕಾಗಿರುವ ಹಿಟ್ನಾಳ್ ಸಹೋದರರು ಜಿಲ್ಲಾ ಕಾಂಗ್ರೆಸ್ಸಿಗೆ ಶಕ್ತಿ ತುಂಬುವಲ್ಲಿ ನಿರ್ಲಕ್ಷ ಮಾಡಿದ್ದಾರೆ. ಈ ಸೋಲು ಪಕ್ಷಕ್ಕೆ ಮುಜುಗರವಾಗಿದೆ.
ಚಂದ್ರಶೇಖರ ನಾಲತ್ವಾಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕುಷ್ಟಗಿ.
undefined

ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ- ಕಾಂಗ್ರೆಸ್ಸಿಗೆ ಸೋಲು: ಚಂದ್ರಶೇಖರ ನಾಲತ್ವಾಡ ವಿಷಾದ- ಸುಲಭ ಗೆಲುವ ಮರೆತ ನಾಯಕರು: ಕಾಂಗ್ರೆಸ್ಸಿಗೆ ಹಿನ್ನಡೆ

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