

16th May 2026

ಬಳ್ಳಾರಿ, ಮೇ 16: ಮಿತ್ತಲ್ ಉಕ್ಕು ಕಾರ್ಖಾನೆಗಾಗಿ ಹಿಂದೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹಸ್ತಾಂತರಿಸುವ ಕ್ರಮವನ್ನು ವಿರೋಧಿಸಿ ಶನಿವಾರ ಕುಡುತಿನಿಯಲ್ಲಿ ಪ್ರತಿಭಟನೆಗೆ ಮುಂದಾದ ಭೂಸಂತ್ರಸ್ತ ರೈತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉದ್ವಿಗ್ನತೆಗೆ ಕಾರಣವಾಯಿತು.
ಮಿತ್ತಲ್ ಕಂಪನಿಗೆ ನೀಡಿದ್ದ ಜಮೀನಿನತ್ತ ಎತ್ತಿನ ಬಂಡಿಗಳ ಮೂಲಕ ತೆರಳಿ ಸಂಕೇತಾತ್ಮಕವಾಗಿ ಪ್ರವೇಶಿಸುವುದಾಗಿ ಘೋಷಿಸಿದ್ದ ರೈತರು ಬೆಳಗ್ಗಿನಿಂದಲೇ ಕುಡುತಿನಿ ಮತ್ತು ಸುತ್ತಮುತ್ತಲ ಗ್ರಾಮಗಳಿಂದ ಸೇರತೊಡಗಿದರು. ಬಳಿಕ ಬೈಪಾಸ್ ರಸ್ತೆಯ ಮೂಲಕ ಜಮೀನಿನತ್ತ ಹೊರಟಾಗ ಪೊಲೀಸರು ತಡೆದು ನಿಲ್ಲಿಸಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಹೋರಾಟ ಸಮಿತಿಯ ಮುಖಂಡರು ಸೇರಿದಂತೆ ನೂರಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆದು ತೋರಣಗಲ್ಲಿನ ಶಾಲಾ ಮೈದಾನಕ್ಕೆ ಕರೆದೊಯ್ದರು. ಕೆಲ ರೈತರು ಮಾತ್ರ ಸ್ಥಳದಲ್ಲೇ ಧರಣಿ ನಡೆಸಿ ಸರ್ಕಾರ ಹಾಗೂ ಕೆಐಎಡಿಬಿ ವಿರುದ್ಧ ಘೋಷಣೆ ಕೂಗಿದರು.
“ಜಮೀನು ಮರಳಿ ನೀಡಿ ಅಥವಾ ನ್ಯಾಯಯುತ ಪರಿಹಾರ ನೀಡಿ”
ಸುಮಾರು ದಶಕದ ಹಿಂದೆ ಉಕ್ಕು ಕಾರ್ಖಾನೆ ಸ್ಥಾಪನೆ ಉದ್ದೇಶದಿಂದ ಕುಡುತಿನಿ, ತೋರಣಗಲ್ಲು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಲಕ್ಷ್ಮೀ ಮಿತ್ತಲ್ ಕಂಪನಿಗೆ ಸಾವಿರಾರು ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ನಂತರ ಮಿತ್ತಲ್ ಕಂಪನಿ ಯೋಜನೆ ಮುಂದುವರಿಸಲು ಹಿಂದೇಟು ಹಾಕಿತ್ತು.
ಈಗ ಆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹೆಚ್ಚಿನ ದರದಲ್ಲಿ ಹಸ್ತಾಂತರಿಸಲು ಕೆಐಎಡಿಬಿ ಮುಂದಾಗಿದೆ ಎಂಬ ಆರೋಪವನ್ನು ರೈತರು ಮಾಡುತ್ತಿದ್ದಾರೆ. “ಮಿತ್ತಲ್ ಕಂಪನಿ ಕೈಗಾರಿಕೆ ಸ್ಥಾಪಿಸದಿದ್ದರೆ ನಮ್ಮ ಜಮೀನು ಹಿಂದಕ್ಕೆ ನೀಡಬೇಕು. ಅದು ಸಾಧ್ಯವಿಲ್ಲದಿದ್ದರೆ ಇಂದಿನ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ಹೆಚ್ಚಿನ ಪರಿಹಾರ ನೀಡಬೇಕು” ಎಂದು ರೈತರು ಒತ್ತಾಯಿಸಿದರು.
ಹೋರಾಟಗಾರರ ಆಕ್ರೋಶ
“ರೈತರಿಂದ ಕಡಿಮೆ ದರಕ್ಕೆ ಜಮೀನು ಪಡೆದು, ಬಳಿಕ ದೊಡ್ಡ ಕಂಪನಿಗಳಿಗೆ ಲಾಭದಾಯಕ ದರದಲ್ಲಿ ನೀಡುವುದು ಅನ್ಯಾಯ. ಸರ್ಕಾರ ಮತ್ತು ಕೆಐಎಡಿಬಿ ರೈತರ ಭಾವನೆಗಳನ್ನು ನಿರ್ಲಕ್ಷಿಸುತ್ತಿವೆ” ಎಂದು ಹೋರಾಟ ಸಮಿತಿಯ ಮುಖಂಡರು ಆರೋಪಿಸಿದರು.
