

5th January 2025

ಬಾಯಿ ಚಪಲಕ್ಕೆ ಮಾತನಾಡುವ ಕುಮಾರಸ್ವಾಮಿ-ಎನ್.ಚಲುವರಾಯಸ್ವಾಮಿ ವಾಗ್ದಾಳಿ
ಮಂಡ್ಯ: ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ಆದವರು ಮಾತನಾಡಿದರೆ ನಾವುಗಳು ತಡಕಾಡುವಂತದಾದಾಗ ನಮಗೆ ಸಂತೋಷವಾಗುತ್ತದೆ. ಕುಮಾರಸ್ವಾಮಿ ಅವರು ಚಪಲಕ್ಕೆ ಮಾತನಾಡುತ್ತಾರೆ. ಕುಮಾರಸ್ವಾಮಿ ಅವರು ಚಪಲಕ್ಕೆ ಮಾತನಾಡುತ್ತಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.
ತಾಲೂಕಿನ ಕೆರಗೋಡು ಗ್ರಾಮದಲ್ಲಿ ವೃತ್ತ ನಿರೀಕ್ಷಕರ ನೂತನ ಕಛೇರಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಉನ್ನತ ಹುದ್ದೆಗಳನ್ನು ಅಲಂಕರಿಸಿದ ಅವರು ಮಾತನಾಡಿದರೆ ಅವರಿಗೆ ಉತ್ತರ ನೀಡಲು ತಿಳಿದವರ ಸಲಹೆ ಪಡೆಯುವಂತಿರಬೇಕು. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡಬೇಕು ಎಂದೆನಿಸುವುದಿಲ್ಲ ಎಂದರು.
ಅಂಬೇಡ್ಕರ್ ಅವರು ನೀಡಿದ ಸಂವಿಧಾನದಡಿಯಲ್ಲಿ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ಕಾರ ನಡೆಸಲು ಜನರ ತೀರ್ಮಾನವೇ ಅಂತಿಮ. ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಗೆಲುವು ಸರ್ಕಾರದ ಮೇಲಿನ ಅವಿಶ್ವಾಸವೋ, ಅಥವಾ ಅವರ ಬಾಯಿ ಚಪಲವೋ ತಿಳಿಸಬೇಕು ಎಂದು ಚಿವುಟಿದರು.
ಜಿಲ್ಲೆಯ ಲೋಕಸಭಾ ಸದಸ್ಯರಾಗಿ, ಕೇಂದ್ರ ಮಂತ್ರಿಯಾಗಿ ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಆಗ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡಲು ಹೆಮ್ಮೆ ಎನಿಸುವುದು. ಉದಾಸೀನ ಹೇಳಿಕೆಗಳ ಮೂಲಕ ಸರ್ಕಾರವನ್ನು ಹಾಗೂ ಇತರರನ್ನು ಟೀಕಿಸುವುದೇ ನಾಯಕತ್ವ ಎನಿಸಿಕೊಳ್ಳುವಂತೆ ಮಾತನಾಡುತ್ತಾರೆ ಎಂದು ಕುಟುಕಿದರು.
