
8th June 2025
ಶುಭೋದಯ ವಾರ್ತೆ ಚೀಟಗುಪ್ಪ : ಬಕ್ರೀದ್ ಮುನ್ನಾದಿನ ಮುಸ್ಲಿಂ ಬಡಾವಣೆಯೊಂದಕ್ಕೆ ಭೇಟಿ ನೀಡಿ ಹಸುಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂದಿಸಿದಂತೆ, ಬಸವಕಲ್ಯಾಣ ಶಾಸಕ ಶರಣು ಸಲಗರ ಅವರ ವಿರುದ್ಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಬಳಿ ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಶುಕ್ರವಾರ ಬಸವಕಲ್ಯಾಣ ನಗರದ ಮುಸ್ಲಿಂ ಬಡಾವಣೆಯೊಂದಕ್ಕೆ ಭೇಟಿ ನೀಡಿ ಅಕ್ರಮವಾಗಿ ಗೋ ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಬಳಿಕ ಪಶು ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಕೊಟ್ಟಿಗೆಯಲ್ಲಿದ್ದ ಹಸುಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಅದರಂತೆ ಅಧಿಕಾರಿಗಳು ಎಲ್ಲ ಹಸುಗಳನ್ನು ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಶಾಸಕ ಶರಣು ಸಲಗರ್ ಅವರು ಬಡಾವಣೆಯಿಂದ ವಾಪಸ್ಸು ಹೋದ ಬಳಿಕ, ಶಾಸಕರ ನಡೆಯನ್ನು ಖಂಡಿಸಿ ನಗರದ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಬಳಿ ಮುಸ್ಲಿಂ ಮುಖಂಡರು ಜಮಾವಣೆಗೊಂಡು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರೊಬ್ಬರು ಮಾತನಾಡಿ, ಪಶು ಇಲಾಖೆಯ ಅಧಿಕಾರಿಗಳು ದನಗಳನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ. ಅದನ್ನು ವಾಪಸ್ಸು ತಂದು ಒಪ್ಪಿಸಬೇಕು. ಸಮುದಾಯದವರು ಯಾರು ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು.ಈ ವೇಳೆ ಮಾತನಾಡಿದ ಡಿವೈಎಸ್ಪಿ ನ್ಯಾಮೇಗೌಡ ಅವರು, ನಾಳೆ ಬಕ್ರೀದ್ ಹಬ್ಬವಿದೆ. ಎಲ್ಲರೂ ಶಾಂತಿಯಿಂದ ಹಬ್ಬ ಆಚರಣೆ ಮಾಡಬೇಕು. ಯಾರದಾದರೂ ತೊಂದರೆ ನೀಡಿದರೆ ನಮ್ಮನ್ನು ಸಂಪರ್ಕಿಸಿ, ನಾವು ನಿಮ್ಮ ರಕ್ಷಣೆಗೋಸ್ಕರ ಸದಾ ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.
ತುಂಗಭದ್ರಾ ಜಲಾಶಯದ ೧೯ನೇ ಗೇಟ್ ಎಲ್ಲಾ ಗೇಟ್ ಗಳ ಜೊತೆ ಮುಂದಿನ ರ್ಷವೇ ಬದಲಾಯಿಸಿ : ದರೂರು ಪುರುಷೋತ್ತಮ್ ಗೌಡ