

8th January 2025

ಜ.10 ರಂದು ಮದ್ದೂರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
19 ಕೆರೆಗಳಿಗೆ ನೀರು ತುಂಬಿಸಿದ್ದಕ್ಕೆ ಚಾಕನಕೆರೆಗೆ ಬಾಗಿನ ಸಮರ್ಪಣೆ
ನವದೆಹಲಿ: ಮದ್ದೂರು ವಿಧಾನಸಭೆ ಕ್ಷೇತ್ರದ 19 ಕೆರೆಗಳಿಗೆ ನೀರು ತುಂಬಿಸಿದ ಹಿನ್ನಲೆಯಲ್ಲಿ ಶುಕ್ರವಾರದಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಕನಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿ.ಸಿ.ತಮ್ಮಣ್ಣ ಅವರು, ಅಂದು ಬೆಳಗ್ಗೆ 11 ಗಂಟೆಗೆ ಸ್ಥಳಕ್ಕೆ ಆಗಮಿಸಲಿರುವ ಕೇಂದ್ರ ಸಚಿವರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಲಾಗುವುದು. ಮಧ್ಯಾಹ್ನ 12 ಗಂಟೆ ನಂತರ ಸಚಿವರು ಬಾಗಿನ ಅರ್ಪಿಸುವರು. ಅವರ ಒತ್ತಾಸೆಯಿಂದಲೇ ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಿದೆ ಎಂದಿದ್ದಾರೆ.
ಇದೇ ವೇಳೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಮಹಿಳೆಯರು ಹಾಗೂ ರೈತರನ್ನು ಸನ್ಮಾನಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*