*ಸುಮಲತ ಕುಳಿತ ಕಾರಿನಲ್ಲಿ ನಾನು ಕೂರಲ್ಲ ಎನ್ನಲು ಕಾರಣ ಗೊತ್ತಿಲ್ಲ*
ಕಾರು ನೀಡಿಲ್ಲವೆಂದು ಹೇಳಿಕೆ ನೀಡಿದ್ದು, ನಾನು ಲೋಕಸಭಾ ಸದಸ್ಯನಾಗಿದ್ದ ವೇಳೆ ಹಿಂದೆ ಲೋಕಸಭಾ ಸದಸ್ಯರು ಬಳಸುತ್ತಿದ್ದ ಕಾರನ್ನು ಬಳಸಿದ್ದೆ, ರಾಜ್ಯ ಸರ್ಕಾರದಲ್ಲಿ ಹಿಂದಿನ ಸರ್ಕಾರದ ಮಂತ್ರಿಗಳು ಬಳಸುತ್ತಿದ್ದ ಕಾರುಗಳನ್ನೇ ಬಳಸುತ್ತಿದ್ದೇವೆ. ಹೊಸ ಕಾರು ಬರುವವರೆಗೂ ಸುಮಲತ ಅವರಿಗೆ ನೀಡಿದ್ದ ಕಾರನ್ನು ಬಳಸಬಹುದಿತ್ತು. ಮಾಜಿ ಸಂಸದೆ ಸುಮಲತ ಬಳಸುವ ಕಾರು ಬಳಸೊಲ್ಲ ಎಂದಿರುವುದಕ್ಕೆ ಕಾರಣ ತಿಳಿದಿಲ್ಲ ಎಂದರು.
ಸುಮಲತ ಅವರು ಸಂಸದರಾಗಿದ್ದರು. ಅವರ ಸ್ವಂತ ಕಾರಾಗಿರಲಿಲ್ಲ. ಅವರು ಕೂತ ಕಾರಿನಲ್ಲಿ ನಾನು ಕೂರಲ್ಲ, ನನಗೆ ಅವಶ್ಯಕತೆಯಿಲ್ಲ ಎಂದು ಅವರು ಹೇಳಲು ಏನು ಕಾರಣ ತಿಳಿದಿಲ್ಲ, ಲೋಕಸಭಾ ಸದಸ್ಯರಿಗೆ ನೀಡಿರುವ ಕಾರನ್ನೇ ಅವರ ಬಳಸಬೇಕು. ಅವರು ಕೇಂದ್ರದ ಮಂತ್ರಿಯಾಗಿದ್ದು, ಯಾವುದೇ ರಾಜ್ಯಕ್ಕೆ ಹೋದರೂ ಅಲ್ಲಿನ ಡಿಪಿಆರ್ನಂತೆ ಕಾರು ಒದಗಿಸಲಾಗುವುದು. ಇದನ್ನು ಅರ್ಥೈಸಿಕೊಳ್ಳಬೇಕೆಂದು ಹೇಳಿದರು.
ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ ಸಹಾಯ ಪಡೆಯದೇ ಇರುವವರು ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾರಾದರೂ ಸತ್ಯವಂತ ಇದ್ದರೆ ಅದು ಕುಮಾರಸ್ವಾಮಿ ಮಾತ್ರ ಎಂದು ವ್ಯಂಗ್ಯವಾಡಿದರು.
ಶ್ರೀರಂಗಪಟ್ಟಣದಿಂದ ಹುಣಸೂರು, ಶ್ರೀರಂಗಪಟ್ಟಣದಿಂದ ಬೀದರ್ ರಾಷ್ಟ್ರೀಯ ಹೆದ್ದಾರಿ ರಸ್ತೆಯೂ ರಾಜ್ಯ ಸರ್ಕಾರದಿಂದ ಮಂಜೂರಾಗಿದೆ. ಅಂತೆಯೇ ಕೇಂದ್ರ ಪರಿಸ್ಕೃತ ಯೋಜನೆಯಡಿ ಎಲ್ಲ ರಾಜ್ಯದ ರಸ್ತೆ ಅಭಿವೃದ್ಧಿ ಮಾಡುವಂತೆ ನಮ್ಮ ರಾಜ್ಯಕ್ಕೆ ಬರಬೇಕಾದ ಯೋಜನೆಗೆ ಅವರು ತಮ್ಮದೇ ಕೊಡುಗೆ ಎಂದರೆ ಹೇಗೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಕುಮಾರಸ್ವಾಮಿ ಅವರಿಗೆ ಸಾಧ್ಯವಾದಲ್ಲಿ ಜಿಲ್ಲೆಯಲ್ಲಿ ಪಾಂಡವಪುರದಿಂದ ಚನ್ನರಾಯಪಟ್ಟಣ ರಸ್ತೆ, ಮಂಡ್ಯದಿಂದ ಪ್ರವಾಸಿ ತಾಣ ಮೇಲುಕೋಟೆ ರಸ್ತೆ, ಮಂಡ್ಯದಿಂದ ನಾಗಮಂಗಲ ಮೂಲಕ ಕದಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಗೆ ಬದಲಿಸುವರೋ, ವಿಶೇಷ ಅನುದಾನ ತರುವರೋ ಅಭಿವೃದ್ಧಿ ಮಾಡಿದರೆ ಕುಮಾರಸ್ವಾಮಿ ಅವರನ್ನು ಹೊಗಳಿ, ಸನ್ಮಾನ ಮಾಡುತ್ತೇನೆ ಎಂದು ಮನವಿ ಮಾಡಿದರು.
