

7th January 2025

30 ಕೋಟಿರೂನಲ್ಲೆ ಕಾಮಗಾರಿ ಮುಗಿಸಲು ಗುತ್ತಿಗೆದಾರನಿಗೆ ಯಾವ ಒತ್ತಡವಿದೆಯೋ ತಿಳಿಯದು: ಎನ್ ಚಲುವರಾಯಸ್ವಾಮಿ
ಪಾಂಡವಪುರ: 42 ಕೋಟಿ ರೂ ತಗಲುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶೇ 30ರಷ್ಟು ಕಡಿತಗೊಳಿಸಿ ಕೇವಲ 30 ಕೋಟಿ ರೂ ನಲ್ಲಿ ಕಾಮಗಾರಿ ಮಾಡಲು ಗುತ್ತಿಗೆದಾರ ಹೇಗೆ ತಯಾರಾದರೂ ಎಂದು ತಿಳಿಯದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಾರ್ಮಿಕವಾಗಿ ನುಡಿದರು.
ಪಾಂಡವಪುರ ತಾಲೂಕಿನ ಸಹಕಾರ ಸಕ್ಕರೆ ಕಾರ್ಖಾನೆ ಮುಂಭಾಗ 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ - ಕಿರಂಗೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಕಡಿಮೆ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡುವ ಗುತ್ತಿಗೆದಾರನಿಗೆ ಯಾವ ಒತ್ತಡವಿದೆಯೋ ತಿಳಿಯದು. ಉತ್ತಮ ರಸ್ತೆ ನಿರ್ಮಾಣ ಮಾಡಲಿ ಎಂಬ ಆಶಯ ನಮ್ಮದು ಎಂದು ಹೇಳಿದರು.
ಈಗಾಗಲೇ ಮಂಡ್ಯ ಸಂಸದರೂ ಆದ ಕೇಂದ್ರ ಸಚಿವರು ಗುದ್ದಲಿ ಪೂಜೆ ನೆರವೇರಿಸಿದ್ದು, ಸಮಯ ಅಭಾವದಿಂದ ಭಾಗವಹಿಸಲು ಸಾಧ್ಯವಾಗಿಲ್ಲ, ಆದ್ದರಿಂದ ಇಂದು ಗುದ್ದಲಿ ಪೂಜೆ ನೆರೆವೆರಿಸಿದ್ದೇವೆ ಎಂದರು.
ಬಹಳ ವರ್ಷಗಳಿಂದ ಹದಗೆಟ್ಟಿದ್ದ ಬನಘಟ್ಟ - ಕಿರಂಗೂರು ರಸ್ತೆಯಲ್ಲಿ ಜನಸಾಮಾನ್ಯರು ಇದುವರೆಗೂ ಅನುಭವಿಸುತ್ತಿದ್ದ ಟ್ರಾಫಿಕ್ ಸಮಸ್ಯೆ ಹಾಗೂ ಅಪಘಾತಗಳನ್ನು ತಪ್ಪಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿಯ ವಾಹನ ಸಂಚಾರ ಹೆಚ್ಚಿರುತ್ತದೆ ಹಾಗಾಗಿ ಉತ್ತಮ ರಸ್ತೆ ನಿರ್ಮಾಣ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ ಬನಘಟ್ಟದಿಂದ ಕಿರಂಗೂರು ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸುವ ಸಲುವಾಗಿ ಸರ್ಕಾರವು ಗುಣಮಟ್ಟದ ರಸ್ತೆ ಕಾಮಗಾರಿಗೆ 30 ಕೋಟಿ ರೂ ಅನುಮೋದನೆ ನೀಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ ಎಂದರು
ಸಭೆಯಲ್ಲಿ ಮನ್ ಮುಲ್ ಅಧ್ಯಕ್ಷ ಬೋರೆ ಗೌಡ, ಮುಖಂಡರಾದ ತ್ಯಾಗರಾಜ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*