

8th January 2025

ಜ.10 ರಂದು ಮದ್ದೂರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
19 ಕೆರೆಗಳಿಗೆ ನೀರು ತುಂಬಿಸಿದ್ದಕ್ಕೆ ಚಾಕನಕೆರೆಗೆ ಬಾಗಿನ ಸಮರ್ಪಣೆ
ನವದೆಹಲಿ: ಮದ್ದೂರು ವಿಧಾನಸಭೆ ಕ್ಷೇತ್ರದ 19 ಕೆರೆಗಳಿಗೆ ನೀರು ತುಂಬಿಸಿದ ಹಿನ್ನಲೆಯಲ್ಲಿ ಶುಕ್ರವಾರದಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಕನಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿ.ಸಿ.ತಮ್ಮಣ್ಣ ಅವರು, ಅಂದು ಬೆಳಗ್ಗೆ 11 ಗಂಟೆಗೆ ಸ್ಥಳಕ್ಕೆ ಆಗಮಿಸಲಿರುವ ಕೇಂದ್ರ ಸಚಿವರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಲಾಗುವುದು. ಮಧ್ಯಾಹ್ನ 12 ಗಂಟೆ ನಂತರ ಸಚಿವರು ಬಾಗಿನ ಅರ್ಪಿಸುವರು. ಅವರ ಒತ್ತಾಸೆಯಿಂದಲೇ ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಿದೆ ಎಂದಿದ್ದಾರೆ.
ಇದೇ ವೇಳೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಮಹಿಳೆಯರು ಹಾಗೂ ರೈತರನ್ನು ಸನ್ಮಾನಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಸೈಯದ್ ಮೀರಾ ಅಗ್ರಹ- ಕಡೆಗಣಿಸಿದರೆ ಕಾಂಗ್ರೆಸ್ ಗೆ ದೊಡ್ಡ ನಷ್ಟ

ಟಿಎಪಿಸಿಎಂಎಸ್ ಚುನಾವಣೆ: ಸಂದಾನ ಯಶಸ್ವಿ ಅಧ್ಯಕ್ಷರಾಗಿ ಚೆನ್ನಪ್ಪ ಮಳಿಗಿ, ಉಪಾಧ್ಯಕ್ಷರಾಗಿ ಕನಕಪ್ಪ ಆಯ್ಕೆ

ಎಸ್ಐಆರ್ ಸಭೆಗೆ ಗೈರಾದ ಪದಾಧಿಕಾರಿಗಳಿಗೆ ಕಾಂಗ್ರೆಸ್ ಕೊಕ್- ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ ವಜಾ: ಡಿಕೆಶಿ ಆದೇಶ- ಕೆಪಿಸಿಸಿ 3 ಉಪಾಧ್ಯಕ್ಷರು 29 ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಕ್ರಮ