

7th January 2025

ಪಾಂಡವಪುರ: ನಮ್ಮ ಸರ್ಕಾರ ರೈತಪರ ಸರ್ಕಾರ, ರೈತರ ಮೇಲೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳು ತುರ್ತಾಗಿ ವಿಲೇವಾರಿ ಮಾಡಿ ಎಂದು ಸೂಚನೆ ನೀಡಿದ್ದೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಜಿಲ್ಲಾಯ ಪ್ರವಾಸಿ ತಾಣ ಮೇಲುಕೋಟೆಯಲ್ಲಿ ನಿರ್ಮಿಸಲಾಗಿದ್ದ ನೂತನ ನಾಡ ಕಚೇರಿ ಕಟ್ಟಡವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಜಿಲ್ಲೆಯ ಇದ್ದ ಹತ್ತು ಸಾವಿರ ಪ್ರಕರಣಗಳನ್ನು ಒಂದೇ ವರ್ಷದಲ್ಲಿ ಇತ್ಯಾರ್ಥಗೊಳಿಸಿದ್ದೇವೆ. ರಾಜ್ಯದಾದ್ಯಂತ ಈ ಆಂದೋಲನ ಮುಂದುವರೆಯಲಿದೆ ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ನೂರು ಒನ್ ಟು ಫೈ ಸೇವೆ ಒದಗಿಸುವುದು ಕಷ್ಟವಾಗಿತ್ತು ಆದರೆ ಕಂದಾಯ ಇಲಾಖೆ ಸಚಿವರ ಮತ್ತು ಜಿಲ್ಲಾಡಳಿತ ಸಹಕಾರದಿಂದ ಒಂದೇ ವಾರದಲ್ಲಿ 270 ಕ್ಕೂ ಹೆಚ್ಚು ಒನ್ ಟು ಫೈವ್ ಮಾಡಿ, ಸ್ಕೇಚ್, ಪೋಡಿ, ಆಕಾರಬಂಧು ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡಲಾಗಿದೆ. ಇನ್ನು ಆರು ತಿಂಗಳಲ್ಲಿ ಬಾಕಿ ಇರುವ ಒನ್ ಟು ಫೈವ್ ಸಮಸ್ಯೆ ಇತ್ಯಾರ್ಥಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ನಾಡ ಕಚೇರಿಯಲ್ಲಿ ಭ್ರಷ್ಟಾಚಾರ ನಿಲ್ಲಿಸಲು ಜನತೆಯ ಸಹಕಾರ ಅಗತ್ಯ. ಜನರು ಅಧಿಕಾರಿಗಳ ಮೇಲೆ ಒತ್ತಡ ಹೇರುವುದನ್ನು ಕಡಿಮೆ ಮಾಡಬೇಕು. ಸರ್ಕಾರದೊಂದಿಗೆ ಸಹಕಾರಿದರೆ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ವೇಗವಾಗಿ ನಡೆಯುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಉಪವಿಭಾಗಾಧಿಕಾರಿ ಶ್ರೀನಿವಾಸ್, ಮನ್ ಮುಲ್ ನಿರ್ದೇಶಕ ನಾಗಚಂದ್ರ, ತ್ಯಾಗರಾಜು, ಭಾಗ್ಯಮ್ಮ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..