ಇಂದು ಮಂಡ್ಯಕ್ಕೆ ಕೃಷಿ ವಿವಿ, ನೂತನ ಮೈಷುಗರ್ ಕಾರ್ಖಾನೆ ಘೋಷಣೆಯನ್ನು ಸಂಪುಟದ ಮುಂದೆ ತರುತಿದ್ದು ಇಂತಹ ಯಾವುದಾದರು ಅಭಿವೃದ್ಧಿಯನ್ನು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಲಿಲ್ಲ. ಈಗ ಕೇಂದ್ರದ ಮಂತ್ರಿಯಾಗಿದ್ದು, ಇಂತಹ ಹತ್ತು ಅಭಿವೃದ್ಧಿ ಕೆಲಸಗಳನ್ನು ಜಿಲ್ಲೆಗೆ ತರಬಹುದು ಮಾಡಿದರೆ ಅವರನ್ನು ಅಭಿನಂದಿಸುತ್ತೇನೆ ಎಂದರು.
ಕಳೆದ ೧೦ ವರ್ಷಗಳಿಂದ ಕೇಂದ್ರ ಸರ್ಕಾರದಿಂದಲೇ ಹಲವು ವಸ್ತುಗಳ, ದಿನ ಬಳಕೆಯ ವಸ್ತುಗಳು, ಪೆಟ್ರೋಲ್- ಡೀಸೆಲ್ ದರ ಹೆಚ್ಚಾಗಿದೆ. ೭ನೇ ಹಣಕಾಸು ಯೋಜನೆ ಜಾರಿಯಾಗಿದೆ. ಹಾಗೂ ನೆರೆ ರಾಜ್ಯಗಳಲ್ಲಿ ಬಸ್ ದರ ನಮಗಿಂತಲೂ ಹೆಚ್ಚಿದೆ. ಅಲ್ಲದೇ ಕೆಎಸ್ಆರ್ಟಿಸಿ ಸಂಸ್ಥೆಯ ದರ ಪರಿಷ್ಕರಣೆ ಮಾಡಿ ೧೫ ವರ್ಷಗಳಾಗಿವೆ. ಇಂದಿಗೂ ಶೇ.೧೫ರಷ್ಟು ಹೆಚ್ಚಳ ಮಾಡಿದರು ನೆರ ರಾಜ್ಯಗಳಿಗಿಂತಲೂ ಕಡಿಮೆ ಇದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಈ ವೇಳೆ ಶಾಸಕ ರವಿಕುಮಾರ್ಗೌಡ ಇದ್ದರು

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..

ಎಸ್ಐಆರ್ ವಿಚಾರದಲ್ಲಿ ರಾಯರೆಡ್ಡಿಗೆ ತಿಳುವಳಿಕೆ ಕೊರತೆ- ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣ ಟಾಂಗ್- ಎಸ್ಐಆರ್ ಮೇಲ್ವಿಚಾರಣೆ ರಾಜ್ಯದ ಹೊಣೆ ಎಂಬುದು ಅರಿಯಲಿ