

7th January 2025

ಕೆಆರ್ ಎಸ್: ನಮ್ಮ ಬ್ರದರ್ ಗೆ ನಮ್ಮ ಸರ್ಕಾರ ನೋಡಲು ಆಗುತ್ತಿಲ್ಲ ಸರ್ಕಾರ ರಚನೆಯಾದ ನಂತರ ನಮ್ಮ ಬ್ರದರ್ ಸಂಕಟ ಪಡುತ್ತಿದ್ದಾರೆ. ಅವರಿಗೆ ಯಾರಾದರೂ ಸಮಾಧಾನ ಹೇಳುವವರು ಇದ್ದರೇ ಹೇಳಿ ಎಂದು ವ್ಯಂಗ್ಯವಾಡಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಎಸ್ ನಲ್ಲಿ ನಡೆದ ಐಸಿಸಿ ಸಭೆ ನಂತರ ಅವರು ಮಧ್ಯಮಗಳ ಜೊತೆ ಅವರು ಮಾತನಾಡಿದರು.
ಸರ್ಕಾರ ಬೀಳುತ್ತೆ, ತೆಗೆಯುತ್ತೇವೆ ಎನ್ನುವುದು ಒಳ್ಳೆಯದಲ್ಲ. ಇನ್ನು ಮೂರುವರೆ ವರ್ಷ ಸರ್ಕಾರ ಇದೇ ರೀತಿ ಇರುತ್ತದೆ. ನಮ್ಮನ್ನು ನೋಡಿ ಅವರಿಗೆ ಸಂಕಟ ಬರುತ್ತದೆ. ಇದಕ್ಕೆ ನಮ್ಮ ಬಳಿ ಮೆಡಿಸಿನ್ ಇಲ್ಲ ಎಂದು ಕುಮಾರಸ್ವಾಮಿ ಹೆಸರೇಳದೆ ಪರೋಕ್ಷವಾಗಿ ಟಾಂಗ್ ಕೊಟ್ಟರು.
ಬ್ರದರ್ ವಿರುದ್ಧ ನಾವು ಯಾವತ್ತು ಮಾತನಾಡಿಲ್ಲ. ಅವರು ಸಿಎಂ ಆದಾಗಲೂ ಅವರ ವಿರುದ್ದ ಮಾತನಾಡಿಲ್ಲ. ಆದರೆ ನಮ್ಮನ್ನು ಅವರಿಂದ ಸಹಿಸಲು ಆಗುತ್ತಿಲ್ಲ. ಇನ್ನೋಬ್ಬರನ್ನ ನೋಡಿ ಅಸೂಯೆ ಪಡಬಾರದು. ನಾನು ಎಂದಿಗೂ ಅವರನ್ನ ನನ್ನ ಸ್ನೇಹಿತ, ಬ್ರದರ್ ಅಂತಾನೇ ಹೇಳುತ್ತೇನೆ ಎಂದು ಮರ್ಮಿಕವಾಗಿ ನುಡಿದರು.
ರಾಜ್ಯದಲ್ಲಿ ಸಿಎಂ ಆದವರೂ ಕೇಂದ್ರದಲ್ಲಿ ಮಂತ್ರಿ ಆಗಿದ್ದರೂ ಅವರಿಗೆ ಸಮಾಧಾನವಿಲ್ಲ. ಚನ್ನಪಟ್ಟಣ ಉಪಚುನಾವಣೆ ಮಗನ ಪರ ಓಟ್ ಕೇಳಲಿಲ್ಲ
ಬರಿ ಸರ್ಕಾರದ ವಿರುದ್ಧ ಮಾತನಾಡಿದರು. ಈಗಲೂ ಚನ್ನಪಟ್ಟಣದಲ್ಲಿ ಇದನ್ನ ಅವರ ಪಕ್ಷದವರೇ ಆಡಿಕೊಳ್ಳುತ್ತಿದ್ದಾರೆ ಎಂದು ಕುಟುಕಿದರು.
ಈ ವೇಳೆ ಶಾಸಕರಾದ ರಮೇಶ್ ಬಾಬು ಬಂದಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ ಸೇರಿದಂತೆ ಕೆಆರ್ ಎಸ್ ಅಧಿಕಾರಿಗಳು ಇದ್ದರು.

ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಆಯ್ಕೆ

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