ಹೋರಾಟ ಸಮಿತಿಯ ಪ್ರಮುಖರಾದ ಯು. ಬಸವರಾಜ್, ಜೆ. ಸತ್ಯಬಾಬು, ಜಂಗ್ಲಿ ಸಾಬ್, ತಿಪ್ಪೆಸ್ವಾಮಿ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೂರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತಿಗೆ ನಿಯೋಜಿಸಲಾಗಿತ್ತು.
ಸ್ಥಳದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆಯಲ್ಲಿ ಕುಡುತಿನಿ–ತೋರಣಗಲ್ಲು ಭಾಗದಲ್ಲಿ ಬೆಳಗ್ಗಿನಿಂದಲೇ ಪೊಲೀಸ್ ವಾಹನಗಳ ಸಂಚಾರ ಹೆಚ್ಚಾಗಿತ್ತು. ಬೈಪಾಸ್ ರಸ್ತೆ ಸೇರಿದಂತೆ ಜಮೀನಿನತ್ತ ಹೋಗುವ ಪ್ರಮುಖ ಮಾರ್ಗಗಳಲ್ಲಿ ತಡೆಗೋಡೆಗಳನ್ನು ಅಳವಡಿಸಲಾಗಿತ್ತು. ರೈತರು ಜಮೀನಿನೊಳಗೆ ಪ್ರವೇಶಿಸದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಬಳ್ಳಾರಿ, ಮೇ 16: ಮಿತ್ತಲ್ ಉಕ್ಕು ಕಾರ್ಖಾನೆಗಾಗಿ ಹಿಂದೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹಸ್ತಾಂತರಿಸುವ ಕ್ರಮವನ್ನು ವಿರೋಧಿಸಿ ಶನಿವಾರ ಕುಡುತಿನಿಯಲ್ಲಿ ಪ್ರತಿಭಟನೆಗೆ ಮುಂದಾದ ಭೂಸಂತ್ರಸ್ತ ರೈತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉದ್ವಿಗ್ನತೆಗೆ ಕಾರಣವಾಯಿತು.
ಮಿತ್ತಲ್ ಕಂಪನಿಗೆ ನೀಡಿದ್ದ ಜಮೀನಿನತ್ತ ಎತ್ತಿನ ಬಂಡಿಗಳ ಮೂಲಕ ತೆರಳಿ ಸಂಕೇತಾತ್ಮಕವಾಗಿ ಪ್ರವೇಶಿಸುವುದಾಗಿ ಘೋಷಿಸಿದ್ದ ರೈತರು ಬೆಳಗ್ಗಿನಿಂದಲೇ ಕುಡುತಿನಿ ಮತ್ತು ಸುತ್ತಮುತ್ತಲ ಗ್ರಾಮಗಳಿಂದ ಸೇರತೊಡಗಿದರು. ಬಳಿಕ ಬೈಪಾಸ್ ರಸ್ತೆಯ ಮೂಲಕ ಜಮೀನಿನತ್ತ ಹೊರಟಾಗ ಪೊಲೀಸರು ತಡೆದು ನಿಲ್ಲಿಸಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಹೋರಾಟ ಸಮಿತಿಯ ಮುಖಂಡರು ಸೇರಿದಂತೆ ನೂರಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆದು ತೋರಣಗಲ್ಲಿನ ಶಾಲಾ ಮೈದಾನಕ್ಕೆ ಕರೆದೊಯ್ದರು. ಕೆಲ ರೈತರು ಮಾತ್ರ ಸ್ಥಳದಲ್ಲೇ ಧರಣಿ ನಡೆಸಿ ಸರ್ಕಾರ ಹಾಗೂ ಕೆಐಎಡಿಬಿ ವಿರುದ್ಧ ಘೋಷಣೆ ಕೂಗಿದರು.
“ಜಮೀನು ಮರಳಿ ನೀಡಿ ಅಥವಾ ನ್ಯಾಯಯುತ ಪರಿಹಾರ ನೀಡಿ”
