

8th January 2025

ಜ.10 ರಂದು ಮದ್ದೂರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
19 ಕೆರೆಗಳಿಗೆ ನೀರು ತುಂಬಿಸಿದ್ದಕ್ಕೆ ಚಾಕನಕೆರೆಗೆ ಬಾಗಿನ ಸಮರ್ಪಣೆ
ನವದೆಹಲಿ: ಮದ್ದೂರು ವಿಧಾನಸಭೆ ಕ್ಷೇತ್ರದ 19 ಕೆರೆಗಳಿಗೆ ನೀರು ತುಂಬಿಸಿದ ಹಿನ್ನಲೆಯಲ್ಲಿ ಶುಕ್ರವಾರದಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಕನಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿ.ಸಿ.ತಮ್ಮಣ್ಣ ಅವರು, ಅಂದು ಬೆಳಗ್ಗೆ 11 ಗಂಟೆಗೆ ಸ್ಥಳಕ್ಕೆ ಆಗಮಿಸಲಿರುವ ಕೇಂದ್ರ ಸಚಿವರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಲಾಗುವುದು. ಮಧ್ಯಾಹ್ನ 12 ಗಂಟೆ ನಂತರ ಸಚಿವರು ಬಾಗಿನ ಅರ್ಪಿಸುವರು. ಅವರ ಒತ್ತಾಸೆಯಿಂದಲೇ ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಿದೆ ಎಂದಿದ್ದಾರೆ.
ಇದೇ ವೇಳೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಮಹಿಳೆಯರು ಹಾಗೂ ರೈತರನ್ನು ಸನ್ಮಾನಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕುರುಬ ಸಮುದಾಯದ ವಿರುದ್ದ ಹೇಳಿಕೆ ಖಂಡನೀಯ ಸಿ.ಸಿ.ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ರುದ್ರಣ್ಣ ಗುಳಗುಳಿ

ಕಾಂಗ್ರೆಸ್ ಮಹಿಳೆಯರನ್ನು ಗ್ಯಾರಂಟಿಗೆ ಸಿಮೀತಗೊಳಿಸಿದೆ- ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಆರೋಪ

ಮಹಿಳಾ ಮೀಸಲಾತಿಗೆ ವಿರೋಧ: ಹೇಮಲತಾ ನಾಯಕ ಆಕ್ರೋಶ- ಸಾಮಾನ್ಯ ಮಹಿಳೆಯರಿಗೆ ಅಧಿಕಾರ:ಕಾಂಗ್ರೆಸ್ ಅಡ್ಡಿಪಡಿಸಿದೆ

2030ಕ್ಕೆ ಗದಗ ನಗರದಲ್ಲಿ ಸುಸಜ್ಜಿತವಾದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಎಚ್.ಕೆ. ಪಾಟೀಲ