
13th June 2025
ಜುಮಾಲಾಪುರ್ ತಾಂಡಾ : ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡ
ಅಂತ್ಯಕ್ರಿಯೆ ಸಕಲ ರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು.
ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿರೋದರಿನ ಯೋಧ ಮೃತಪಟ್ಟಿದ್ದರು.
ಮೃತರ ಪರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮದ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ
ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್ ವಾಹನದ ಮೂಲಕ ತರಲಾಯಿತು.
ನಾರಾಯಣಪುರದಿಂದ ಸುಮಾರ ೧೫ ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ. ಜುಮಾಲಾಪುರ್ ತಾಂಡವರೆಗೆ ಪರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ’ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸರ್ವಜನಿಕರು ಪಾಲ್ಗೊಂಡಿದ್ದರು.
ಮೃತ ಯೋಧನ ಪರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬಣಿ ಮಿಡಿದರು.
ಸ್ವಗ್ರಾಮದ ಹೊರವಲಯದಲ್ಲಿ ಸರ್ವಜನಿಕರಿಗೆ ಯೋಧನ ಪರ್ಥಿವ ಶರೀರದ ಅಂತಿಮ ರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಹುಣಸಗಿ ತಶೀಲದಾರರು ಹುಸೇನಾ.ಎ. ರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ. ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್ , ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣ ನವರು ಪೊಲೀಸ್ ಬಂದೋಬಸ್ತಾ ನೀಡಿದರು ಜೊತೆಯಲ್ಲಿ
ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಸಕಲ ರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.
ಸಕಲ ರ್ಕಾರಿ ಗೌರವಗಳೊಂದಿಗೆ ಮೃತ ಯೋಧ ವೆಂಕಟೇಶ ಎಂ ರಾಠೋಡ ಅವರ ಅಂತ್ಯಕ್ರಿಯೆ ನೆರವೇರಿತು. ವರದಿಗಾರ : ಶಿವು ರಾಠೋಡ
ತುಂಗಭದ್ರಾ ಜಲಾಶಯದ ೧೯ನೇ ಗೇಟ್ ಎಲ್ಲಾ ಗೇಟ್ ಗಳ ಜೊತೆ ಮುಂದಿನ ರ್ಷವೇ ಬದಲಾಯಿಸಿ : ದರೂರು ಪುರುಷೋತ್ತಮ್ ಗೌಡ
ಪುದುಚೇರಿ ವಿಧಾನಸಭೆಗಾಗಿ ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್ (ಓeಗಿಂ) ಡಿಜಿಟಲ್ ಪ್ಲಾಟ್ಫರ್ಮ್ ಅನ್ನು ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್ ಉದ್ಘಾಟಿಸಿದರು