ಸುಮಾರು ದಶಕದ ಹಿಂದೆ ಉಕ್ಕು ಕಾರ್ಖಾನೆ ಸ್ಥಾಪನೆ ಉದ್ದೇಶದಿಂದ ಕುಡುತಿನಿ, ತೋರಣಗಲ್ಲು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರಿಂದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಲಕ್ಷ್ಮೀ ಮಿತ್ತಲ್ ಕಂಪನಿಗೆ ಸಾವಿರಾರು ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ನಂತರ ಮಿತ್ತಲ್ ಕಂಪನಿ ಯೋಜನೆ ಮುಂದುವರಿಸಲು ಹಿಂದೇಟು ಹಾಕಿತ್ತು.
ಈಗ ಆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಹೆಚ್ಚಿನ ದರದಲ್ಲಿ ಹಸ್ತಾಂತರಿಸಲು ಕೆಐಎಡಿಬಿ ಮುಂದಾಗಿದೆ ಎಂಬ ಆರೋಪವನ್ನು ರೈತರು ಮಾಡುತ್ತಿದ್ದಾರೆ. “ಮಿತ್ತಲ್ ಕಂಪನಿ ಕೈಗಾರಿಕೆ ಸ್ಥಾಪಿಸದಿದ್ದರೆ ನಮ್ಮ ಜಮೀನು ಹಿಂದಕ್ಕೆ ನೀಡಬೇಕು. ಅದು ಸಾಧ್ಯವಿಲ್ಲದಿದ್ದರೆ ಇಂದಿನ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ಹೆಚ್ಚಿನ ಪರಿಹಾರ ನೀಡಬೇಕು” ಎಂದು ರೈತರು ಒತ್ತಾಯಿಸಿದರು.
ಹೋರಾಟಗಾರರ ಆಕ್ರೋಶ
“ರೈತರಿಂದ ಕಡಿಮೆ ದರಕ್ಕೆ ಜಮೀನು ಪಡೆದು, ಬಳಿಕ ದೊಡ್ಡ ಕಂಪನಿಗಳಿಗೆ ಲಾಭದಾಯಕ ದರದಲ್ಲಿ ನೀಡುವುದು ಅನ್ಯಾಯ. ಸರ್ಕಾರ ಮತ್ತು ಕೆಐಎಡಿಬಿ ರೈತರ ಭಾವನೆಗಳನ್ನು ನಿರ್ಲಕ್ಷಿಸುತ್ತಿವೆ” ಎಂದು ಹೋರಾಟ ಸಮಿತಿಯ ಮುಖಂಡರು ಆರೋಪಿಸಿದರು.
ಹೋರಾಟ ಸಮಿತಿಯ ಪ್ರಮುಖರಾದ ಯು. ಬಸವರಾಜ್, ಜೆ. ಸತ್ಯಬಾಬು, ಜಂಗ್ಲಿ ಸಾಬ್, ತಿಪ್ಪೆಸ್ವಾಮಿ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೂರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತಿಗೆ ನಿಯೋಜಿಸಲಾಗಿತ್ತು.
ಸ್ಥಳದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆಯಲ್ಲಿ ಕುಡುತಿನಿ–ತೋರಣಗಲ್ಲು ಭಾಗದಲ್ಲಿ ಬೆಳಗ್ಗಿನಿಂದಲೇ ಪೊಲೀಸ್ ವಾಹನಗಳ ಸಂಚಾರ ಹೆಚ್ಚಾಗಿತ್ತು. ಬೈಪಾಸ್ ರಸ್ತೆ ಸೇರಿದಂತೆ ಜಮೀನಿನತ್ತ ಹೋಗುವ ಪ್ರಮುಖ ಮಾರ್ಗಗಳಲ್ಲಿ ತಡೆಗೋಡೆಗಳನ್ನು ಅಳವಡಿಸಲಾಗಿತ್ತು. ರೈತರು ಜಮೀನಿನೊಳಗೆ ಪ್ರವೇಶಿಸದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿಸಲು ಸಚಿವ ಎಚ್.ಕೆ. ಪಾಟೀಲ ಸೂಚನೆ

ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಸ್ಥಿತಿ ಹದೆಗೆಟ್ಟಿದೆ- ರಾಜೀನಾಮೆ ನೀಡುವಂತೆ ಶಾಸಕ ರಾಯರೆಡ್ಡಿ ಅಗ್ರಹ

ಸಿದ್ಧರಾಮಯ್ಯ ಬಿಟ್ಟರೆ ಸಿಎಂ ಸ್ಥಾನಕ್ಕೆ ಖರ್ಗೆ ಸೂಕ್ತ ವ್ಯಕ್ತಿ- ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ

ವಿಂಡ್ ಪವರ್ ನಿಯಂತ್ರಣ ನನ್ನ ಕೈಯಲ್ಲಿ ಇಲ್ಲ- ರಾಯರೆಡ್ಡಿ ಸ್ಪಷ್ಟನೆ: ಅಗ್ರಿಮೆಂಟ್ ಮಾಡಬಾರದು